• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಡಿಜೆ ಬೇಕೆ ಬೇಕು, ಇಲ್ಲದಿದ್ದರೆ ಗಣೇಶನ ವಿಸರ್ಜನೆ ಮಾಡಲ್ಲ ಎಂದ ಗ್ರಾಮಸ್ಥರು!

Tulunadu News Posted On September 1, 2025
0


0
Shares
  • Share On Facebook
  • Tweet It

ಡಿಜೆ ಬಳಕೆಗೆ ಅನುಮತಿ ನೀಡುವವರೆಗೂ ಮೋಟೆಬೆನ್ನೂರು ಎನ್ನುವ ಊರಿನ ಜನ ಹೊಸ ಹಟವೊಂದನ್ನು ಹಿಡಿದು ಕುಳಿತಿದ್ದಾರೆ. ಅವರು ತಮ್ಮ ಊರಿನ ಯಾವುದೇ ಸಾರ್ವಜನಿಕ ಗಣಪತಿಯನ್ನು ವಿಸರ್ಜಿಸಲು ನಿರ್ಧರಿಸಿದ್ದಾರೆ. ಎಂದಿನಂತೆ ಭಾನುವಾರ 5 ನೇ ದಿನಕ್ಕೆ ಗಣೇಶನ ವಿಸರ್ಜನೆ ಮಾಡಬೇಕಿತ್ತು. ಆದರೆ ಚಳಗೇರಿ ಟೋಲ್ ಬಳಿ ಡಿಜೆ ಸೌಂಡ್ ಸಿಸ್ಟಮ್ ಮೋಟೆಬೆನ್ನೂರು ಗ್ರಾಮಕ್ಕೆ ಬರದಂತೆ ಪೊಲೀಸರು ತಡೆದಿದ್ದಾರೆ. ಅಲ್ಲದೇ ಸೌಂಡ್ ಸಿಸ್ಟಮ್ ಮಾಲೀಕನನ್ನು ಮರಳಿ ಕಳುಹಿಸಿದ್ದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಸಂಪೂರ್ಣ ಡಿಜೆ ಬೇಡಾ. ಕೇವಲ ಎರಡು ಬಾಕ್ಸ್ ಗಳನ್ನು ಕೊಡಿ. ನಾವು ಅದನ್ನು ಬಳಸಿಕೊಂಡು ಗಣೇಶನ ವಿಸರ್ಜನೆಗೆ ಮುಂದಾಗುತ್ತೇವೆ ಎಂದು ಬೇಡಿಕೊಂಡರೂ ಪೊಲೀಸರು ಮಾತ್ರ ಅನುಮತಿ ನೀಡಲಿಲ್ಲ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಸಭೆ ಸೇರಿ ಸಾಮೂಹಿಕವಾಗಿ ಗಣಪತಿ ವಿಸರ್ಜನೆ ಮಾಡದಂತೆ ನಿರ್ಣಯ ಕೈಗೊಂಡಿದ್ದಾರೆ.

ಈ ವೇಳೆ ಮಾತನಾಡಿದ ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಗಣಪತಿ ಹಿಂದೂ ಧರ್ಮದ ಪ್ರತೀಕ. ಆದರೆ ರಾಜ್ಯ ಸರಕಾರ ಹಬ್ಬದಲ್ಲಿ ಡಿಜೆ ರದ್ದು ಮಾಡಿ ಹಿಂದೂಗಳ ಹಬ್ಬಗಳ ಮೇಲೆ ಸವಾರಿ ಮಾಡಲು ಹೊರಟಿದೆ. ಡಿಜೆ ಬಳಕೆಗೆ ಅವಕಾಶ ಕೊಡುವವರೆಗೆ ಮೋಟೆಬೆನ್ನೂರು ಗ್ರಾಮದಲ್ಲಿ ಪ್ರತಿಷ್ಠಾಪನೆ ಮಾಡಲಾದ ಹಿಂದೂ ಮಹಾಗಣಪತಿ ಸೇರಿದಂತೆ ಗ್ರಾಮದಲ್ಲಿನ ಯಾವುದೇ ಗಣಪತಿ ವಿಸರ್ಜನೆ ಮಾಡುವುದಿಲ್ಲ ಎಂದು ಎಚ್ಚರಿಸಿದರು.
ಕೋಲಾರದಲ್ಲಿ ಗಣೇಶ ವಿಸರ್ಜನೆ ವೇಳೆ ಡಿಜೆ ನಿಷೇಧಕ್ಕೆ ಯುವಕರಿಂದ ವಿನೂತನ ಪ್ರತಿಭಟನೆ. ಮನೆ ಪಾತ್ರೆಗಳಿಂದ ತಮಟೆ ವಾದನ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಯುವಕರು:

ಗಣೇಶ ಚತುರ್ಥಿಯ ವಿಸರ್ಜನೆ ಮೆರವಣಿಗೆಯ ಸಂಪ್ರದಾಯವು ಡಿಜೆ ಸಂಗೀತದೊಂದಿಗೆ ಯುವಕರಿಗೆ ಉತ್ಸಾಹದಾಯಕವಾಗಿತ್ತು. ಆದರೆ ಶಬ್ದ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ಡಿಜೆ ಬಳಕೆಗೆ ನಿಷೇಧ ಹೇರಿದೆ. ಇದರಿಂದಾಗಿ ಕೋಲಾರದ ಯುವಕರು ಸಾಂಪ್ರದಾಯಿಕ ತಮಟೆ ವಾದನಕ್ಕೆ ಮೊರೆ ಹೋಗಲು ಯತ್ನಿಸಿದವರಾದರೂ, ವಾದಕರ ಕೊರತೆಯಿಂದ ತಮ್ಮದೇ ವಿನೂತನ ವಿಧಾನವನ್ನು ಕಂಡುಕೊಂಡಿದ್ದಾರೆ. ಮನೆಯಿಂದ ತಂದ ಸ್ಟೀಲ್ ನ ತಟ್ಟೆಗಳು, ತವೆಗಳು, ಚಮಚಗಳು, ನೀರಿನ ಡ್ರಮ್ ಗಳನ್ನು ಬಳಸಿ ಯುವಕರು ರೋಮಾಂಚಕ ತಮಟೆ ಶಬ್ದವನ್ನು ಸೃಷ್ಟಿಸಿದರು.
ಈ ವಿನೂತನ ಪ್ರಯತ್ನವು ಸ್ಥಳೀಯರ ಗಮನ ಸೆಳೆದಿದ್ದು, ಮೆರವಣಿಗೆಗೆ ವಿಶೇಷ ಮೆರಗು ತಂದಿದೆ. ಡಿಜೆ ಇಲ್ಲದಿದ್ದರೂ ನಾವು ಉತ್ಸಾಹ ಕಡಿಮೆ ಮಾಡಿಕೊಂಡಿಲ್ಲ. ನಮ್ಮ ಮನೆ ಸಾಮಾನುಗಳೇ ತಮಟೆಯಾದವು ಎಂದು ಮಿತ್ರ ಬಳಗದ ಸದಸ್ಯರೊಬ್ಬರು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search