• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!

Tulunadu News Posted On September 24, 2025
0


0
Shares
  • Share On Facebook
  • Tweet It

ಧರ್ಮಸ್ಥಳದಲ್ಲಿ ಸೌಜನ್ಯ ಪರ(!) ಹೋರಾಟಗಾರರ ನಾಯಕರಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿಗೆ ಗಡಿಪಾರು ಮಾಡಿರುವ ವಿಷಯ ಈಗಾಗಲೇ ಬಹಿರಂಗವಾಗಿದೆ. ಈಗ ಪ್ರಸ್ತುತ ಅದು ಹೊಸ ತಿರುವನ್ನು ಪಡೆದುಕೊಂಡಿದೆ. ತಿಮರೋಡಿಯನ್ನು ರಾಯಚೂರಿಗೆ ಗಡಿಪಾರು ಬೇಡಾ ಎಂದು ಅಲ್ಲಿನವರು ಹೋರಾಟ ಮಾಡುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕದಡುವ ಪ್ರಯತ್ನದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ತಿಮರೋಡಿಯನ್ನು ಮಾಡುವ ಆದೇಶ ಹೊರಬಿದ್ದಿದೆ. ಆದರೆ ಅವರನ್ನು ನಮ್ಮ ಜಿಲ್ಲೆಗೆ ದಯವಿಟ್ಟು ಹಾಕಬೇಡಿ ಎಂದು ಅಲ್ಲಿ ಕೆಲ ಸಂಘಟನೆಗಳು, ಸಮಾನ ಮನಸ್ಕರು ಹೋರಾಟ ಮಾಡಲು ಮುಂದಾಗಿದ್ದಾರೆ.

ರಾಯಚೂರಿನ ದಲಿತ ಸೇನೆ ಹಾಗೂ ಸಮಾನ ಮನಸ್ಕರ ವೇದಿಕೆಯವರು ಈ ಬಗ್ಗೆ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ನಮ್ಮಲ್ಲಿ ಬೇಡಾ, ಎಲ್ಲಿಯೂ ಆಗದಿದ್ದರೆ ಕಾಡಿಗೆ ಕಳುಹಿಸಿ ಎಂದು ಸರಕಾರಕ್ಕೆ ಮನವಿ ಮಾಡಿದ್ದಾರೆ. ಈ ಬಗ್ಗೆ ಜನಾಭಿಪ್ರಾಯ ಮೂಡಿಸಲು ರಾಯಚೂರಿನ ಅಂಬೇಡ್ಕರ್ ವೃತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸೇನೆ ಮತ್ತು ಸಮಾನ ಮನಸ್ಕರ ವೇದಿಕೆಯ ಪ್ರಮುಖರಾದ ಮಾರುತಿ ಬಡಿಗೇರ್ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿಯ ಮೇಲೆ ಒಟ್ಟು 32 ಕ್ರಿಮಿನಲ್ ಕೇಸುಗಳು ದಾಖಲಾಗಿವೆ. ಇತ್ತೀಚೆಗೆ ಮಹೇಶ್ ಶೆಟ್ಟಿ ತಿಮರೋಡಿಯ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಐದು ಪ್ರಕರಣಗಳು ದಾಖಲಾಗಿವೆ. ಉಜಿರೆ ಬೆನಕ ಆಸ್ಪತ್ರೆಯಲ್ಲಿ ಏಷ್ಯಾನೆಟ್ ಸುವರ್ಣನ್ಯೂಸ್ ವರದಿಗಾರ, ಕ್ಯಾಮೆರಾ ಮ್ಯಾನ್ ಮೇಲೆ ಹಲ್ಲೆ, ಆಸ್ಪತ್ರೆಯಲ್ಲಿ 100 ಕ್ಕೂ ಹೆಚ್ಚು ಮಂದಿ ಸೇರಿಸಿ ಗಲಾಟೆ, ಅಕ್ರಮವಾಗಿ ಶಸ್ತ್ರಾಸ್ತ್ರ ಇಟ್ಟುಕೊಂಡಿರುವುದು ಸೇರಿದಂತೆ ಐದು ಪ್ರಕರಣಗಳು ದಾಖಲಾಗಿವೆ.

ಸಾಮಾನ್ಯವಾಗಿ ಅನೇಕ ಕ್ರಿಮಿನಲ್ ಆರೋಪ ಹೊಂದಿರುವ ವ್ಯಕ್ತಿಯನ್ನು ಆತನ ಜಿಲ್ಲೆಯಿಂದ ಗಡಿಪಾರು ಮಾಡುವ ಆದೇಶದಲ್ಲಿ ಇಂತಹುದೇ ಜಿಲ್ಲೆಯ ಇಂತಹುದೇ ಗ್ರಾಮದಲ್ಲಿ ಎಂದು ಹೇಳುವುದು ಹಿಂದೆ ಅಪರೂಪವಾಗಿತ್ತು. ಆಗ ಏನಾಗುತ್ತಿತ್ತು ಎಂದರೆ ಗಡಿಪಾರಾದ ವ್ಯಕ್ತಿ ತನ್ನ ಜಿಲ್ಲೆಯ ಗಡಿಯಲ್ಲಿರುವ ಪಕ್ಕದ ಜಿಲ್ಲೆಯ ಗ್ರಾಮದಲ್ಲಿ ವಾಸಿಸುತ್ತಿದ್ದ. ಇದರಿಂದ ಅದೊಂದು ಶಿಕ್ಷೆಯ ತರಹ ಅವನಿಗೆ ಭಾವನೆಯೇ ಬರುತ್ತಿರಲಿಲ್ಲ. ಆದರೆ ಮಹೇಶ್ ಶೆಟ್ಟಿಯನ್ನು ದಕ್ಷಿಣ ಕನ್ನಡದಿಂದ ಬಹಳ ದೂರದಲ್ಲಿರುವ ರಾಯಚೂರಿನ ಮಾನ್ವಿಗೆ ಗಡಿಪಾರು ಮಾಡಿ ಈ ಶಿಕ್ಷೆಯ ಗಂಭೀರತೆಯನ್ನು ಅಧಿಕಾರಿಗಳು ತಿಳಿಸಿದ್ದಾರೆ.

ಯಾವಾಗ ಮಹೇಶ್ ಶೆಟ್ಟಿ ತಮ್ಮ ಜಿಲ್ಲೆಗೆ ಗಡಿಪಾರಾಗಿ ಬರುತ್ತಾರೆ ಎಂದು ಅಲ್ಲಿನವರಿಗೆ ಅನಿಸಿತೋ ಆಗ ಈ ಪ್ರತಿಭಟನೆ ಶುರುವಾಗುತ್ತಿದೆ. ಇನ್ನು ಯಾವ ಜಿಲ್ಲೆಗೆ ಗಡಿಪಾರು ಮಾಡಿದರೂ ಅಲ್ಲಿನವರು ಕೂಡ ಪ್ರತಿಭಟನೆ ಮಾಡುವ ಸಾಧ್ಯತೆ ಕಾಣುತ್ತಿದೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search