• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಸೀಟ್ ಬೆಲ್ಟ್ ಧರಿಸದ್ದಕ್ಕೆ ದಂಡ ಪಾವತಿ ಮಾಡಿದ ಸಿದ್ಧರಾಮಯ್ಯ!

Tulunadu News Posted On September 6, 2025
0


0
Shares
  • Share On Facebook
  • Tweet It

ಕಾನೂನು ಎಲ್ಲರಿಗೂ ಒಂದೇ ಎನ್ನುವುದನ್ನು ಸಿದ್ಧರಾಮಯ್ಯನವರು ತಮ್ಮ ನಡೆಯಿಂದ ತೋರಿಸಿಕೊಟ್ಟಿದ್ದಾರೆ. ಸದ್ಯ ಪೊಲೀಸ್ ಇಲಾಖೆ ಸಾರಿಗೆ ನಿಯಮಗಳನ್ನು ಉಲ್ಲಂಘಿಸಿದವರಿಗೆ ಹಾಕಲಾದ ದಂಡ ಪಾವತಿಗೆ 50% ರಿಯಾಯಿತಿ ನೀಡುವ ಅಭಿಯಾನವನ್ನು ನಡೆಸುತ್ತಿದೆ. ಆದ್ದರಿಂದ ಜನಸಾಮಾನ್ಯರು ಈ ಸೌಲಭ್ಯ ಬಳಸಿ ದಂಡ ಕಟ್ಟುತ್ತಿದ್ದಾರೆ.

ಸದ್ಯ ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಕೂಡ ತಮ್ಮ ಸರಕಾರಿ ಕಾರಿನಲ್ಲಿ ಪ್ರಯಾಣಿಸುವಾಗಲೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿರುವುದು ಗೊತ್ತಾಗಿದೆ. ಅವರ ಸರಕಾರಿ ಕಾರು ( ಕೆಎ-05, ಜಿಎ- 2023) ವಿರುದ್ಧ ಏಳು ಪ್ರಕರಣಗಳು ದಾಖಲಾಗಿವೆ. ಸಿಎಂ ಕೂಡ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಈ ಏಳು ಪ್ರಕರಣಗಳು ದಾಖಲಾದ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದವು. ತಕ್ಷಣ ಆ ಹಣವನ್ನು ಪಾವತಿಸುವ ಮೂಲಕ ಸಿಎಂ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ.

ಸಿಎಂ ಒಟ್ಟು 2000 ರೂಪಾಯಿಗಳನ್ನು ಪಾವತಿಸಿರುವುದರಿಂದ ಈ ಹಿಂದಿನ ಎಲ್ಲಾ ದಂಡಗಳನ್ನು ಕಟ್ಟಿದಂತಾಗಿದೆ. ಈ ಬಗ್ಗೆ “ಎಕ್ಸ್” ತಾಣದಲ್ಲಿ “ಆರ್ ಸಿ ಬೆಂಗಳೂರು” ಹೆಸರಿನ ಖಾತೆಯಲ್ಲಿ ಮುಖ್ಯಮಂತ್ರಿ ಕಾರಿನ ಫೋಟೋ ಪೋಸ್ಟ್ ಹಾಕಲಾಗಿದೆ. ಸಿಎಂ ಸರಕಾರಿ ಕಾರು ಕೆಎ-05, ಜಿಎ-2023 ಕಾರಿನ ಮೇಲೆ ನಿಯಮ ಉಲ್ಲಂಘನೆ ಸಂಬಂಧ 7 ಕೇಸ್ ಬಾಕಿ ಇದ್ದು, 2000 ರೂ ದಂಡ ಪಾವತಿಸಬೇಕಿದೆ ಎಂದು ಬರೆಯಲಾಗಿತ್ತು. ಈ ಪೈಕಿ 6 ಸಲ ಸೀಟ್ ಬೆಲ್ಟ್ ಧರಿಸದೇ, ಒಮ್ಮೆ ವೇಗವಾಗಿ ಚಾಲನೆಗೆ ದಂಡ ಬಿದ್ದಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ ಕಾರಿನ ಮೇಲೆ ಹಾಕಲಾಗಿರುವ ದಂಡ ಪಾವತಿಸುವ ಮೂಲಕ ಉಳಿದ ಜನಪ್ರತಿನಿಧಿಗಳಿಗೂ ಮಾದರಿ ಆಗಿದ್ದಾರೆ.

0
Shares
  • Share On Facebook
  • Tweet It




Trending Now
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
  • Popular Posts

    • 1
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 2
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 3
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search