• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಹಿಂದೂಗಳ ಶಕ್ತಿ ದಮನ ಮಾಡುತ್ತಿರುವ ಸರಕಾರ:ಕಟೀಲ್

TNN Correspondent Posted On September 7, 2017
0


0
Shares
  • Share On Facebook
  • Tweet It

ಮಂಗಳೂರು: ರಾಜ್ಯ ಸರಕಾರದ ನಿರ್ಲಕ್ಷ್ಯದಿಂದ ಮತ್ತು ಮತಾಂಧ ಸಂಘಟನೆಗಳಿಗೆ ಬೆಂಬಲ ನೀಡಿದ್ದರಿಂದ ರಾಜ್ಯದಲ್ಲಿ ಹಿಂದೂ ಸಂಘಟನೆಗಳು 12 ಕಾರ್ಯಕರ್ತರ ಹತ್ಯೆಯಾಗಿದೆ. ಆದರೂ ಇದುವರೆಗೆ ಒಬ್ಬರೇ ಒಬ್ಬ ಆರೋಪಿಗಳನ್ನು ಬಂಧಿಸಿಲ್ಲ. ಅಲ್ಲದೇ ಮತಾಂಧ ಸಂಘಟನೆಗಳಾದ, ಕೊಲೆಯಲ್ಲಿ ಕೆಎಫ್‌ಡಿ, ಪಿಎಫ್‌ಐ ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದಾರೆ ಎಂದು ತನಿಖೆಯಲ್ಲಿ ತಿಳಿದು ಬಂದರೂ ರಾಜ್ಯ ಸರಕಾರ ಕ್ರಮ ಕೈಗೊಂಡಿಲ್ಲ ಎಂದು ಸಂಸದ ನಳೀನ್ ಕುಮಾರ ಕಟೀಲ್ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಂಗಳೂರಿನ ಗಾಂಧಿ ವೃತ್ತದಲ್ಲಿ ನಡೆದ ಮಂಗಳೂರು ಚಲೋ ಸಮಾವೇಶದಲ್ಲಿ ಮಾತನಾಡಿ, ರಾಜ್ಯದಲ್ಲಿ 12 ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ. ಹತ್ಯೆಯ ಹಿಂದೆ ಮತಾಂಧ ಸಂಘಟನೆಗಳ ಕೈವಾಡ ಇರುವುದು ತನಿಖೆಯಿಂದ ತಿಳಿದು ಬಂದಿದೆ. ಆದರೂ ಸರಕಾರ ಮತಾಂಧ ಸಂಘಟನೆಗಳನ್ನು ನಿಷೇಧಿಸಿಲ್ಲ. ಬದಲಾಗಿ ಹಿಂದೂ ಹೋರಾಟಗಾರರನ್ನು ಹತ್ತಿಕ್ಕುವ ಕಾರ್ಯ ಮಾಡುತ್ತಿದೆ ಎಂದು ಆರೋಪಿಸಿದರು.
ಕರಾವಳಿ ಜಿಲ್ಲೆಯಲ್ಲಿ ಗೋ ಹಂತಕರು ರಾಜಾರೋಷವಾಗಿ ತಿರುಗುತ್ತಿದ್ದಾರೆ. ಅಲ್ಲಲ್ಲಿ ಪಿಎಫ್‌ಐ ಹಾಗೂ ಮತಾಂಧ ಸಂಘಟನೆಗಳು ಸಮಾಜ ದ್ರೋಹಿ ಕಾರ್ಯದಲ್ಲಿ ನಿರತವಾಗಿದ್ದರೂ ಹಿಂದೂಗಳ ವಿರುದ್ಧ ಸರಕಾರ ಸುಳ್ಳು ಪ್ರಕರಣ ದಾಖಲಿಸುತ್ತಿಿದೆ. ಆದ್ದರಿಂದ ಕರಾವಳಿ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಕೂಡಲೇ ಮತಾಂಧ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.

ಸಂಸದ, ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಪ್ರತಾಪ್ ಸಿಂಹ ಮಾತನಾಡಿ, ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ನಿರಂತರವಾಗಿ ನಡೆಯುತ್ತಿದೆ. ಸಿದ್ದರಾಮಯ್ಯ ಸರಕಾರ ಕ್ರಮ ಕೈಗೊಳ್ಳದೇ ಹಿಂದೂಗಳನ್ನೇ ದಮನ ಮಾಡುತ್ತಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಹಿಂದೂಗಳ ಹತ್ಯೆಯಾದರೂ ಸರಕಾರ, ಪಿಎಫ್‌ಐ ಸೇರಿ ಮತಾಂಧ ಸಂಘಟನೆಗಳ ಮೇಲಿನ ಪ್ರಕರಣ ಹಿಂಪಡೆದು ಹಿಂಸಾ ಕಾರ್ಯಗಳಿಗೆ ಪ್ರೇರಣೆ ನೀಡುತ್ತಿದೆ. ಕೆಎಫ್‌ಡಿ, ಪಿಎಫ್‌ಐ ನಿಷೇಧಿಸುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಪ್ರತಿಪಕ್ಷ ಮುಖಂಡರಾದ ಜಗದೀಶ ಶೆಟ್ಟರ್, ಕೆ.ಎಸ್.ಈಶ್ವರಪ್ಪ , ಪ್ರಮುಖರಾದ ಶೋಭಾ ಕರಂದ್ಲಾಜೆ, ಆರ್.ಅಶೋಕ್, ಅರವಿಂದ ಲಿಂಬಾವಳಿ, ಸಿ.ಟಿ.ರವಿ, ಸುನಿಲ್ ಕುಮಾರ್ ಇದ್ದರು.

 

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search