• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

Tulunadu News Posted On September 23, 2025
0


0
Shares
  • Share On Facebook
  • Tweet It

ಸುಹಾನಾ ಸೈಯದ್. ಈ ಹೆಸರು ಯಾರಿಗೆ ಗೊತ್ತಿಲ್ಲ ಹೇಳಿ. . ಸರಿಗಮಪದ ಎಂಬ ಸಂಗೀತ ರಿಯಾಲಿಟಿ ಶೋದಿಂದ ಬೆಳಕಿಗೆ ಬಂದು ಮುಸ್ಲಿಂ ಆಗಿದ್ದರೂ ಹಿಂದೂ ದೇವರ ಹಾಡನ್ನು ಹಾಡುವ ಮೂಲಕ ಒಂದಿಷ್ಟು ವಿವಾದದ ಕೇಂದ್ರ ಬಿಂದು ಆಗಿದ್ದಳು. ಎಂಟು ವರ್ಷಗಳ ಹಿಂದೆ ಅವಳು ಹಾಡಿರುವ ರಾಮನ ಭಕ್ತಿ ಹಾಡು ಬಹಳ ಫೇಮಸ್ ಆಗಿ, ಸಾಕಷ್ಟು ವೈರಲ್ ಆಗಿ, ಒಬ್ಬ ಮುಸ್ಲಿಂ ಮತದವರಾಗಿ ಹೀಗೆ ಹಾಡುವುದು ಎಷ್ಟು ಸರಿ ಎಂದು ಆಕೆಯ ಮತದವರಿಂದಲೇ ಟೀಕೆಗೆ ಗುರಿಯಾಗಿದ್ದಳು.

ಅವಳಿಗೆ ಆಗ ಬಂದಿರುವ ವಿರೋಧ ಎಷ್ಟರಮಟ್ಟಿಗೆ ಇತ್ತು ಎಂದರೆ ಬೇರೆಯವರಾದರೆ ಈ ಸಂಗೀತವೂ ಬೇಡಾ, ವಿರೋಧವೂ ಬೇಡಾ ಎಂದು ತೆಪ್ಪಗೆ ಇರುತ್ತಿದ್ದರೋ ಎನೋ. ಆದರೆ ಆಕೆ ಅದನ್ನು ಒಂದು ಸವಾಲಾಗಿ ಸ್ವೀಕರಿಸಿದಳು. ಸಂಗೀತದಲ್ಲಿಯೇ ಸಾಧನೆ ಮಾಡಿದಳು. ಯಕ್ಷಗಾನ ಕ್ಷೇತ್ರದಲ್ಲಿಯೂ ಕೈ ಆಡಿಸಿದಳು. ತನ್ನದೇ ಅಭಿಮಾನಿ ವರ್ಗವನ್ನು ಸಂಪಾದಿಸಿಕೊಂಡಳು. ಹೀಗೆ ನಡೆಯುವಾಗಲೇ ಸುಹಾನಾ ಸೈಯದ್ ಸಂಗೀತದ ಬದುಕಿನಲ್ಲಿ ಪ್ರೇಮದ ತಂತಿ ಮೀಟಿದೆ. ಅವಳ ಸರಿಗಮಪದನಿಸ ಸಂಗೀತ ಜರ್ನಿಯಲ್ಲಿ ಹೊಸ ಸ್ವರಕ್ಕೆ ಕಾರಣನಾದ ಯುವಕನ ಹೆಸರು ಏನು ಗೊತ್ತಾ?

ನಿತಿನ್ ಶಿವಾಂಶ್. ಆತನಿಗೂ ಸಂಗೀತದ ಬಗ್ಗೆ ಒಲವಿದೆ. ರಂಗಭೂಮಿಯ ಹಿನ್ನಲೆಯ ನಿತಿನ್ ಶಿವಾಂಶ್ ಅವರೊಂದಿಗೆ ಹದಿನಾರು ವರ್ಷಗಳಿಂದ ಸುಹಾನ್ ಅವರಿಗೂ ಸ್ನೇಹವಿದ್ದು, ಶಾಲಾ ದಿನಗಳಲ್ಲಿಯೇ ಪರಿಚಯವಿತ್ತು ಎಂದು ಸ್ವತ: ಸುಹಾನಾ ಹೇಳಿಕೊಂಡಿದ್ದಾರೆ. 16 ವರ್ಷಗಳ ಸ್ನೇಹ ಈಗ ಪ್ರೀತಿಯಾಗಿ ಮೂಡಿದೆ ಎಂದು ಅವರು ಬಹಿರಂಗಪಡಿಸಿದ್ದಾರೆ. ಈ ಪ್ರೀತಿಯನ್ನು ಮದುವೆಯ ಸಂಬಂಧವಾಗಿ ಪರಿವರ್ತಿಸಲು ಸುಹಾನಾ ಹಾಗೂ ನಿತಿನ್ ಬಯಸಿದ್ದು, ಆದಷ್ಟು ಶೀಘ್ರದಲ್ಲಿ ಇವರು ಮದುವೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಇವರಿಬ್ಬರ ಭವಿಷ್ಯಕ್ಕೆ ಅನೇಕ ಸೆಲೆಬ್ರಿಟಿಗಳು ಶುಭಾಶಯ ಸಲ್ಲಿಸಿದ್ದು, ಸುಹಾನಾ ಅವರು ಅಭಿಮಾನಿಗಳಿಗೂ ತಮ್ಮನ್ನು ಹರಸುವಂತೆ ವಿನಂತಿಸಿದ್ದಾರೆ.

ಸುಹಾನ್ ಸೈಯದ್ ಹಾಗೂ ನಿತಿನ್ ಶಿವಾಂಶ್ ಪರಸ್ಪರ ಬೇರೆ ಬೇರೆ ಧರ್ಮದವರಾಗಿದ್ದರೂ, ಇಬ್ಬರೂ ಕಲಾಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದರೂ ಈಗ ವೈವಾಹಿಕ ಬದುಕಿಗೆ ಕಾಲಿಡಲು ತೀರ್ಮಾನಿಸುವ ಮೂಲಕ ಹೊಸ ಬದುಕನ್ನು ಆರಂಭಿಸಲು ತೀರ್ಮಾನಿಸಿದ್ದಾರೆ. ಇವರ ತರಹ ಅನೇಕರು ಹೀಗೆ ಪ್ರೀತಿಗೆ ಸಿಲುಕಿ ಮದುವೆಯಾಗಿ ಉತ್ತಮ ಬಾಳನ್ನು ಜೀವಿಸುತ್ತಿದ್ದಾರೆ. ಆದರೆ ಕೆಲವೊಮ್ಮೆ ಇಂತಹ ಮದುವೆಗಳಿಗೆ ಕೆಲವರ ವಿರೋಧವೂ ಇರುತ್ತದೆ. ಇವರ ಬದುಕಿನಲ್ಲಿ ಏನೂ ಅಡ್ಡಿ ಬರದೇ, ಎಲ್ಲವೂ ಸುಸೂತ್ರವಾಗಿ ನಡೆಯಲಿ ಎಂದು ನಾವು ಹಾರೈಸೋಣ, ಅಲ್ಲವೇ?

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search