• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೋನಿಯಾ ಗಾಂಧಿ ಅಂಗರಕ್ಷಕ ಗಾಯಬ್!

TNN Correspondent Posted On September 7, 2017
0


0
Shares
  • Share On Facebook
  • Tweet It

ದೆಹಲಿ : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಭದ್ರತೆಗಾಗಿ ಸರ್ಕಾರದಿಂದ ನೀಡಲಾಗಿದ್ದ ವಿಶೇಷ ರಕ್ಷಣಾ ಪಡೆ(ಎಸ್‍ಪಿಜಿ)ಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೇದೆ ಸೆ.1ರಿಂದ ನಾಪತ್ತೆಯಾಗಿದ್ದ. ಅಂದು ಸೇವೆಗೆ ರಜೆಗ ಹಾಕಿದ್ದರೂ, ಮನೆಯಿಂದ ಪೊಲೀಸ್ ಸಮವಸ್ತ್ರ ತೊಟ್ಟು ಹೊರಬಿದ್ದಿದ್ದ ಆತ. ನಂತರ ಮನೆಗೆ ಮರಳಲೇ ಇಲ್ಲ.
ಹೌದು ಇದು  ಕೌತುಕದ ಘಟನೆ. ಹಾಗಿದ್ದರೆ ರಕ್ಷಣಾ ಪಡೆ ಪೇದೆ ರಾಕೇಶ್ ಕುಮಾರ್ ವರ್ಮಾ ಎಲ್ಲಿಗೆ ಹೋದ?

ಸಾಲದ ಬಾಧೆಯಿಂದ ಪಾರ್ಕ್‍ನಲ್ಲಿ ಅಲೆದಾಡಿಕೊಂಡಿದ್ದ!

ನೋಡಿ ದೊಡ್ಡ ಪ್ರಭಾವಿಗಳ ಬಳಿಯೇ ಸದಾ ಇದ್ದರೂ ತಮ್ಮ ಕಿಂಚಿತ್ ಹಣಕಾಸಿನ ಮುಗ್ಗಟ್ಟಿಗೆ ಪರಿಹಾರ ಸಿಗದೇ ನರಳಾಡುವ ಮಂದಿ ಎಷ್ಟೋ. ಅದೇ ಥರದವನು ಪೇದೆ ರಾಕೇಶ್.
ಸುಮಾರು ರೂ.4ಲಕ್ಷ ಸಾಲ ಮಾಡಿಕೊಂಡಿದ್ದ ರಾಕೇಶ್ ಬಂದ ವೇತನ ಪೂರ್ತಿ ಸಾಲದ ಕಂತಿಗೆ ಆ.31ರಂದು ಜಮೆಮಾಡಿದ್ದ. ನಂತರ ಬರಿಗೈಲಿ ಮನೆಗೆ ಬಂದು ಯೋಚಿಸಿ, ಏಕಾಏಕಿ ಮನೆ ಬಿಟ್ಟು ಹೊರಡುವ ತೀರ್ಮಾನ ಮಾಡಿದ್ದ. ಯಾರಿಗೂ ಅನುಮಾನ ಬಾರದಂತೆ ಪೊಲೀಸ್ ಸಮವಸ್ತ್ರದಲ್ಲಿ ಮನೆ ಡ್ಯೂಟಿ ಸಮಯಕ್ಕೆ ಸರಿಯಾಗಿ ಮನೆ ಬಿಟ್ಟಿದ್ದ.
ಪಾರ್ಕ್‍ನಲ್ಲಿ ಭಿಕ್ಷೆ ಬೇಡುವಾಗ ಕಂಡಿತು ಐಡಿ ಕಾರ್ಡ್: ಒಂದು ವಾರದಿಂದ ಕುಟುಂಬದವರಿಂದ ಕಣ್ಮರೆಯಾಗಿದ್ದ ರಾಕೇಶ್ ಶೋಧಕ್ಕೆ ಪೊಲೀಸರು ಬಲೆ ಬೀಸಿದ್ದರು. ಆದರೆ ಪಾರ್ಕ್ ಒಂದರಲ್ಲಿ ಭಿಕ್ಷೆ ಆಹಾರಕ್ಕಾಗಿ ಅಂಗಲಾಚುತ್ತಿದ್ದಾಗ ರಾಕೇಶ್‍ನ ಪೊಲೀಸ್ ಐಡಿ ಕಾರ್ಡ್ ಕಂಡು ವ್ಯಕ್ತಿಯೊಬ್ಬ ಕಂಟ್ರೋಲ್ ರೂಮ್‍ಗೆ ವಿಷಯ ಮುಟ್ಟಿಸಿದ್ದಾನೆ. ಕೂಡಲೇ ರಾಕೇಶ್‍ನನ್ನು ವಶಕ್ಕೆ ಪಡೆದ ಪೊಲೀಸರು ವೈದ್ಯಕೀಯ ಪರೀಕ್ಷೆ ನಡೆಸಿ ಕುಟುಂಬಕ್ಕೆ ಸೇರಿಸಿದ್ದಾರೆ.

 

 

0
Shares
  • Share On Facebook
  • Tweet It


aicccongressfoundgandhigunmankpccmissingpresidentsoniaspg


Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
ಯುಟಿ ಖಾದರ್ ಅಥವಾ ಬಿಎಂ ಫಾರೂಕ್ ಯಾರಾಗಲಿದ್ದಾರೆ ದಕ್ಷಿಣ ಕನ್ನಡದ ಉಸ್ತುವಾರಿ!!
May 31, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search