• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!

Tulunadu News Posted On September 9, 2025
0


0
Shares
  • Share On Facebook
  • Tweet It

ನೇಪಾಳದಲ್ಲಿ ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಿದ್ದಕ್ಕೆ ಪ್ರತಿಭಟನೆ!

ಕಾಠ್ಮಂಡುವಿನಲ್ಲಿ ಯುವಕರು, ಯುವತಿಯರು ದೊಡ್ಡಮಟ್ಟದಲ್ಲಿ ರಸ್ತೆಗೆ ಇಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಅಲ್ಲಿನ ನೇಪಾಳ ಸರಕಾರ ಯೂಟ್ಯೂಬ್, ಫೇಸ್ ಬುಕ್ ಸಹಿತ ಒಟ್ಟು 26 ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಅಲ್ಲಿನ ಸರಕಾರದ ಪ್ರಕಾರ ಯಾವುದೇ ಸಾಮಾಜಿಕ ಜಾಲತಾಣಗಳು ನೇಪಾಳದಲ್ಲಿ ಕಾರ್ಯಾಚರಿಸಬೇಕಾದರೆ ಮೊದಲು ಅಲ್ಲಿ ನೊಂದಾವಣೆ ಮಾಡಬೇಕು. ಅದರ ಪ್ರತಿನಿಧಿ ನೇಪಾಳದಲ್ಲಿ ಇರಬೇಕು. ಆದರೆ ಯಾವುದೆಲ್ಲಾ ಸಾಮಾಜಿಕ ಜಾಲತಾಣಗಳು ಈ ನಿಯಮಗಳನ್ನು ಪಾಲಿಸಲಿಲ್ಲವೋ ಅಂತಹ ಸೋಶಿಯಲ್ ಮೀಡಿಯಾಗಳನ್ನು ಅಲ್ಲಿನ ಸರಕಾರ ಬ್ಯಾನ್ ಮಾಡಲಾಗಿದೆ. ಇದನ್ನು ವಿರೋಧಿಸಿ ಯುವಜನಾಂಗ ದೊಡ್ಡ ಸಂಖ್ಯೆಯಲ್ಲಿ ಬೀದಿಗೆ ಇಳಿದು ಪ್ರತಿಭಟನೆ ನಡೆಸಿದೆ. ನೇಪಾಳದ ಸಂಸತ್ ಕಟ್ಟಡಕ್ಕೆ ಬೆಂಕಿ ಹಾಕಿದ ಘಟನೆಯೂ ನಡೆದಿದೆ. ಇದನ್ನು ಹತ್ತಿಕ್ಕಲು ಅಲ್ಲಿನ ಸರಕಾರ ಕಂಡಲ್ಲಿ ಗುಂಡು ಆದೇಶವನ್ನು ನೀಡಿದೆ. ಇದರ ಪರಿಣಾಮವಾಗಿ 20 ಜನರು ಮೃತಪಟ್ಟಿದ್ದಾರೆ. ಮೂನ್ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿ ಆಗಿದೆ.

ಈ ಮಧ್ಯೆ ಅಲ್ಲಿನ ಪ್ರಧಾನ ಮಂತ್ರಿ ಒಲಿ ಸರಕಾರಕ್ಕೆ ನೀಡಿದ ಬೆಂಬಲವನ್ನು ನೇಪಾಳಿ ಕಾಂಗ್ರೆಸ್ ಹಿಂಪಡೆದಿದ್ದು, ಆ ಪಕ್ಷದ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ. ಇನ್ನು ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ಕೂಡ ರಾಜೀನಾಮೆ ನೀಡಿದ್ದಾರೆ. ದೇಶದಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಠಾಚಾರವನ್ನು ಸಾಮಾಜಿಕ ಜಾಲತಾಣಗಳು ಬಯಲಿಗೆ ಎಳೆಯುತ್ತವೆ ಎನ್ನುವ ಕಾರಣಕ್ಕೆ ಅವುಗಳನ್ನು ನಿಷೇಧಿಸಲಾಗಿದೆ ಎನ್ನುವುದು ಯುವ ಸಮೂಹದ ಆಕ್ರೋಶಕ್ಕೆ ಕಾರಣವಾಗಿದೆ. ನಾಗರಿಕರು ಬಯಸುವುದಾದರೆ ತಾವು ರಾಜೀನಾಮೆ ನೀಡಲು ಹಿಂಜರಿಯುವುದಿಲ್ಲ ಎಂದು ಹೇಳಿರುವ ಓಲಿ ರಾಜೀನಾಮೆ ನೀಡಿದ್ದಾರೆ. ಇನ್ನು ಮಾಜಿ ಪ್ರಧಾನಿ ಹಾಗೂ ನೇಪಾಳಿ ಕಾಂಗ್ರೆಸ್ ಮುಖಂಡ ಶೇರ್ ಬಹಾದ್ದೂರ್ ಡೆವೂಬಾ ಹಾಗೂ ಅವರ ಪತ್ನಿ ಸರಕಾರದಲ್ಲಿ ವಿದೇಶಾಂಗ ಸಚಿವೆಯಾಗಿರುವ ಅರ್ಜು ರಾನಾ ಡೆವೂಬಾ ಅವರನ್ನು ಅವರ ಮನೆಯ ಒಳಗೆ ಹಲ್ಲೆ ಮಾಡಲಾಗಿದೆ. ಸದ್ಯ ಕಾಠ್ಮಂಡುವಿನಲ್ಲಿರುವ ತ್ರಿಭುವನ್ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ. ಪ್ರಧಾನಿ ಹಾಗೂ ಇತರ ಸಚಿವರು ಕಾಠ್ಮಂಡುವಿನಿಂದ ಪಲಾಯನ ಮಾಡುವ ಸಾಧ್ಯತೆ ಇದೆ ಎಂದು ವದಂತಿ ಹಬ್ಬಿದ ಹಿನ್ನಲೆಯಲ್ಲಿ ನಾಗರಿಕರು ಅವರನ್ನು ಸುತ್ತುವರೆಯಲು ವಿಮಾನ ನಿಲ್ದಾಣಕ್ಕೆ ಧಾವಿಸಿದ ಕಾರಣ ವಿಮಾನ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ನಿನ್ನೆಯಷ್ಟೇ ಪ್ರಧಾನಿ ಒಲಿ ಸರ್ವ ಪಕ್ಷ ಸಭೆ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಮಾಡಬೇಕಾದ ಕಾರ್ಯಗಳ ಬಗ್ಗೆ ಸಮಾಲೋಚನೆ ನಡೆಸಿದರು. ಪ್ರತಿಭಟನಾಕಾರರು ಬಾಲ್ಕೋಟ್ ನಲ್ಲಿರುವ ಪ್ರಧಾನಿ ನಿವಾಸ, ಅಧ್ಯಕ್ಷ ರಾಮ ಚಂದ್ರ ಪೌಡೆಲ್ ನಿವಾಸ, ಗೃಹ ಸಚಿವ ರಮೇಶ್ ಲೇಖಕ್ ಅವರ ನಿವಾಸಗಳಿಗೆ ಬೆಂಕಿ ನೀಡಿದ್ದಾರೆ. ಇದೆಲ್ಲದರ ಬಳಿಕ ನೇಪಾಲ ಸರಕಾರ ಸಾಮಾಜಿಕ ಜಾಲತಾಣಗಳ ಮೇಲೆ ಹಾಕಿರುವ ನಿಷೇಧವನ್ನು ಹಿಂದಕ್ಕೆ ಪಡೆದುಕೊಂಡಿದೆ.
ಈ ನಡುವೆ ಭಾರತ ಸರಕಾರದಿಂದ ಹೇಳಿಕೆಯೊಂದು ಬಿಡುಗಡೆಯಾಗಿದ್ದು ” ನೇಪಾಳದಲ್ಲಿರುವ ಭಾರತೀಯರು ಆದಷ್ಟು ಎಚ್ಚರಿಕೆಯಿಂದ ಇರುವಂತೆ ಮತ್ತು ನೇಪಾಳ ಆಡಳಿತ ನೀಡುವ ಮಾರ್ಗಸೂಚಿಗಳನ್ನು ಪಾಲಿಸುವಂತೆ” ಕರೆ ನೀಡಿದೆ. ಮುಂದಿನ ದಿನಗಳಲ್ಲಿ ಯಾವುದೇ ರೀತಿಯಲ್ಲಿ ಪರಿಸ್ಥಿತಿ ಕೈ ಮೀರದಂತೆ ಕರ್ಫೂ ಜಾರಿಗೆ ತರಲಾಗಿದ್ದು, ಭಾರತ – ನೇಪಾಳದ ನಡುವಿನ 1751 ಕಿ.ಮೀ ಉದ್ದದ ಗಡಿಯಲ್ಲಿ ಹೆಚ್ಚಿನ ಸುರಕ್ಷತಾ ವ್ಯವಸ್ಥೆಯನ್ನು ನಿಯೋಜಿಸಲಾಗಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search