• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ

Tulunadu News Posted On September 11, 2025
0


0
Shares
  • Share On Facebook
  • Tweet It

ರಾಷ್ಟ್ರೀಯ ಹೆದ್ದಾರಿ 66 ಬೃಹತ್ ಹೊಂಡಕ್ಕೆ ಬಿದ್ದು ಸ್ಕೂಟರ್ ಸವಾರೆ ಮೃತಪಟ್ಟಿದ್ದಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನೇರ ಹೊಣೆ. ಘಟನೆಯ ಬಗ್ಗೆ ಸಂಬಂಧಿಸಿದ ಜನಪ್ರತಿನಿಧಿಗಳು ಯಾಕೆ ಮೂಕರಾಗಿದ್ದಾರೆ? ಹೆದ್ದಾರಿ ಗುಂಡಿಗಳಿಗೆ ಇನ್ನೆಷ್ಟು ಜೀವ ಬಲಿಯಾಗಬೇಕು? ತಕ್ಷಣ ಹೆದ್ದಾರಿ ಶಾಶ್ವತ ರಿಪೇರಿ ಮಾಡಿ. ಇಲ್ಲದಿದ್ದರೆ ಬೃಹತ್ ಹೋರಾಟ ನಡೆಸಲಾಗುವುದು. ಕಾನೂನು ಹೋರಾಟಕ್ಕೂ ತಯಾರಾಗಿದ್ದೇವೆ ಎಂದು ಮಾಜಿ ಮೇಯರ್ ಶಶಿಧರ್ ಹೆಗ್ಡೆ ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ನ ಮಾಜಿ ಕಾರ್ಪೋರೇಟರ್ ಗಳೊಂದಿಗೆ ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದೆರಡು ವರ್ಷಗಳಿಂದ ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಗಳಲ್ಲಿ ನಿರಂತರವಾಗಿ ಹೆದ್ದಾರಿ ದುರವಸ್ಥೆ ಕುರಿತು ಗಮನ ಸೆಳೆದು ಪರಿಹಾರ ಮಾರ್ಗೋಪಾಯಗಳನ್ನು ಸೂಚಿಸುತ್ತಲೇ ಬಂದಿದ್ದೇವೆ. ಆದರೆ ಪರಿಹಾರ ಕೆಲಸ ಆಗಿಲ್ಲ. ಈ ಕಾರಣದಿಂದಲೇ ಅಪಘಾತಕ್ಕೀಡಾಗಿ ಅನೇಕ ಮಂದಿ ಶಾಶ್ವತ ಅಂಗವಿಕಲರಾಗಿದ್ದಾರೆ. ಇನ್ನು ಕೆಲವು ಮಂದಿ ಸಾವಿಗೀಡಾಗಿದ್ದಾರೆ. ಸಂಬಂಧಿಸಿದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು. ಹೆದ್ದಾರಿಗಾಗಿ ಕೋಟ್ಯಾಂತರ ಟೋಲ್ ಸಂಗ್ರಹ ಮಾಡುವಾಗ, ಆ ಮೊತ್ತದ ಅರ್ಧಾಂಶ ವ್ಯಯಿಸಿ ರಸ್ತೆ ನಿರ್ವಹಣೆ ಮಾಡಿದ್ದರೂ ಈ ಪರಿಸ್ಥಿತಿ ನಿರ್ಮಾಣ ಆಗುತ್ತಿರಲಿಲ್ಲ. ಟೋಲ್ ಸಂಗ್ರಹಿಸುವ ಹೆದ್ದಾರಿಯ ಅವ್ಯವಸ್ಥೆಗೆ ಸಂಬಂಧಿಸಿದ ಜನಪ್ರತಿನಿಧಿಗಳು, ಅಧಿಕಾರಿಗಳು ಹೊಣೆ ಹೊರಲೇಬೇಕು ಎಂದು ಶಶಿಧರ್ ಹೆಗ್ಡೆ ಹೇಳಿದರು.

ಇನ್ನು ಮಾಜಿ ಕಾರ್ಪೋರೇಟರ್ ಎ.ಸಿ.ವಿನಯರಾಜ್ ಮಾತನಾಡಿ, ಬಿ.ಸಿ.ರೋಡ್ – ಸುರತ್ಕಲ್ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಂದ ವಾರ್ಷಿಕ 15 ರಿಂದ 20 ಕೋಟಿ ರೂ ಟೋಲ್ ಸಂಗ್ರಹ ನಡೆಯುತ್ತಿದೆ. 2008 ರಿಂದಲೂ ಟೋಲ್ ಸಂಗ್ರಹ ನಡೆಯುತ್ತದೆ. ಹೆದ್ದಾರಿ ನಿರ್ವಹಣೆಯನ್ನೇ ಮಾಡದೇ, ಹೊಂಡ ಗುಂಡಿಗಳಿಂದ ಕೂಡಿರುವಾಗ, ಈಗಾಗಲೇ ಸಂಗ್ರಹವಾದ ಟೋಲ್ ಹಣವನ್ನು ಎಲ್ಲಿಗೆ ಚೆಲ್ಲಿದ್ದೀರಿ? ಸಂಬಂಧಿಸಿದ ಅಧಿಕಾರಿಗಳ ಕೆಲಸ ಮಾಡುವಂತೆ ಮೇಲ್ವಿಚಾರಣೆ ಮಾಡಬೇಕಿದ್ದ ಸಂಸದರು, ಶಾಸಕರು ಎಲ್ಲಿದ್ದಾರೆ? ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ನ ಮಾಜಿ ಕಾರ್ಪೋರೇಟರ್ ಗಳಾದ ಅಬ್ದುಲ್ ರವೂಫ್, ಭಾಸ್ಕರ್ ಕೆ, ಲ್ಯಾನ್ಸಿಲಾಟ್ ಪಿಂಟೋ, ಅನಿಲ್ ಕುಮಾರ್, ಸಂಶುದ್ದೀನ್ ಬಂದರ್, ಸಂಶುದ್ದೀನ್ ಕುದ್ರೋಳಿ, ಅಶೋಕ್ ಡಿ.ಕೆ, ಎನ್ ಎಸ್ ಯುಐ ಅಧ್ಯಕ್ಷ ಸುಹಾನ್ ಆಳ್ವ ಇದ್ದರು.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search