• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸಿನಿಮಾ

ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!

Tulunadu News Posted On October 27, 2025
0


0
Shares
  • Share On Facebook
  • Tweet It

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಚಾಪ್ಟರ್ 1 ಅಕ್ಟೋಬರ್ 2 ರಂದು ಬಿಡುಗಡೆಯಾಗಿ ದೇಶದಾದ್ಯಂತ 7 ಸಾವಿರಕ್ಕೂ ಅಧಿಕ ಪರದೆಗಳಲ್ಲಿ ತೆರೆಕಂಡು ಯಶಸ್ವಿ ಪ್ರದರ್ಶನಗೊಂಡಿರುವುದು ಎಲ್ಲರಿಗೂ ಗೊತ್ತೆ ಇದೆ. ಈ ಸಿನೆಮಾ ಒಟಿಟಿಯಲ್ಲಿ ಯಾವಾಗ ಬಿಡುಗಡೆಯಾಗುತ್ತದೆ ಎನ್ನುವ ಕುತೂಹಲ ಎಲ್ಲರಲ್ಲಿಯೂ ಇತ್ತು. ಇದೀಗ ಅದಕ್ಕೆ ದಿನ ನಿಗದಿಯಾಗಿದೆ. ಇದೇ ತಿಂಗಳು ಅಂದರೆ ಅಕ್ಟೋಬರ್ 21 ರಿಂದ ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಈ ಸಿನೆಮಾದ ಸ್ಟ್ರೀಮಿಂಗ್ ಆಗಲಿದೆ. ಈ ಬಗ್ಗೆ ಅಮೆಜಾನ್ ಪ್ರೈಮ್ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದೆ.

ಅಷ್ಟಕ್ಕೂ ಕಾಂತಾರಾ ಚಾಪ್ಟರ್ ಒನ್ ಇದರ ಗಳಿಕೆ ಎಷ್ಟು ಎನ್ನುವ ಬಗ್ಗೆ ಕುತೂಹಲ ಎಲ್ಲರಲ್ಲಿಯೂ ಇದೆ. ಕರ್ನಾಟಕ ರಾಜ್ಯವೊಂದರಲ್ಲಿಯೇ 250 ಕೋಟಿ ಗಳಿಕೆಯ ಗಡಿ ದಾಟಿದ ಮೊದಲ ಕನ್ನಡ ಚಲನಚಿತ್ರ ಎಂಬ ಐತಿಹಾಸಿಕ ದಾಖಲೆಯನ್ನು ಬರೆದಾಗಿದೆ. ಕನ್ನಡ ಸಿನೆಮಾ ಮತ್ತು ಕರ್ನಾಟಕದ ಇತಿಹಾಸದಲ್ಲಿ ರಾಜ್ಯದಲ್ಲಿ 200 ಕೋಟಿಗಿಂತ ಹೆಚ್ಚು ಗಳಿಕೆ ಮಾಡಿದ ಏಕೈಕ ಚಲನಚಿತ್ರ “ಕಾಂತಾರ ಚಾಪ್ಟರ್ 1”. “ಕಾಂತಾರ” ಚಿತ್ರವು ಕನ್ನಡ ನೆಲದ ಕಥೆ, ಸಂಸ್ಕೃತಿ ಮತ್ತು ನಂಬಿಕೆಯನ್ನು ಕಥಾವಸ್ತುವನ್ನು ಹೊಂದಿದೆ. ಈ ಅಸಾಮಾನ್ಯ ಯಶಸ್ಸು ಕನ್ನಡ ಚಿತ್ರರಂಗಕ್ಕೆ ಹೊಸ ಮಾನದಂಡವನ್ನು ಸ್ಥಾಪಿಸಿದೆ ಮತ್ತು ಪ್ರಾದೇಶಿಕ ಚಲನಚಿತ್ರಗಳ ಸಾಮರ್ತ್ಯವನ್ನು ಜಗತ್ತಿಗೆ ತೋರಿಸಿದೆ.

2025ರಲ್ಲಿ ಅತೀ ಹೆಚ್ಚು ಹಣ ಗಳಿಸಿದ ಭಾರತೀಯ ಸಿನೆಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮಾತ್ರವಲ್ಲ, ಜಾಗತಿಕ ಗಲ್ಲಾ ಪೆಟ್ಟಿಗೆಯಲ್ಲಿ 818 ಕೋಟಿಗೂ ಅಧಿಕ ಹಣ ಸಂಪಾದಿಸಿದೆ. “ಕಾಂತಾರ ಚಾಪ್ಟರ್ 1” 2025 ರಲ್ಲಿ ಅತ್ಯಧಿಕ ಗಳಿಕೆ ಮಾಡಿದ ಭಾರತೀಯ ಚಿತ್ರವಾಗಿ ಹೊರಹೊಮ್ಮಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search