ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!

ಮದ್ದೂರಿನಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ್ದನ್ನು ವಿರೋಧಿಸಿ ಹಿಂದೂ ಮುಖಂಡರು ಮಂಗಳವಾರ ಮದ್ದೂರು ಬಂದ್ ಗೆ ಕರೆ ನೀಡಿದ್ದಾರೆ. ಇದರೊಂದಿಗೆ ಮಂಗಳವಾರ ಸೆಪ್ಟೆಂಬರ್ 9 ರಂದು ಮದ್ದೂರು ಪಟ್ಟಣ ಸಂಪೂರ್ಣ ಸ್ತಬ್ಧವಾಗಲಿದ್ದು, ಹಿಂದೂ ಮುಖಂಡರು ಸ್ವಯಂ ಘೋಷಿತ ಬಂದ್ ಗೆ ಕರೆ ನೀಡಿದ್ದಾರೆ. ಇನ್ನು ಬುಧವಾರ ಮದ್ದೂರು ತಾಲೂಕಿನ ಎಲ್ಲಾ ಗಣೇಶ ಮೂರ್ತಿಗಳನ್ನು ಮದ್ದೂರು ಪಟ್ಟಣದಲ್ಲಿ ತಂದು ಮೆರವಣಿಗೆ ಮಾಡಿ ವಿಸರ್ಜನೆ ಮಾಡಲು ಹಿಂದೂ ಮುಖಂಡರು ತೀರ್ಮಾನಿಸಿದ್ದಾರೆ. ಡಿಜೆ ಸಹಿತ ಸಾಮೂಹಿಕ ಗಣೇಶ ವಿಸರ್ಜನೆ ನಡೆಸಲು ಕರೆ ನೀಡಲಾಗಿದೆ.
ಕಲ್ಲು ತೂರಾಟದ ಬಳಿಕ ಮದ್ದೂರು ಏಕಾಏಕಿ ಉದ್ವಿಗ್ನಗೊಂಡಿದೆ. ಈ ಹಿನ್ನಲೆಯಲ್ಲಿ ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜನೆ ಮಾಡಲಾಗಿದೆ. ಈಗಾಗಲೇ ಒಂದೂವರೆ ಸಾವಿರಕ್ಕೂ ಅಧಿಕ ಪೊಲೀಸರು ಇಲ್ಲಿ ಬಂದು ಸೇರಿದ್ದಾರೆ. ಮಂಡ್ಯ, ಬೆಂಗಳೂರು, ಮೈಸೂರು, ಹಾಸನ, ರಾಮನಗರ, ಚಾಮರಾಜನಗರ ಸೇರಿ ಹಲವು ಜಿಲ್ಲೆಗಳ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಐಜಿ ಬೋರಲಿಂಗಯ್ಯ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗುತ್ತಿದೆ.
ಹಿಂದೂ ಮುಖಂಡರ ಪ್ರಕಾರ ” ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ ಮಾಡಿರೋದು ಪೂರ್ವ ನಿಯೋಜಿತ. ಮಸೀದಿ ಕಡೆಯಿಂದ ಕಲ್ಲು ತೂರಾಟ ಮಾಡಲಾಗಿದೆ. ಕೂಡಲೇ ಮಸೀದಿಯ ಧರ್ಮಗುರು ಬಂಧನ ಮಾಡಬೇಕು” ಎಂದು ಹಿಂದೂ ಮುಖಂಡರು, ಕಾರ್ಯಕರ್ತರು ಮನವಿ ಮಾಡಿದ್ದಾರೆ. ಅಲ್ಲದೇ ಮಸೀದಿ ಸೀಜ್ ಮಾಡಿ ಎಂದು ಸರಕಾರಕ್ಕೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ಮಹಿಳೆಯರ ಮೇಲೆ ಲಾಠಿ ಚಾರ್ಜ್
ಸೆ. 8ರಂದು ಮಹಿಳೆಯರ ಮೇಲೆ ನಡೆಸಲಾದ ಲಾಠಿಚಾರ್ಜ್ ಸಂದರ್ಭದಲ್ಲಿ ಮಹಿಳಾ ಪ್ರತಿಭಟನಾಕಾರರ ಮೇಲೂ ಹಲ್ಲೆಯಾಗಿದೆ. ಮಹಿಳೆಯೊಬ್ಬರ ಮೇಲೆ Police Constable ಬೀಸಿದ ಲಾಠಿಯೇಟಿನ ನೋವಿನಿಂದಾಗಿ ಆ ಮಹಿಳೆಯು ನೆಲಕ್ಕೆ ಕುಸಿದು ಬಾಯಿಬಿಡಿದುಕೊಂಡು ರೋದಿಸಿದ ದೃಶ್ಯಾವಳಿಗಳು ಟಿವಿ ಮಾಧ್ಯಮಗಳಲ್ಲಿ ದಿನವಿಡೀ ಬಿತ್ತರವಾಯಿತು.