• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

Tulunadu News Posted On September 23, 2025
0


0
Shares
  • Share On Facebook
  • Tweet It

ಸುಹಾನಾ ಸೈಯದ್. ಈ ಹೆಸರು ಯಾರಿಗೆ ಗೊತ್ತಿಲ್ಲ ಹೇಳಿ. . ಸರಿಗಮಪದ ಎಂಬ ಸಂಗೀತ ರಿಯಾಲಿಟಿ ಶೋದಿಂದ ಬೆಳಕಿಗೆ ಬಂದು ಮುಸ್ಲಿಂ ಆಗಿದ್ದರೂ ಹಿಂದೂ ದೇವರ ಹಾಡನ್ನು ಹಾಡುವ ಮೂಲಕ ಒಂದಿಷ್ಟು ವಿವಾದದ ಕೇಂದ್ರ ಬಿಂದು ಆಗಿದ್ದಳು. ಎಂಟು ವರ್ಷಗಳ ಹಿಂದೆ ಅವಳು ಹಾಡಿರುವ ರಾಮನ ಭಕ್ತಿ ಹಾಡು ಬಹಳ ಫೇಮಸ್ ಆಗಿ, ಸಾಕಷ್ಟು ವೈರಲ್ ಆಗಿ, ಒಬ್ಬ ಮುಸ್ಲಿಂ ಮತದವರಾಗಿ ಹೀಗೆ ಹಾಡುವುದು ಎಷ್ಟು ಸರಿ ಎಂದು ಆಕೆಯ ಮತದವರಿಂದಲೇ ಟೀಕೆಗೆ ಗುರಿಯಾಗಿದ್ದಳು.

ಅವಳಿಗೆ ಆಗ ಬಂದಿರುವ ವಿರೋಧ ಎಷ್ಟರಮಟ್ಟಿಗೆ ಇತ್ತು ಎಂದರೆ ಬೇರೆಯವರಾದರೆ ಈ ಸಂಗೀತವೂ ಬೇಡಾ, ವಿರೋಧವೂ ಬೇಡಾ ಎಂದು ತೆಪ್ಪಗೆ ಇರುತ್ತಿದ್ದರೋ ಎನೋ. ಆದರೆ ಆಕೆ ಅದನ್ನು ಒಂದು ಸವಾಲಾಗಿ ಸ್ವೀಕರಿಸಿದಳು. ಸಂಗೀತದಲ್ಲಿಯೇ ಸಾಧನೆ ಮಾಡಿದಳು. ಯಕ್ಷಗಾನ ಕ್ಷೇತ್ರದಲ್ಲಿಯೂ ಕೈ ಆಡಿಸಿದಳು. ತನ್ನದೇ ಅಭಿಮಾನಿ ವರ್ಗವನ್ನು ಸಂಪಾದಿಸಿಕೊಂಡಳು. ಹೀಗೆ ನಡೆಯುವಾಗಲೇ ಸುಹಾನಾ ಸೈಯದ್ ಸಂಗೀತದ ಬದುಕಿನಲ್ಲಿ ಪ್ರೇಮದ ತಂತಿ ಮೀಟಿದೆ. ಅವಳ ಸರಿಗಮಪದನಿಸ ಸಂಗೀತ ಜರ್ನಿಯಲ್ಲಿ ಹೊಸ ಸ್ವರಕ್ಕೆ ಕಾರಣನಾದ ಯುವಕನ ಹೆಸರು ಏನು ಗೊತ್ತಾ?

ನಿತಿನ್ ಶಿವಾಂಶ್. ಆತನಿಗೂ ಸಂಗೀತದ ಬಗ್ಗೆ ಒಲವಿದೆ. ರಂಗಭೂಮಿಯ ಹಿನ್ನಲೆಯ ನಿತಿನ್ ಶಿವಾಂಶ್ ಅವರೊಂದಿಗೆ ಹದಿನಾರು ವರ್ಷಗಳಿಂದ ಸುಹಾನ್ ಅವರಿಗೂ ಸ್ನೇಹವಿದ್ದು, ಶಾಲಾ ದಿನಗಳಲ್ಲಿಯೇ ಪರಿಚಯವಿತ್ತು ಎಂದು ಸ್ವತ: ಸುಹಾನಾ ಹೇಳಿಕೊಂಡಿದ್ದಾರೆ. 16 ವರ್ಷಗಳ ಸ್ನೇಹ ಈಗ ಪ್ರೀತಿಯಾಗಿ ಮೂಡಿದೆ ಎಂದು ಅವರು ಬಹಿರಂಗಪಡಿಸಿದ್ದಾರೆ. ಈ ಪ್ರೀತಿಯನ್ನು ಮದುವೆಯ ಸಂಬಂಧವಾಗಿ ಪರಿವರ್ತಿಸಲು ಸುಹಾನಾ ಹಾಗೂ ನಿತಿನ್ ಬಯಸಿದ್ದು, ಆದಷ್ಟು ಶೀಘ್ರದಲ್ಲಿ ಇವರು ಮದುವೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಇವರಿಬ್ಬರ ಭವಿಷ್ಯಕ್ಕೆ ಅನೇಕ ಸೆಲೆಬ್ರಿಟಿಗಳು ಶುಭಾಶಯ ಸಲ್ಲಿಸಿದ್ದು, ಸುಹಾನಾ ಅವರು ಅಭಿಮಾನಿಗಳಿಗೂ ತಮ್ಮನ್ನು ಹರಸುವಂತೆ ವಿನಂತಿಸಿದ್ದಾರೆ.

ಸುಹಾನ್ ಸೈಯದ್ ಹಾಗೂ ನಿತಿನ್ ಶಿವಾಂಶ್ ಪರಸ್ಪರ ಬೇರೆ ಬೇರೆ ಧರ್ಮದವರಾಗಿದ್ದರೂ, ಇಬ್ಬರೂ ಕಲಾಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದರೂ ಈಗ ವೈವಾಹಿಕ ಬದುಕಿಗೆ ಕಾಲಿಡಲು ತೀರ್ಮಾನಿಸುವ ಮೂಲಕ ಹೊಸ ಬದುಕನ್ನು ಆರಂಭಿಸಲು ತೀರ್ಮಾನಿಸಿದ್ದಾರೆ. ಇವರ ತರಹ ಅನೇಕರು ಹೀಗೆ ಪ್ರೀತಿಗೆ ಸಿಲುಕಿ ಮದುವೆಯಾಗಿ ಉತ್ತಮ ಬಾಳನ್ನು ಜೀವಿಸುತ್ತಿದ್ದಾರೆ. ಆದರೆ ಕೆಲವೊಮ್ಮೆ ಇಂತಹ ಮದುವೆಗಳಿಗೆ ಕೆಲವರ ವಿರೋಧವೂ ಇರುತ್ತದೆ. ಇವರ ಬದುಕಿನಲ್ಲಿ ಏನೂ ಅಡ್ಡಿ ಬರದೇ, ಎಲ್ಲವೂ ಸುಸೂತ್ರವಾಗಿ ನಡೆಯಲಿ ಎಂದು ನಾವು ಹಾರೈಸೋಣ, ಅಲ್ಲವೇ?

0
Shares
  • Share On Facebook
  • Tweet It




Trending Now
ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
Tulunadu News September 29, 2025
ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
Tulunadu News September 24, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
    • ದೇವಿ ಕೃಪೆಯಿಂದ ನಿಮ್ಮೆದುರು ನಿಲ್ಲುವ ಅವಕಾಶ ಸಿಕ್ಕಿದೆ - ಮೈಸೂರು ದಸರಾ ಉದ್ಘಾಟಿಸಿ ಬಾನು ಮುಷ್ತಾಕ್!
    • ಜಿಎಸ್ ಟಿ ಇಳಿಕೆ: ಸೆ 22 ರಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ!
    • ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ: ಪರಿಷ್ಕತಗೊಂಡ ಸೇವಾದರಗಳ ಮಾಹಿತಿ ಇಲ್ಲಿದೆ!
    • ಯೋಗಿ ಅದಿತ್ಯನಾಥ ಜೀವನ ಆಧಾರಿತ ಚಿತ್ರ ಬೆಳ್ಳಿತೆರೆಗೆ! ಏನಿದೆ ಇದರಲ್ಲಿ!
  • Popular Posts

    • 1
      ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!

  • Privacy Policy
  • Contact
© Tulunadu Infomedia.

Press enter/return to begin your search