• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!

Tulunadu News Posted On September 8, 2025
0


0
Shares
  • Share On Facebook
  • Tweet It

ಮದ್ದೂರಿನಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ್ದನ್ನು ವಿರೋಧಿಸಿ ಹಿಂದೂ ಮುಖಂಡರು ಮಂಗಳವಾರ ಮದ್ದೂರು ಬಂದ್ ಗೆ ಕರೆ ನೀಡಿದ್ದಾರೆ. ಇದರೊಂದಿಗೆ ಮಂಗಳವಾರ ಸೆಪ್ಟೆಂಬರ್ 9 ರಂದು ಮದ್ದೂರು ಪಟ್ಟಣ ಸಂಪೂರ್ಣ ಸ್ತಬ್ಧವಾಗಲಿದ್ದು, ಹಿಂದೂ ಮುಖಂಡರು ಸ್ವಯಂ ಘೋಷಿತ ಬಂದ್ ಗೆ ಕರೆ ನೀಡಿದ್ದಾರೆ. ಇನ್ನು ಬುಧವಾರ ಮದ್ದೂರು ತಾಲೂಕಿನ ಎಲ್ಲಾ ಗಣೇಶ ಮೂರ್ತಿಗಳನ್ನು ಮದ್ದೂರು ಪಟ್ಟಣದಲ್ಲಿ ತಂದು ಮೆರವಣಿಗೆ ಮಾಡಿ ವಿಸರ್ಜನೆ ಮಾಡಲು ಹಿಂದೂ ಮುಖಂಡರು ತೀರ್ಮಾನಿಸಿದ್ದಾರೆ. ಡಿಜೆ ಸಹಿತ ಸಾಮೂಹಿಕ ಗಣೇಶ ವಿಸರ್ಜನೆ ನಡೆಸಲು ಕರೆ ನೀಡಲಾಗಿದೆ.

ಕಲ್ಲು ತೂರಾಟದ ಬಳಿಕ ಮದ್ದೂರು ಏಕಾಏಕಿ ಉದ್ವಿಗ್ನಗೊಂಡಿದೆ. ಈ ಹಿನ್ನಲೆಯಲ್ಲಿ ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜನೆ ಮಾಡಲಾಗಿದೆ. ಈಗಾಗಲೇ ಒಂದೂವರೆ ಸಾವಿರಕ್ಕೂ ಅಧಿಕ ಪೊಲೀಸರು ಇಲ್ಲಿ ಬಂದು ಸೇರಿದ್ದಾರೆ. ಮಂಡ್ಯ, ಬೆಂಗಳೂರು, ಮೈಸೂರು, ಹಾಸನ, ರಾಮನಗರ, ಚಾಮರಾಜನಗರ ಸೇರಿ ಹಲವು ಜಿಲ್ಲೆಗಳ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಐಜಿ ಬೋರಲಿಂಗಯ್ಯ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗುತ್ತಿದೆ.

ಹಿಂದೂ ಮುಖಂಡರ ಪ್ರಕಾರ ” ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ ಮಾಡಿರೋದು ಪೂರ್ವ ನಿಯೋಜಿತ. ಮಸೀದಿ ಕಡೆಯಿಂದ ಕಲ್ಲು ತೂರಾಟ ಮಾಡಲಾಗಿದೆ. ಕೂಡಲೇ ಮಸೀದಿಯ ಧರ್ಮಗುರು ಬಂಧನ ಮಾಡಬೇಕು” ಎಂದು ಹಿಂದೂ ಮುಖಂಡರು, ಕಾರ್ಯಕರ್ತರು ಮನವಿ ಮಾಡಿದ್ದಾರೆ. ಅಲ್ಲದೇ ಮಸೀದಿ ಸೀಜ್ ಮಾಡಿ ಎಂದು ಸರಕಾರಕ್ಕೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಮಹಿಳೆಯರ ಮೇಲೆ ಲಾಠಿ ಚಾರ್ಜ್

ಸೆ. 8ರಂದು ಮಹಿಳೆಯರ ಮೇಲೆ ನಡೆಸಲಾದ ಲಾಠಿಚಾರ್ಜ್ ಸಂದರ್ಭದಲ್ಲಿ ಮಹಿಳಾ ಪ್ರತಿಭಟನಾಕಾರರ ಮೇಲೂ ಹಲ್ಲೆಯಾಗಿದೆ. ಮಹಿಳೆಯೊಬ್ಬರ ಮೇಲೆ Police Constable ಬೀಸಿದ ಲಾಠಿಯೇಟಿನ ನೋವಿನಿಂದಾಗಿ ಆ ಮಹಿಳೆಯು ನೆಲಕ್ಕೆ ಕುಸಿದು ಬಾಯಿಬಿಡಿದುಕೊಂಡು ರೋದಿಸಿದ ದೃಶ್ಯಾವಳಿಗಳು ಟಿವಿ ಮಾಧ್ಯಮಗಳಲ್ಲಿ ದಿನವಿಡೀ ಬಿತ್ತರವಾಯಿತು.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search