• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!

Tulunadu News Posted On September 17, 2025
0


0
Shares
  • Share On Facebook
  • Tweet It

ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಹೀದ್ ಅಫ್ರಿದಿ ಏನಾದರೂ ಹೇಳಿಕೆಯಿಂದ ಅಥವಾ ನಡೆಯಿಂದ ಆಗಾಗ ಚರ್ಚೆಯಲ್ಲಿರುತ್ತಾರೆ. ಅವರಿಗೆ ತಮ್ಮ ಹೇಳಿಕೆ ವಿವಾದವಾಗುತ್ತದೆ ಎಂದು ಗೊತ್ತಿರುವುದರಿಂದ ಅವರು ಬೇಕಂತಲೇ ಹಾಗೆ ಹೇಳುತ್ತಾರೋ ಅಥವಾ ಅವರು ಮನಸ್ಸಿಗೆ ಅನಿಸಿದ್ದನ್ನು ಯಾವುದೇ ಪಿಲ್ಟರ್ ಇಲ್ಲದೇ ಹೇಳುತ್ತಾರೋ ಎನ್ನುವುದು ಅವರಿಗೆ ಬಿಟ್ಟಿದ್ದು. ಆದರೆ ಈಗ ಅವರು ಕೊಟ್ಟಿರುವ ಹೇಳಿಕೆ ಮಾತ್ರ ಭಾರತದಲ್ಲಿ ಒಂದಿಷ್ಟು ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಇದನ್ನು ಸ್ವಾಗತಿಸಲೂ ಆಗದೇ, ನಿರಾಕರಿಸಲೂ ಆಗದೇ ಅಡಕತ್ತರಿಗೆ ಸಿಲುಕುವ ಪ್ರಸಂಗ ಸೃಷ್ಟಿಯಾಗಿದೆ.

ಅವರು ಮಾತನಾಡುತ್ತಾ ” ರಾಹುಲ್ ಗಾಂಧಿ ಸಕರಾತ್ಮಕ ವ್ಯಕ್ತಿ” ಎಂದು ಶ್ಲಾಘಿಸಿದ್ದಾರೆ. ಏಷ್ಯಾ ಕಪ್ ನಲ್ಲಿ ಭಾರತ ಹಾಗೂ ಪಾಕ್ ಪಂದ್ಯದ ಬಗ್ಗೆ ಟಿವಿ ಸಂದರ್ಶನವೊಂದರಲ್ಲಿ ಮಾತನಾಡಿರುವ ಅಫ್ರಿದಿ ” ಭಾರತದಲ್ಲಿರುವ ಕೇಂದ್ರ ಸರಕಾರ ಯಾವಾಗಲೂ ಅಧಿಕಾರದಲ್ಲಿ ಉಳಿಯಲು ಧರ್ಮ, ಹಿಂದೂ – ಮುಸ್ಲಿಂ ಅಸ್ತ್ರ ಪ್ರಯೋಗಿಸುತ್ತದೆ. ಇದು ತುಂಬಾ ಕೆಟ್ಟ ಮನಸ್ಥಿತಿ. ರಾಹುಲ್ ಗಾಂಧಿ ಅವರದ್ದು ಸಕರಾತ್ಮಕ ಮನೋಭಾವ. ಅವರು ಮಾತಿನ ಮೇಲೆ ನಂಬಿಕೆ ಇಡುತ್ತಾರೆ” ಎಂದು ಹೊಗಳಿದ್ದಾರೆ. ಅಫ್ರಿದಿ ಯಾವ ಆಧಾರದ ಮೇಲೆ ರಾಹುಲ್ ಅವರನ್ನು ಹೊಗಳಿದ್ದಾರೋ ಅವರ ವಿವೇಚನೆಗೆ ಬಿಟ್ಟಿದ್ದು, ಆದರೆ ಈ ಹೇಳಿಕೆಯನ್ನು ಕಾಂಗ್ರೆಸ್ ಸ್ವಾಗತಿಸಲಾಗದೇ ಹಾಗೆ ಬಿಡಲೂ ಆಗದೇ ಗೊಂದಲದಲ್ಲಿ ಇರಬೇಕಾದ ಪರಿಸ್ಥಿತಿಯಲ್ಲಿರುವುದು ನಿಜ. ಶತ್ರು ರಾಷ್ಟ್ರದ ವಿಐಪಿಯೊಬ್ಬರು ಭಾರತದ ವಿಪಕ್ಷದ ಉನ್ನತ ನಾಯಕನನ್ನು ಹೊಗಳುವುದು ಎಂದರೆ ಅದು ನಿಜಕ್ಕೂ ಅ ಪಕ್ಷಕ್ಕೆ ಕಸಿವಿಸಿ ತಂದೊಡ್ಡುತ್ತದೆ.

ಶಹೀದ್ ಆಫ್ರಿದಿ ಅವರ ಹೇಳಿಕೆಗಳು ಬಿಜೆಪಿ ವಲಯದಲ್ಲಿ ತೀವ್ರ ಪ್ರತಿಕ್ರಿಯೆಗೆ ಕಾರಣವಾಗಿದೆ. ಬಿಜೆಪಿ ರಾಷ್ಟ್ರೀಯ ವಕ್ತಾರ ಶಹಜಾದ್ ಪೂನಾವಾಲಾ ಅವರು ಆಫ್ರಿದಿ ಹೇಳಿಕೆಗಳು ಕಾಂಗ್ರೆಸ್ ಮತ್ತು ಪಾಕಿಸ್ತಾನದ ನ್ಯಾರೆಟಿವ್ ನಡುವಿನ “ಹಳೆಯ ಹೊಂದಾಣಿಕೆ”ಯನ್ನು ಬಯಲಿಗೆಳೆದಿವೆ ಎಂದು ಟೀಕಿಸಿದರು.

“ಹಫೀಜ್ ಸಯೀದ್ ನಂತರ ಈಗ ಶಹೀದ್ ಆಫ್ರಿದಿ ರಾಹುಲ್ ಗಾಂಧಿಯನ್ನು ಹೊಗಳಿದ್ದಾರೆ… ಆಶ್ಚರ್ಯವಿಲ್ಲ! ಭಾರತವನ್ನು ದ್ವೇಷಿಸುವ ಪ್ರತಿಯೊಬ್ಬರೂ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ನಲ್ಲಿ ಮಿತ್ರರನ್ನು ಕಂಡುಕೊಳ್ಳುತ್ತಾರೆ,” ಎಂದು ಶಹಜಾದ್ ಪೂನಾವಾಲಾ “ಎಕ್ಸ್” (ಹಳೆಯ ಟ್ವಿಟ್ಟರ್) ನಲ್ಲಿ ಬರೆದಿದ್ದಾರೆ.

ಇದರೊಂದಿಗೆ ಅವರು, ಕಾಶ್ಮೀರದ ಕಲಂ 370 ಇಂದ ಹಿಡಿದು ಮುಂಬೈ ಭಯೋತ್ಪಾದನಾ ದಾಳಿವರೆಗೂ, ಕಾಂಗ್ರೆಸ್ ಯಾವಾಗಲೂ ಪಾಕಿಸ್ತಾನದ ನಿಲುವಿಗೆ ಬೆನ್ನು ತಟ್ಟಿದೆಯೆಂದು ಆರೋಪಿಸಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search