• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!

Tulunadu News Posted On September 23, 2025
0


0
Shares
  • Share On Facebook
  • Tweet It

ಬಾಲಿವುಡ್ ಸ್ಟಾರ್ ದಂಪತಿ ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಅವರು ಅಪ್ಪ, ಅಮ್ಮಾ ಆಗುತ್ತಿದ್ದಾರೆ. 42 ವರ್ಷದ ನಟಿ ಕಳೆದ ಮಾರ್ಚ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಸರ್ಪ ಸಂಸ್ಕಾರ ಸೇವೆ ಮಾಡಿಸಿಕೊಂಡಿದ್ದರು. ಈಗ ಭಗವಂತ ಅವರಿಗೆ ಆರ್ಶೀವಾದ ಮಾಡಿದ್ದಾನೆ.

ನಮ್ಮ ಜೀವನದ ಅತ್ಯುತ್ತಮ ಅಧ್ಯಾಯವನ್ನು ಸಂತೋಷ ಮತ್ತು ಕೃತಜ್ಞತೆಯಿಂದ ತುಂಬಿದ ಹೃದಯದಿಂದ ಪ್ರಾರಂಭಿಸುವ ಹಾದಿಯಲ್ಲಿದ್ದೇವೆ ಎಂದು ನಟಿ ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ಯ ಅವರು ಸೋಶಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿದ್ದಾರೆ. ಕರ್ನಾಟಕದಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಿತ್ಯವೂ ಸಾವಿರಾರು ಭಕ್ತರು ಬರುತ್ತಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ ಸೇವೆ ಮಾಡಲಾಗುವುದು. ಸಾಮಾನ್ಯವಾಗಿ ಕುಟುಂಬದಲ್ಲಿ ಸರ್ಪದೋಷ ಇದ್ದರೆ ಮಕ್ಕಳಾಗೋದಿಲ್ಲ ಎನ್ನುವ ನಂಬಿಕೆ ಇದೆ. ಇದರಿಂದ ಚರ್ಮ ಸಮಸ್ಯೆ ಕೂಡ ಬರುವುದು ಎಂದು ಹೇಳಲಾಗುತ್ತದೆ. ಹೀಗಾಗಿ ಆಶ್ಲೇಷ ಬಲಿ ಸೇವೆ, ಸರ್ಪ ಸಂಸ್ಕಾರ ಸೇವೆಯನ್ನು ಭಕ್ತರು ಮಾಡುತ್ತಾರೆ. ಆಗ ಸರ್ಪ ದೋಷ ನಿವಾರಣೆ ಆಗಿ ಮಕ್ಕಳಾಗುತ್ತವೆ ಎನ್ನುವ ನಂಬಿಕೆ ಅನಾದಿಕಾಲದಿಂದಲೂ ಚಾಲ್ತಿಯಲ್ಲಿದೆ.

42 ನೇ ವಯಸ್ಸಿನಲ್ಲಿ ತಾಯಿಯಾಗೋದು ಸುಲಭವಿಲ್ಲ. ಫಿಟ್ ಆಗಿದ್ದರೂ ಮಗು ಮಾಡಿಕೊಳ್ಳುವುದು ಕಷ್ಟಸಾಧ್ಯ. ಪ್ರಿಯಾಂಕಾ ಚೋಪ್ರಾ ಅವರಿಂದ ಹಿಡಿದು ಶಿಲ್ಪಾ ಶೆಟ್ಟಿಯವರಿಗೆ ಸಾಕಷ್ಟು ನಟಿಯರು ಮಗು ಆಗಿಲ್ಲ ಎಂಬ ಕಾರಣಕ್ಕೆ ಸರೋಗಸಿ ಮೊರೆ ಹೋಗಿದ್ದರು. ಶಾರುಖ್ ಖಾನ್ – ಗೌರಿ ಕೂಡ ತಮ್ಮ ಮೂರನೆ ಮಗುವನ್ನು ಸರೋಗಸಿ ಮೂಲಕ ಪಡೆದರು.

ಮಾರ್ಚ್ ನಲ್ಲಿ ಕತ್ರಿನಾ ಕೈಫ್ ಅವರು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ಪೂಜೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅವರು ಸಂತಾನಕ್ಕೋಸ್ಕರ ಪ್ರಾರ್ಥನೆ ಮಾಡಿದ್ದರು. ಈ ಬಗ್ಗೆ ಅವರು ಎಲ್ಲಿಯೂ ಮಾಹಿತಿ ಬಿಟ್ಟುಕೊಟ್ಟಿರಲಿಲ್ಲ.

ಮಾರ್ಚ್ ತಿಂಗಳಲ್ಲಿ ಕತ್ರಿನಾ ಕೈಫ್ ಅವರು ಕುಕ್ಕೆಗೆ ಭೇಟಿ ನೀಡಿದ್ದರು. ಇದಾಗಿ ಆರು ತಿಂಗಳು ಕಳೆದಿವೆ. ಈಗ ಅವರು ಗರ್ಭೀಣಿಯಾಗಿರೋ ನ್ಯೂಸ್ ಕೊಟ್ಟಿದ್ದಾರೆ. ಈ ಮೂಲಕ ಅವರ ಭಕ್ತಿಗೆ ದೇವರು ಒಲಿದಿದ್ದಾನೆ ಎಂದಾಯಿತು. 2021 ಡಿಸೆಂಬರ್ 9 ರಂದು ಕತ್ರಿನಾ ಹಾಗೂ ವಿಕ್ಕಿ ಮದುವೆಯಾಗಿದ್ದರು.

 

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search