• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಸೀಟ್ ಬೆಲ್ಟ್ ಧರಿಸದ್ದಕ್ಕೆ ದಂಡ ಪಾವತಿ ಮಾಡಿದ ಸಿದ್ಧರಾಮಯ್ಯ!

Tulunadu News Posted On September 6, 2025
0


0
Shares
  • Share On Facebook
  • Tweet It

ಕಾನೂನು ಎಲ್ಲರಿಗೂ ಒಂದೇ ಎನ್ನುವುದನ್ನು ಸಿದ್ಧರಾಮಯ್ಯನವರು ತಮ್ಮ ನಡೆಯಿಂದ ತೋರಿಸಿಕೊಟ್ಟಿದ್ದಾರೆ. ಸದ್ಯ ಪೊಲೀಸ್ ಇಲಾಖೆ ಸಾರಿಗೆ ನಿಯಮಗಳನ್ನು ಉಲ್ಲಂಘಿಸಿದವರಿಗೆ ಹಾಕಲಾದ ದಂಡ ಪಾವತಿಗೆ 50% ರಿಯಾಯಿತಿ ನೀಡುವ ಅಭಿಯಾನವನ್ನು ನಡೆಸುತ್ತಿದೆ. ಆದ್ದರಿಂದ ಜನಸಾಮಾನ್ಯರು ಈ ಸೌಲಭ್ಯ ಬಳಸಿ ದಂಡ ಕಟ್ಟುತ್ತಿದ್ದಾರೆ.

ಸದ್ಯ ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಕೂಡ ತಮ್ಮ ಸರಕಾರಿ ಕಾರಿನಲ್ಲಿ ಪ್ರಯಾಣಿಸುವಾಗಲೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿರುವುದು ಗೊತ್ತಾಗಿದೆ. ಅವರ ಸರಕಾರಿ ಕಾರು ( ಕೆಎ-05, ಜಿಎ- 2023) ವಿರುದ್ಧ ಏಳು ಪ್ರಕರಣಗಳು ದಾಖಲಾಗಿವೆ. ಸಿಎಂ ಕೂಡ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಈ ಏಳು ಪ್ರಕರಣಗಳು ದಾಖಲಾದ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದವು. ತಕ್ಷಣ ಆ ಹಣವನ್ನು ಪಾವತಿಸುವ ಮೂಲಕ ಸಿಎಂ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ.

ಸಿಎಂ ಒಟ್ಟು 2000 ರೂಪಾಯಿಗಳನ್ನು ಪಾವತಿಸಿರುವುದರಿಂದ ಈ ಹಿಂದಿನ ಎಲ್ಲಾ ದಂಡಗಳನ್ನು ಕಟ್ಟಿದಂತಾಗಿದೆ. ಈ ಬಗ್ಗೆ “ಎಕ್ಸ್” ತಾಣದಲ್ಲಿ “ಆರ್ ಸಿ ಬೆಂಗಳೂರು” ಹೆಸರಿನ ಖಾತೆಯಲ್ಲಿ ಮುಖ್ಯಮಂತ್ರಿ ಕಾರಿನ ಫೋಟೋ ಪೋಸ್ಟ್ ಹಾಕಲಾಗಿದೆ. ಸಿಎಂ ಸರಕಾರಿ ಕಾರು ಕೆಎ-05, ಜಿಎ-2023 ಕಾರಿನ ಮೇಲೆ ನಿಯಮ ಉಲ್ಲಂಘನೆ ಸಂಬಂಧ 7 ಕೇಸ್ ಬಾಕಿ ಇದ್ದು, 2000 ರೂ ದಂಡ ಪಾವತಿಸಬೇಕಿದೆ ಎಂದು ಬರೆಯಲಾಗಿತ್ತು. ಈ ಪೈಕಿ 6 ಸಲ ಸೀಟ್ ಬೆಲ್ಟ್ ಧರಿಸದೇ, ಒಮ್ಮೆ ವೇಗವಾಗಿ ಚಾಲನೆಗೆ ದಂಡ ಬಿದ್ದಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ ಕಾರಿನ ಮೇಲೆ ಹಾಕಲಾಗಿರುವ ದಂಡ ಪಾವತಿಸುವ ಮೂಲಕ ಉಳಿದ ಜನಪ್ರತಿನಿಧಿಗಳಿಗೂ ಮಾದರಿ ಆಗಿದ್ದಾರೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search