• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಸೀಟ್ ಬೆಲ್ಟ್ ಧರಿಸದ್ದಕ್ಕೆ ದಂಡ ಪಾವತಿ ಮಾಡಿದ ಸಿದ್ಧರಾಮಯ್ಯ!

Tulunadu News Posted On September 6, 2025
0


0
Shares
  • Share On Facebook
  • Tweet It

ಕಾನೂನು ಎಲ್ಲರಿಗೂ ಒಂದೇ ಎನ್ನುವುದನ್ನು ಸಿದ್ಧರಾಮಯ್ಯನವರು ತಮ್ಮ ನಡೆಯಿಂದ ತೋರಿಸಿಕೊಟ್ಟಿದ್ದಾರೆ. ಸದ್ಯ ಪೊಲೀಸ್ ಇಲಾಖೆ ಸಾರಿಗೆ ನಿಯಮಗಳನ್ನು ಉಲ್ಲಂಘಿಸಿದವರಿಗೆ ಹಾಕಲಾದ ದಂಡ ಪಾವತಿಗೆ 50% ರಿಯಾಯಿತಿ ನೀಡುವ ಅಭಿಯಾನವನ್ನು ನಡೆಸುತ್ತಿದೆ. ಆದ್ದರಿಂದ ಜನಸಾಮಾನ್ಯರು ಈ ಸೌಲಭ್ಯ ಬಳಸಿ ದಂಡ ಕಟ್ಟುತ್ತಿದ್ದಾರೆ.

ಸದ್ಯ ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಕೂಡ ತಮ್ಮ ಸರಕಾರಿ ಕಾರಿನಲ್ಲಿ ಪ್ರಯಾಣಿಸುವಾಗಲೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿರುವುದು ಗೊತ್ತಾಗಿದೆ. ಅವರ ಸರಕಾರಿ ಕಾರು ( ಕೆಎ-05, ಜಿಎ- 2023) ವಿರುದ್ಧ ಏಳು ಪ್ರಕರಣಗಳು ದಾಖಲಾಗಿವೆ. ಸಿಎಂ ಕೂಡ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಈ ಏಳು ಪ್ರಕರಣಗಳು ದಾಖಲಾದ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದವು. ತಕ್ಷಣ ಆ ಹಣವನ್ನು ಪಾವತಿಸುವ ಮೂಲಕ ಸಿಎಂ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ.

ಸಿಎಂ ಒಟ್ಟು 2000 ರೂಪಾಯಿಗಳನ್ನು ಪಾವತಿಸಿರುವುದರಿಂದ ಈ ಹಿಂದಿನ ಎಲ್ಲಾ ದಂಡಗಳನ್ನು ಕಟ್ಟಿದಂತಾಗಿದೆ. ಈ ಬಗ್ಗೆ “ಎಕ್ಸ್” ತಾಣದಲ್ಲಿ “ಆರ್ ಸಿ ಬೆಂಗಳೂರು” ಹೆಸರಿನ ಖಾತೆಯಲ್ಲಿ ಮುಖ್ಯಮಂತ್ರಿ ಕಾರಿನ ಫೋಟೋ ಪೋಸ್ಟ್ ಹಾಕಲಾಗಿದೆ. ಸಿಎಂ ಸರಕಾರಿ ಕಾರು ಕೆಎ-05, ಜಿಎ-2023 ಕಾರಿನ ಮೇಲೆ ನಿಯಮ ಉಲ್ಲಂಘನೆ ಸಂಬಂಧ 7 ಕೇಸ್ ಬಾಕಿ ಇದ್ದು, 2000 ರೂ ದಂಡ ಪಾವತಿಸಬೇಕಿದೆ ಎಂದು ಬರೆಯಲಾಗಿತ್ತು. ಈ ಪೈಕಿ 6 ಸಲ ಸೀಟ್ ಬೆಲ್ಟ್ ಧರಿಸದೇ, ಒಮ್ಮೆ ವೇಗವಾಗಿ ಚಾಲನೆಗೆ ದಂಡ ಬಿದ್ದಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ ಕಾರಿನ ಮೇಲೆ ಹಾಕಲಾಗಿರುವ ದಂಡ ಪಾವತಿಸುವ ಮೂಲಕ ಉಳಿದ ಜನಪ್ರತಿನಿಧಿಗಳಿಗೂ ಮಾದರಿ ಆಗಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search