• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!

Tulunadu News Posted On September 16, 2025
0


0
Shares
  • Share On Facebook
  • Tweet It

ನಾಯಿಗಳಿಗೂ ಜೈಲು ಶಿಕ್ಷೆನಾ? ಇಂತಹದೊಂದು ವಿನೂತನ ಐಡಿಯಾ ಉತ್ತರ ಪ್ರದೇಶದಲ್ಲಿ ಜಾರಿಗೆ ಬರಲಿದೆ. ಯುಪಿಯ ಪ್ರಯಾಗರಾಜ್ ನಲ್ಲಿ ಬೀದಿನಾಯಿಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಅವುಗಳು ಜನರನ್ನು ಕಚ್ಚುವ ಪ್ರಕರಣಗಳು ಕೂಡ ಹೆಚ್ಚಾಗುತ್ತಿವೆ. ಆದ್ದರಿಂದ ನಾಯಿಗಳಿಗೆ ಶಿಕ್ಷೆ ನೀಡಬೇಕು ಎಂದು ರಾಜ್ಯ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಮೃತ್ ಅಭಿಜಿತ್ ಅವರು ಹೊರಡಿಸಿದ ಆದೇಶದ ಪ್ರಕಾರ ಬೀದಿ ನಾಯಿ ಎರಡು ಬಾರಿ ಜನರನ್ನು ಕಚ್ಚಿದರೆ, ಅದಕ್ಕೆ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ.

ಈ ನಿಯಮವೂ ಹಿಂಸಾತ್ಮಕವಾಗಿ ವರ್ತಿಸಿ ಜನರ ಪ್ರಾಣದ ಮೇಲೆ ಆಟವಾಡುವ ಪ್ರಾಣಿಗಳಿಗೆ ಅನ್ವಯಿಸುತ್ತದೆ. ಯೋಗಿ ಸರಕಾರದ ಈ ಆದೇಶವು ಬೀದಿನಾಯಿಗಳ ಸಮಸ್ಯೆಯನ್ನು ನಿಯಂತ್ರಿಸುವ ಗುರಿಯನ್ನು ಹೊಂದಿದೆ. ಯಾವುದೇ ಒಂದು ನಾಯಿ ಮೊದಲ ಬಾರಿಗೆ ಯಾರನ್ನಾದರೂ ಕಚ್ಚಿದರೆ ಆ ನಾಯಿಗೆ 10 ದಿನಗಳ ಶಿಕ್ಷೆ ವಿಧಿಸಲಾಗುತ್ತದೆ. ಶಿಕ್ಷೆ ಯಾವ ಸ್ವರೂಪದಲ್ಲಿ ಇರುತ್ತದೆ ಎಂದರೆ ಆ ನಾಯಿಯನ್ನು ಪ್ರಾಣಿಗಳ ಜನನ ನಿಯಂತ್ರಣ ಕೇಂದ್ರ (ಎಬಿಸಿ ಕೇಂದ್ರ) ಯಲ್ಲಿ ಇರಿಸಲಾಗುತ್ತದೆ. ಇಲ್ಲಿ ನಾಯಿಗೆ ಚಿಕಿತ್ಸೆ ನೀಡಿ, ವೀಕ್ಷಣೆಯಡಿ ಇರಿಸಲಾಗುತ್ತದೆ. ಎಬಿಸಿ ಕೇಂದ್ರದಲ್ಲಿ ಆಂಟಿ-ರೇಬಿಸ್ ಲಸಿಕೆಗಳನ್ನು ನೀಡಿ ನಾಯಿಯ ಆರೋಗ್ಯ ಮತ್ತು ನಡವಳಿಕೆಯನ್ನು ಪರಿಶೀಲಿಸಲಾಗುತ್ತದೆ. 10 ದಿನಗಳ ನಂತರ ಬಿಡುಗಡೆಯಾಗುವ ಮೊದಲು ನಾಯಿಯ ದೇಹದಲ್ಲಿ ಮೈಕ್ರೋಚಿಪ್ ಅಳವಡಿಸಲಾಗುತ್ತದೆ. ಈ ಚಿಪ್ ಮೂಲಕ ನಾಯಿಯ ನಡವಳಿಕೆಯನ್ನು ಮೇಲ್ವಿಚಾರಣೆ ಮಾಡಬಹುದು. ನಾಯಿಯ ಸಂಪೂರ್ಣ ವಿವರಗಳನ್ನು ಫಾರ್ಮ್‌ನಲ್ಲಿ ನೋಂದಾಯಿಸಿ, ವೀಡಿಯೊ ರೆಕಾರ್ಡಿಂಗ್ ಮೂಲಕ ಚಟುವಟಿಕೆಗಳನ್ನು ದಾಖಲಿಸಲಾಗುತ್ತದೆ. ಒಂದು ವೇಳೆ ಆ ನಾಯಿ ಎರಡನೇ ಬಾರಿಗೆ ಕಚ್ಚಿದರೆ ಜೀವಾವಧಿ ಶಿಕ್ಷೆಯಾಗುತ್ತದೆ. ಈಗಾಗಲೇ ಮೊದಲನೇ ಬಾರಿಗೆ ಕಚ್ಚಿ ಎಬಿಸಿ ಕೇಂದ್ರಕ್ಕೆ ಹೋಗಿ ಬಂದ ನಾಯಿ ಮತ್ತೊಮ್ಮೆ ಯಾರನ್ನಾದರೂ ಕಚ್ಚಿದರೆ, ಮೂರು ಸದಸ್ಯರ ತಂಡವು ತನಿಖೆ ನಡೆಸುತ್ತದೆ. 

ಈತಂಡದಲ್ಲಿ ಜಾನುವಾರು ಅಧಿಕಾರಿ, ಸ್ಥಳೀಯ ಸಂಸ್ಥೆಯ ಪ್ರತಿನಿಧಿ ಮತ್ತು ಸೊಸೈಟಿ ಫಾರ್ ಪ್ರಿವೆನ್ಷನ್ ಆಫ್ ಕ್ರೂಯೆಲ್ಟಿ ಟು ಅನಿಮಲ್ಸ್ (ಎಸ್‌ಪಿಸಿಎ) ಸದಸ್ಯರು ಇರುತ್ತಾರೆ. ಈ ತಂಡವು ನಾಯಿ ದಾಳಿ ಮಾಡಲು ಪ್ರೇರೇಪಿಸಲ್ಪಟ್ಟಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸುತ್ತದೆ. ಯಾವುದೇ ಪುರಾವೆಗಳಿಲ್ಲದಿದ್ದರೆ, ನಾಯಿಯನ್ನು ಜೀವಾವಧಿ ಎಬಿಸಿ ಕೇಂದ್ರದಲ್ಲಿ ಇರಿಸಲಾಗುತ್ತದೆ. ಇದು ನಾಯಿಗೆ ಜೀವಮಾನ ಶಿಕ್ಷೆಯಂತಿದೆ. ಈ ಶಿಕ್ಷೆಯಿಂದ ಬಿಡುಗಡೆಯಾಗಲು, ಯಾರಾದರೂ ಅಧಿಕೃತವಾಗಿ ದತ್ತು ಪಡೆದಾಗ ಮಾತ್ರ ಸಾಧ್ಯ.

ಈ ನಿಯಮವು ದೇಶದ ಇತರ ರಾಜ್ಯಗಳಿಗೆ ಮಾದರಿಯಾಗಬಹುದು. ಉತ್ತರ ಪ್ರದೇಶದಲ್ಲಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚು ಇರುವುದರಿಂದ ಈ ಆದೇಶವು ಮಹತ್ವದ್ದು. ದೇಶದಲ್ಲಿ 1.5 ಕೋಟಿ ಬೀದಿ ನಾಯಿಗಳಿದ್ದು, ಅವುಗಳಿಂದ ರೇಬೀಸ್ ಮತ್ತು ಕಡಿತ ಪ್ರಕರಣಗಳು ಹೆಚ್ಚಾಗಿವೆ. ಸುಪ್ರೀಂ ಕೋರ್ಟ್ ಕೂಡ ಈ ಸಮಸ್ಯೆಯ ಬಗ್ಗೆ ಚಿಂತೆ ವ್ಯಕ್ತಪಡಿಸಿದ್ದು, ಡೆಲ್ಹಿಯಲ್ಲಿ ನಾಯಿಗಳನ್ನು ಆಶ್ರಯಕ್ಕೆ ಕಳುಹಿಸುವಂತೆ ಆದೇಶ ನೀಡಿದೆ. ಯೋಗಿ ಸರ್ಕಾರದ ಈ ಕ್ರಮವು ಜನಸುರಕ್ಷತೆಯನ್ನು ಉನ್ನತೀಕರಿಸುತ್ತದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search