• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಜಿಎಸ್ ಟಿ ಇಳಿಕೆ: ಸೆ 22 ರಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ!

Tulunadu News Posted On September 20, 2025
0


0
Shares
  • Share On Facebook
  • Tweet It

ಕೇಂದ್ರ ಸರಕಾರ ಜಿಎಸ್ ಟಿ ಸ್ಲ್ಯಾಬ್ ದರವನ್ನು ಶೇಕಡಾ 12 ರಿಂದ 5 ಕ್ಕೆ ಇಳಿಸಿ ಆದೇಶ ಹೊರಡಿಸಿರುವ ಹಿನ್ನಲೆಯಲ್ಲಿ ಇತ್ತ ಕರ್ನಾಟಕದಲ್ಲಿ ಕೆಎಂಎಫ್ ತನ್ನ ನಂದಿನಿ ಹಾಲಿನ ಉತ್ಪನ್ನಗಳ ದರವನ್ನು ಇಳಿಕೆ ಮಾಡಿದೆ. ಇದು ನವರಾತ್ರಿಯ ಸಡಗರದಲ್ಲಿರುವ ನಾಗರಿಕರಲ್ಲಿ ಸಮಾಧಾನವನ್ನು ತಂದಿದೆ. ಸೋಮವಾರದಿಂದ ಹೊಸ ದರ ಜಾರಿಗೆ ಕೆಎಂಎಫ್ ಯೋಜನೆ ಹಾಕಿಕೊಂಡಿದೆ. ಯಾವುದರ ದರ ಇಳಿಕೆ ಎಷ್ಟು ಅನ್ನೊಂದು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್​​ಟಿಯನ್ನು (GST) ಇಳಿಕೆ ಬೆನ್ನಲ್ಲೇ ಇದೀಗ ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆ ಆಗಿದ್ದು, ಸೋಮವಾರದಿಂದ ಹೊಸ ದರ ಜಾರಿಗೆ ಬರುವ ಸಾಧ್ಯತೆ ಇದೆ. ಆ ಮೂಲಕ ರಾಜ್ಯದ ಜನರಿಗೆ ಕೆಎಂಎಫ್​​ ಗುಡ್​​ ನ್ಯೂಸ್ ಕೊಟ್ಟಿದೆ. ಆದರೆ ಅಧಿಕೃತ ಆದೇಶ ಬಾಕಿಯಿದೆ.

ಜಿಎಸ್​​ಟಿ ಇಳಿಕೆ ಬೆನ್ನಲ್ಲೇ ದರ ಇಳಿಕೆಗೆ ಸಜ್ಜಾಗಿರುವ ಕೆಎಂಎಫ್​​ ಈ ಬಗ್ಗೆ ಶುಕ್ರವಾರ ಕೆಎಂಎಫ್​​ ಅಧಿಕಾರಿಗಳು ಸಭೆ ಮಾಡಿದ್ದಾರೆ. ಸಭೆಯಲ್ಲಿ ಯಾವುದರ ದರ ಎಷ್ಟು ಇಳಿಕೆ ಎಂಬುವುದನ್ನು ನಿರ್ಧಾರ ಮಾಡಲಾಗಿದೆ. ಮೊಸರಿನ ದರ ಲೀಟರ್​ಗೆ 4 ರೂ. ಇಳಿಕೆ ನಿರೀಕ್ಷೆ ಇದೆ. ಜೊತೆಗೆ ತುಪ್ಪ, ಬೆಣ್ಣೆ, ಲಸ್ಸಿ ಸೇರಿ ಹಲವು ಉತ್ಪನ್ನಗಳ ದರ ಕೂಡ ಇಳಿಕೆ ಆಗಿದೆ.
2017ರಲ್ಲಿ ಹಾಲಿನ ಉತ್ಪನ್ನಗಳ ಮೇಲೆ ಜಿಎಸ್​​ಟಿ ವಿಧಿಸಲಾಗಿತ್ತು. 2022 ರಲ್ಲಿ ಜಿಎಸ್​ಟಿಯನ್ನ ಶೇಕಡಾ 22ಕ್ಕೆ ಹೆಚ್ಚಿಸಲಾಗಿತ್ತು. ಆದರೆ ಇತ್ತೀಚೆಗೆ ಕೇಂದ್ರ ಸರ್ಕಾರ ಹಾಲಿನ ಉತ್ಪನ್ನಗಳ ಮೇಲಿನ ಸರಕು ಸೇವಾ ತೆರಿಗೆಯನ್ನು ಶೇ.12ರಿಂದ 5ಕ್ಕೆ ಇಳಿಕೆ ಮಾಡಿದ್ದು, ಇದು ಸೆ. 22ರಿಂದ ಜಾರಿಗೆ ಬರಲಿದೆ. ಆ ಮೂಲಕ ಗ್ರಾಹಕರು ಸ್ವಲ್ಪಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿದೆ.
ಕರ್ನಾಟಕದ ಸ್ಟಾರ್ ಬ್ರ್ಯಾಂಡ್ ಕೆಎಂಎಫ್​​ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದೆ. ಎಲ್ಲೆಡೆ ಭಾರೀ ಬೇಡಿಕೆ ಇದೆ. ಇತ್ತೀಚೆಗೆ ನಂದಿನಿ ಹಾಲಿನ ಎಲ್ಲಾ ಮಾದರಿಯ ಪ್ಯಾಕೆಟ್​ ದರ ಪ್ರತಿ ಲೀಟರ್​ಗೆ 4 ರೂ. ಏರಿಕೆ ಮಾಡಲಾಗಿತ್ತು. ಅದೇ ರೀತಿಯಾಗಿ ಮೊಸರಿನ ದರ ಕೂಡ ಪ್ರತಿ ಲೀಟರ್​​ಗೆ 4 ರೂ. ಏರಿಕೆ ಮಾಡಲಾಗಿತ್ತು. ಸದ್ಯ ಈ ನಾಲ್ಕು ರೂ. ಅನ್ನು ಕೆಎಂಎಫ್​ ಕಡಿತಕ್ಕೆ ನಿರ್ಧರಿಸಿದೆ.
ಈ ನಂದಿನ ಉತ್ಪನ್ನಗಳ ದರ ಇಳಿಕೆ ಕುರಿತು ನಾಡಿದ್ದು ಅಂದರೆ ಸೆಪ್ಟೆಂಬರ್ 20ರಂದು ಕೆಎಂಎಫ್​ ನ ಹಿರಿಯ ಅಧಿಕಾರಿಗಳ ಮಹತ್ವದ ಸಭೆ ನಡೆಯಲಿದ್ದು, ಬೆಲೆ ಇಳಿಕೆ ಬಗ್ಗೆ ಕೈಗೊಳ್ಳಲಿದೆ. ಒಂದು ವೇಳೆ ಸಭೆಯಲ್ಲಿ ದರ ಇಳಿಕೆ ಬಗ್ಗೆ ನಿರ್ಧಾರ ಕೈಗೊಂಡರೆ, ಸೋಮವಾರದಿಂದಲೇ ನಂದಿನಿ ಉತ್ಪನ್ನಗಳ ಪರಿಸ್ಕೃತ ದರ ಜಾರಿಯಾಗುವ ಸಾಧ್ಯತೆಗಳು ಇವೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಭಾರೀ ಅನುಕೂಲವಾಗಲಿದೆ.
2025, ಏಪ್ರಿಲ್ 1ರಂದು ನಂದಿನಿ ಹಾಲಿನ ಎಲ್ಲಾ ಮಾದರಿಯ ಪ್ಯಾಕೆಟ್​ ದರ ಪ್ರತಿ ಲೀಟರ್​ಗೆ 4 ರೂಪಾಯಿ ಏರಿಕೆ ಮಾಡಿತ್ತು. ಜೊತೆಗೆ ಮೊಸರಿನ ದರವೂ ಸಹ ಪ್ರತಿ ಲೀಟರ್​​ಗೆ 4 ರೂಪಾಯಿ ಏರಿಕೆಯಾಗಿತ್ತು. ಇದೀಗ ಇದೇ ನಾಲ್ಕು ರೂಪಾಯಿಯನ್ನು ಕಡಿತ ಮಾಡಲು ಕೆಎಂಎಫ್​ ಮುಂದಾಗಿದೆ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search