• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ

Tulunadu News Posted On September 11, 2025
0


0
Shares
  • Share On Facebook
  • Tweet It

ರಾಷ್ಟ್ರೀಯ ಹೆದ್ದಾರಿ 66 ಬೃಹತ್ ಹೊಂಡಕ್ಕೆ ಬಿದ್ದು ಸ್ಕೂಟರ್ ಸವಾರೆ ಮೃತಪಟ್ಟಿದ್ದಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನೇರ ಹೊಣೆ. ಘಟನೆಯ ಬಗ್ಗೆ ಸಂಬಂಧಿಸಿದ ಜನಪ್ರತಿನಿಧಿಗಳು ಯಾಕೆ ಮೂಕರಾಗಿದ್ದಾರೆ? ಹೆದ್ದಾರಿ ಗುಂಡಿಗಳಿಗೆ ಇನ್ನೆಷ್ಟು ಜೀವ ಬಲಿಯಾಗಬೇಕು? ತಕ್ಷಣ ಹೆದ್ದಾರಿ ಶಾಶ್ವತ ರಿಪೇರಿ ಮಾಡಿ. ಇಲ್ಲದಿದ್ದರೆ ಬೃಹತ್ ಹೋರಾಟ ನಡೆಸಲಾಗುವುದು. ಕಾನೂನು ಹೋರಾಟಕ್ಕೂ ತಯಾರಾಗಿದ್ದೇವೆ ಎಂದು ಮಾಜಿ ಮೇಯರ್ ಶಶಿಧರ್ ಹೆಗ್ಡೆ ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ನ ಮಾಜಿ ಕಾರ್ಪೋರೇಟರ್ ಗಳೊಂದಿಗೆ ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದೆರಡು ವರ್ಷಗಳಿಂದ ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಗಳಲ್ಲಿ ನಿರಂತರವಾಗಿ ಹೆದ್ದಾರಿ ದುರವಸ್ಥೆ ಕುರಿತು ಗಮನ ಸೆಳೆದು ಪರಿಹಾರ ಮಾರ್ಗೋಪಾಯಗಳನ್ನು ಸೂಚಿಸುತ್ತಲೇ ಬಂದಿದ್ದೇವೆ. ಆದರೆ ಪರಿಹಾರ ಕೆಲಸ ಆಗಿಲ್ಲ. ಈ ಕಾರಣದಿಂದಲೇ ಅಪಘಾತಕ್ಕೀಡಾಗಿ ಅನೇಕ ಮಂದಿ ಶಾಶ್ವತ ಅಂಗವಿಕಲರಾಗಿದ್ದಾರೆ. ಇನ್ನು ಕೆಲವು ಮಂದಿ ಸಾವಿಗೀಡಾಗಿದ್ದಾರೆ. ಸಂಬಂಧಿಸಿದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು. ಹೆದ್ದಾರಿಗಾಗಿ ಕೋಟ್ಯಾಂತರ ಟೋಲ್ ಸಂಗ್ರಹ ಮಾಡುವಾಗ, ಆ ಮೊತ್ತದ ಅರ್ಧಾಂಶ ವ್ಯಯಿಸಿ ರಸ್ತೆ ನಿರ್ವಹಣೆ ಮಾಡಿದ್ದರೂ ಈ ಪರಿಸ್ಥಿತಿ ನಿರ್ಮಾಣ ಆಗುತ್ತಿರಲಿಲ್ಲ. ಟೋಲ್ ಸಂಗ್ರಹಿಸುವ ಹೆದ್ದಾರಿಯ ಅವ್ಯವಸ್ಥೆಗೆ ಸಂಬಂಧಿಸಿದ ಜನಪ್ರತಿನಿಧಿಗಳು, ಅಧಿಕಾರಿಗಳು ಹೊಣೆ ಹೊರಲೇಬೇಕು ಎಂದು ಶಶಿಧರ್ ಹೆಗ್ಡೆ ಹೇಳಿದರು.

ಇನ್ನು ಮಾಜಿ ಕಾರ್ಪೋರೇಟರ್ ಎ.ಸಿ.ವಿನಯರಾಜ್ ಮಾತನಾಡಿ, ಬಿ.ಸಿ.ರೋಡ್ – ಸುರತ್ಕಲ್ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಂದ ವಾರ್ಷಿಕ 15 ರಿಂದ 20 ಕೋಟಿ ರೂ ಟೋಲ್ ಸಂಗ್ರಹ ನಡೆಯುತ್ತಿದೆ. 2008 ರಿಂದಲೂ ಟೋಲ್ ಸಂಗ್ರಹ ನಡೆಯುತ್ತದೆ. ಹೆದ್ದಾರಿ ನಿರ್ವಹಣೆಯನ್ನೇ ಮಾಡದೇ, ಹೊಂಡ ಗುಂಡಿಗಳಿಂದ ಕೂಡಿರುವಾಗ, ಈಗಾಗಲೇ ಸಂಗ್ರಹವಾದ ಟೋಲ್ ಹಣವನ್ನು ಎಲ್ಲಿಗೆ ಚೆಲ್ಲಿದ್ದೀರಿ? ಸಂಬಂಧಿಸಿದ ಅಧಿಕಾರಿಗಳ ಕೆಲಸ ಮಾಡುವಂತೆ ಮೇಲ್ವಿಚಾರಣೆ ಮಾಡಬೇಕಿದ್ದ ಸಂಸದರು, ಶಾಸಕರು ಎಲ್ಲಿದ್ದಾರೆ? ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ನ ಮಾಜಿ ಕಾರ್ಪೋರೇಟರ್ ಗಳಾದ ಅಬ್ದುಲ್ ರವೂಫ್, ಭಾಸ್ಕರ್ ಕೆ, ಲ್ಯಾನ್ಸಿಲಾಟ್ ಪಿಂಟೋ, ಅನಿಲ್ ಕುಮಾರ್, ಸಂಶುದ್ದೀನ್ ಬಂದರ್, ಸಂಶುದ್ದೀನ್ ಕುದ್ರೋಳಿ, ಅಶೋಕ್ ಡಿ.ಕೆ, ಎನ್ ಎಸ್ ಯುಐ ಅಧ್ಯಕ್ಷ ಸುಹಾನ್ ಆಳ್ವ ಇದ್ದರು.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search