• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಜಿಎಸ್ ಟಿ ಇಳಿಕೆ: ಸೆ 22 ರಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ!

Tulunadu News Posted On September 20, 2025
0


0
Shares
  • Share On Facebook
  • Tweet It

ಕೇಂದ್ರ ಸರಕಾರ ಜಿಎಸ್ ಟಿ ಸ್ಲ್ಯಾಬ್ ದರವನ್ನು ಶೇಕಡಾ 12 ರಿಂದ 5 ಕ್ಕೆ ಇಳಿಸಿ ಆದೇಶ ಹೊರಡಿಸಿರುವ ಹಿನ್ನಲೆಯಲ್ಲಿ ಇತ್ತ ಕರ್ನಾಟಕದಲ್ಲಿ ಕೆಎಂಎಫ್ ತನ್ನ ನಂದಿನಿ ಹಾಲಿನ ಉತ್ಪನ್ನಗಳ ದರವನ್ನು ಇಳಿಕೆ ಮಾಡಿದೆ. ಇದು ನವರಾತ್ರಿಯ ಸಡಗರದಲ್ಲಿರುವ ನಾಗರಿಕರಲ್ಲಿ ಸಮಾಧಾನವನ್ನು ತಂದಿದೆ. ಸೋಮವಾರದಿಂದ ಹೊಸ ದರ ಜಾರಿಗೆ ಕೆಎಂಎಫ್ ಯೋಜನೆ ಹಾಕಿಕೊಂಡಿದೆ. ಯಾವುದರ ದರ ಇಳಿಕೆ ಎಷ್ಟು ಅನ್ನೊಂದು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್​​ಟಿಯನ್ನು (GST) ಇಳಿಕೆ ಬೆನ್ನಲ್ಲೇ ಇದೀಗ ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆ ಆಗಿದ್ದು, ಸೋಮವಾರದಿಂದ ಹೊಸ ದರ ಜಾರಿಗೆ ಬರುವ ಸಾಧ್ಯತೆ ಇದೆ. ಆ ಮೂಲಕ ರಾಜ್ಯದ ಜನರಿಗೆ ಕೆಎಂಎಫ್​​ ಗುಡ್​​ ನ್ಯೂಸ್ ಕೊಟ್ಟಿದೆ. ಆದರೆ ಅಧಿಕೃತ ಆದೇಶ ಬಾಕಿಯಿದೆ.

ಜಿಎಸ್​​ಟಿ ಇಳಿಕೆ ಬೆನ್ನಲ್ಲೇ ದರ ಇಳಿಕೆಗೆ ಸಜ್ಜಾಗಿರುವ ಕೆಎಂಎಫ್​​ ಈ ಬಗ್ಗೆ ಶುಕ್ರವಾರ ಕೆಎಂಎಫ್​​ ಅಧಿಕಾರಿಗಳು ಸಭೆ ಮಾಡಿದ್ದಾರೆ. ಸಭೆಯಲ್ಲಿ ಯಾವುದರ ದರ ಎಷ್ಟು ಇಳಿಕೆ ಎಂಬುವುದನ್ನು ನಿರ್ಧಾರ ಮಾಡಲಾಗಿದೆ. ಮೊಸರಿನ ದರ ಲೀಟರ್​ಗೆ 4 ರೂ. ಇಳಿಕೆ ನಿರೀಕ್ಷೆ ಇದೆ. ಜೊತೆಗೆ ತುಪ್ಪ, ಬೆಣ್ಣೆ, ಲಸ್ಸಿ ಸೇರಿ ಹಲವು ಉತ್ಪನ್ನಗಳ ದರ ಕೂಡ ಇಳಿಕೆ ಆಗಿದೆ.
2017ರಲ್ಲಿ ಹಾಲಿನ ಉತ್ಪನ್ನಗಳ ಮೇಲೆ ಜಿಎಸ್​​ಟಿ ವಿಧಿಸಲಾಗಿತ್ತು. 2022 ರಲ್ಲಿ ಜಿಎಸ್​ಟಿಯನ್ನ ಶೇಕಡಾ 22ಕ್ಕೆ ಹೆಚ್ಚಿಸಲಾಗಿತ್ತು. ಆದರೆ ಇತ್ತೀಚೆಗೆ ಕೇಂದ್ರ ಸರ್ಕಾರ ಹಾಲಿನ ಉತ್ಪನ್ನಗಳ ಮೇಲಿನ ಸರಕು ಸೇವಾ ತೆರಿಗೆಯನ್ನು ಶೇ.12ರಿಂದ 5ಕ್ಕೆ ಇಳಿಕೆ ಮಾಡಿದ್ದು, ಇದು ಸೆ. 22ರಿಂದ ಜಾರಿಗೆ ಬರಲಿದೆ. ಆ ಮೂಲಕ ಗ್ರಾಹಕರು ಸ್ವಲ್ಪಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿದೆ.
ಕರ್ನಾಟಕದ ಸ್ಟಾರ್ ಬ್ರ್ಯಾಂಡ್ ಕೆಎಂಎಫ್​​ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದೆ. ಎಲ್ಲೆಡೆ ಭಾರೀ ಬೇಡಿಕೆ ಇದೆ. ಇತ್ತೀಚೆಗೆ ನಂದಿನಿ ಹಾಲಿನ ಎಲ್ಲಾ ಮಾದರಿಯ ಪ್ಯಾಕೆಟ್​ ದರ ಪ್ರತಿ ಲೀಟರ್​ಗೆ 4 ರೂ. ಏರಿಕೆ ಮಾಡಲಾಗಿತ್ತು. ಅದೇ ರೀತಿಯಾಗಿ ಮೊಸರಿನ ದರ ಕೂಡ ಪ್ರತಿ ಲೀಟರ್​​ಗೆ 4 ರೂ. ಏರಿಕೆ ಮಾಡಲಾಗಿತ್ತು. ಸದ್ಯ ಈ ನಾಲ್ಕು ರೂ. ಅನ್ನು ಕೆಎಂಎಫ್​ ಕಡಿತಕ್ಕೆ ನಿರ್ಧರಿಸಿದೆ.
ಈ ನಂದಿನ ಉತ್ಪನ್ನಗಳ ದರ ಇಳಿಕೆ ಕುರಿತು ನಾಡಿದ್ದು ಅಂದರೆ ಸೆಪ್ಟೆಂಬರ್ 20ರಂದು ಕೆಎಂಎಫ್​ ನ ಹಿರಿಯ ಅಧಿಕಾರಿಗಳ ಮಹತ್ವದ ಸಭೆ ನಡೆಯಲಿದ್ದು, ಬೆಲೆ ಇಳಿಕೆ ಬಗ್ಗೆ ಕೈಗೊಳ್ಳಲಿದೆ. ಒಂದು ವೇಳೆ ಸಭೆಯಲ್ಲಿ ದರ ಇಳಿಕೆ ಬಗ್ಗೆ ನಿರ್ಧಾರ ಕೈಗೊಂಡರೆ, ಸೋಮವಾರದಿಂದಲೇ ನಂದಿನಿ ಉತ್ಪನ್ನಗಳ ಪರಿಸ್ಕೃತ ದರ ಜಾರಿಯಾಗುವ ಸಾಧ್ಯತೆಗಳು ಇವೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಭಾರೀ ಅನುಕೂಲವಾಗಲಿದೆ.
2025, ಏಪ್ರಿಲ್ 1ರಂದು ನಂದಿನಿ ಹಾಲಿನ ಎಲ್ಲಾ ಮಾದರಿಯ ಪ್ಯಾಕೆಟ್​ ದರ ಪ್ರತಿ ಲೀಟರ್​ಗೆ 4 ರೂಪಾಯಿ ಏರಿಕೆ ಮಾಡಿತ್ತು. ಜೊತೆಗೆ ಮೊಸರಿನ ದರವೂ ಸಹ ಪ್ರತಿ ಲೀಟರ್​​ಗೆ 4 ರೂಪಾಯಿ ಏರಿಕೆಯಾಗಿತ್ತು. ಇದೀಗ ಇದೇ ನಾಲ್ಕು ರೂಪಾಯಿಯನ್ನು ಕಡಿತ ಮಾಡಲು ಕೆಎಂಎಫ್​ ಮುಂದಾಗಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search