• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ – ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!

Tulunadu News Posted On September 8, 2025
0


0
Shares
  • Share On Facebook
  • Tweet It

ದೇಶದ ಗಮನ ಸೆಳೆದಿರುವ ಸೌಜನ್ಯ ಪ್ರಕರಣದಲ್ಲಿ ಆಕೆಯ ಮೇಲೆ ದೌರ್ಜನ್ಯ ಮಾಡಿ ಕೊಲೆ ಮಾಡಿರುವುದು ಆಕೆಯ ಮಾವ ವಿಠಲ ಗೌಡ ಎನ್ನುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಅದಕ್ಕಾಗಿ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದೇನೆ. ಅದನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯವರಿಗೆ ನೀಡಲು ಬಂದಿದ್ದೇನೆ ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಮಾಧ್ಯಮಗಳಿಗೆ ಹೇಳಿದ್ದಾರೆ.

ಕೃಷ್ಣ ” ಇಲ್ಲಿ ಆರೋಪಿಗೆ ದುಷ್ಕತ್ಯ ಮಾಡಲು ಏನಾದರೂ ಉದ್ದೇಶ ಇದೆಯಾ ಎಂದು ನೋಡಬೇಕಾಗುತ್ತದೆ. ಇಲ್ಲಿ ವಿಠಲ ಗೌಡ ಆಕೆ ಸೌಜನ್ಯಳೊಂದಿಗೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದ. ಆಕೆಯ ಮೈಮುಟ್ಟುವುದು ಮಾಡುತ್ತಿದ್ದ. ಆಕೆಯನ್ನು ಅನುಭವಿಸಬೇಕು ಎನ್ನುವ ಮನೋಭಾವ ಇತ್ತು. ಆ ಕಾರಣಕ್ಕೆ ಅವಳೊಂದಿಗೆ ಲೈಂಗಿಕ ದೌರ್ಜನ್ಯ ನಡೆಸಲು ಹೋಗಿದ್ದಾನೆ. ಆಗ ಆಕೆ ಕಿರುಚಿದಾಗ ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ. ಅದರ ನಂತರ ಆಕೆ ಮನೆಗೆ ಬಂದಿಲ್ಲ. ಕಾಲೇಜಿನಿಂದ ಮನೆಗೆ ಬರುವ ದಾರಿಯಲ್ಲಿ ಆಕೆಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ಸುಳ್ಳನ್ನು ಬಿಂಬಿಸಿರುವುದು ಕಂಡುಬರುತ್ತದೆ” ಎಂದು ಕೃಷ್ಣ ಮಾಧ್ಯಮಗಳಿಗೆ ಹೇಳಿದ್ದಾರೆ.

ಅವರು ಇನ್ನೂ ಮುಂದುವರೆದು “ಈ ನನ್ನ ದೂರು ಅರ್ಜಿಯನ್ನು ಪೊಲೀಸ್ ಅಧಿಕಾರಿಗಳು ತನಿಖೆ ಮಾಡಿ ವಿಠಲ ಗೌಡ ಹಾಗೂ ಅವನಿಗೆ ಸಹಕರಿಸಿದವರಿಗೆ ಶಿಕ್ಷೆ ನೀಡಿದರೆ ಸೌಜನ್ಯ ಆತ್ಮಕ್ಕೆ ಶಾಂತಿ ಸಿಗುತ್ತದೆ” ಎಂದು ಅವರು ಹೇಳಿದ್ದಾರೆ.

ಕೃಷ್ಣ ” ಒಂದು ವೇಳೆ ಬೇರೆಯವರು ಅಲ್ಲಿ ಅಪಹರಣ, ಅತ್ಯಾಚಾರ ಮಾಡಿದರೆ ಅವಳ ಬ್ಯಾಗು ಅಲ್ಲಿ ಸಿಗುತ್ತಿರಲಿಲ್ಲ. ಆದರೆ ಬ್ಯಾಗು ಸಿಕ್ಕಿದೆ. ಇನ್ನು ಅವಳು ಅಂದು ಮಧ್ಯಾಹ್ನ ಊಟ ಮಾಡಲಿಲ್ಲ ಎಂದು ಹೇಳಲಾಗಿತ್ತು. ಆದರೆ ಪೋಸ್ಟ್ ಮಾರ್ಟಂ ಮಾಡಿದಾಗ ಅವಳ ಹೊಟ್ಟೆಯಲ್ಲಿ ಜೀರ್ಣವಾದ ಆಹಾರ ಇತ್ತು. ಅವಳು ವಿಠಲ ಗೌಡನ ಮನೆಗೆ ಹೋಗಿದ್ದಾಳೆ. ಅಲ್ಲಿ ಊಟ ಮಾಡಿದ್ದಾಳೆ. ಅಲ್ಲಿ ಅವಳ ಮೇಲೆ ಅತ್ಯಾಚಾರದ ಪ್ರಯತ್ನ ಆಗಿದೆ. ಅವಳು ಕಿರುಚಿದ್ದಾಳೆ. ಅಲ್ಲಿ ಕೊಲೆ ಮಾಡಲಾಗಿದೆ. ಅದರೊಂದಿಗೆ ಅವಳ ಬಟ್ಟೆಗಳನ್ನು ವಿಧಿವಿಜ್ಞಾನ ಕೇಂದ್ರಕ್ಕೆ ಕಳುಹಿಸಿ ಅದರ ಮೇಲಿನ ಅಚ್ಚನ್ನು ಪತ್ತೆ ಹಚ್ಚಬೇಕಾಗಿತ್ತು. ಅದನ್ನು ಪೊಲೀಸರು ಮಾಡಿಲ್ಲ. ಇನ್ನು ಸಂತೋಷ್ ರಾವ್ ನನ್ನು ಈ ಕುಟುಂಬದವರು ಉಳಿಸುವ ಕೆಲಸ ಮಾಡಿದ್ದಾರೆ. ಯಾಕೆಂದರೆ  ಕೊಲೆ ಮಾಡಿ ತಂದು ಹಾಕಿರುವ ಏನನ್ನೋ ಅವನು ನೋಡಿದ್ದಾನೆ. ಸಂತೋಷ್ ರಾವ್ ನನ್ನು ಇವರು ಖರ್ಚು ಮಾಡಿ ಉಳಿಸುವ ಕೆಲಸ ಮಾಡಿದ್ದಾರೆ. ಇವರು ಕೋರ್ಟ್ ನಲ್ಲಿ ಅವನು ಕೊಲೆ ಮಾಡಿಲ್ಲ ಎಂದು ಹೇಳಿದ್ದಾರೆ. ಹಾಗೆ ಹೇಳಲು ಇವರು ಯಾರು” ಎಂದು ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ಒಟ್ಟಿನಲ್ಲಿ ಸ್ನೇಹಮಯಿ ಕೃಷ್ಣ ಈ ಸ್ಫೋಟಕ ಹೇಳಿಕೆಯ ನಂತರ ಸೌಜನ್ಯ ಪ್ರಕರಣಕ್ಕೆ ಇನ್ನೊಂದು ಆಯಾಮ ಸಿಕ್ಕಿದಂತಾಗಿದೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search