• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ರಾಜ್ಯ ಸರಕಾರ ತಂದಿದ್ದ “ಅಂಕುಶ”ದ ನಿಯಮ! ಹೈಕೋರ್ಟ್ ತಡೆ.

Tulunadu News Posted On October 29, 2025
0


0
Shares
  • Share On Facebook
  • Tweet It

ಕರ್ನಾಟಕ ಸರಕಾರ ಸಾರ್ವಜನಿಕ ಸ್ಥಳ ಬಳಕೆಗೆ ಖಾಸಗಿ ಸಂಸ್ಥೆಗಳಿಗೆ ನಿರ್ಬಂಧವನ್ನು ಹೇರಿತ್ತು. ಇದನ್ನು ಪ್ರಶ್ನಿಸಿ, ಸಲ್ಲಿಸಲಾಗಿದ್ದ ರಿಟ್ ಅರ್ಜಿಯ ವಿಚಾರಣೆಯನ್ನು ನಡೆಸಿದ ರಾಜ್ಯ ಉಚ್ಚ ನ್ಯಾಯಾಲಯ ಅದಕ್ಕೆ ತಡೆಯನ್ನು ನೀಡಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಅಂಕುಶ ಹೇರಲು ತಂದಿದ್ದ ಈ ಕಾನೂನು ನಿಮಗೆ ಬೇಕಿತ್ತಾ ಎಂದು ಭಾರತೀಯ ಜನತಾ ಪಾರ್ಟಿ ವ್ಯಂಗ್ಯ ಮಾಡಿದೆ.

ಆರ್‌ಎಸ್‌ಎಸ್‌ ಗುರಿಯಾಗಿಸಿಕೊಂಡು ಸಾರ್ವಜನಿಕ ಸ್ಥಳಗಳಲ್ಲಿ ಪಥ ಸಂಚಲನ, ಸಭೆ – ಸಮಾವೇಶಗಳಿಗೆ ನಿರ್ಬಂಧ ಹೇರಿದ್ದ ರಾಜ್ಯ ಕಾಂಗ್ರೆಸ್‌ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ಪೀಠ ತಾತ್ಕಾಲಿಕ ತಡೆ ನೀಡಿ ನೀತಿಪಾಠ ಹೇಳಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಚಾಟಿ ಬೀಸಿದ್ದಾರೆ.

ದೆಹಲಿಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ” ಸರ್ಕಾರದ ಜಾಗ, ಆವರಣಗಳಲ್ಲಿ ಕಾರ್ಯಕ್ರಮ ನಡೆಸಲು ಖಾಸಗಿ ಸಂಸ್ಥೆಗಳು ಪೂರ್ವಾನುಮತಿ ಪಡೆಯಬೇಕೆಂದು ಹೊರಡಿಸಿದ ಆದೇಶಕ್ಕೆಧಾರವಾಡ ಹೈಕೋರ್ಟ್ ಪೀಠ ತಾತ್ಕಾಲಿಕ ತಡೆ  ನೀಡಿದೆ. ಇದು ಸಂವಿಧಾನದ ಮೌಲ್ಯಕ್ಕೆ ಸಿಕ್ಕ ಜಯವಾಗಿದೆ” ಎಂದು ಜೋಶಿ ಹೇಳಿದರು.

ರಾಜ್ಯ ಕಾಂಗ್ರೆಸ್‌ ಸರ್ಕಾರ ‎ಪೂರ್ವಾಗ್ರಹಪೀಡಿತವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಗುರಿಯಾಗಿಸಿಕೊಂಡು ಸರ್ಕಾರದ ಆಸ್ತಿ ನೆಪದಲ್ಲಿ ರಸ್ತೆ, ಉದ್ಯಾನವನ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಸರ್ಕಾರೇತರ ಚಟುವಟಿಕೆಗಳಿಗೆ ನಿರ್ಬಂಧ ಹೇರಿರುವುದು ಸಂವಿಧಾನ ವಿರೋಧಿ ಕ್ರಮವಾಗಿದೆ ಎಂದು ಜೋಷಿ ಖಂಡಿಸಿದರು.

ರಾಜ್ಯ ಕಾಂಗ್ರೆಸ್‌ ಸರ್ಕಾರ ಸಂವಿಧಾನದ ಮೂಲ ಆಶಯಗಳ ವಿರೋಧವಾಗಿ ನಡೆಯುತ್ತಿದೆ ಎಂಬುದಕ್ಕೆ ಹೈಕೋರ್ಟ್‌ ಪೀಠ ನೀಡಿದ ಈ ಮಹತ್ವದ ತೀರ್ಪೇ ಸಾಕ್ಷಿ ಎಂದ ಸಚಿವರು, ‎ಸಂವಿಧಾನ ವಿರೋಧಿ ಕ್ರಮಗಳನ್ನು ಅನುಸರಿಸುವ ಸರ್ಕಾರಕ್ಕೆ ನ್ಯಾಯಾಲಯದ ಈ ತೀರ್ಪು ಎಚ್ಚರಿಕೆಯ ಗಂಟೆಯಾಗಿದೆ. ಈ ಸರ್ಕಾರ ಇನ್ನಾದರೂ ‎ಸಂವಿಧಾನದ ಮೂಲ ಆಶಯ ಗೌರವಿಸುವ ಕಾರ್ಯವನ್ನು ಪಾಲಿಸಲಿ ಎಂದು ಜೋಶಿ ಸಲಹೆ ನೀಡಿದರು.

” ಆರ್‌ಎಸ್‌ಎಸ್‌ ಕುರಿತು ನ್ಯಾಯಾಲಯ ನೀಡಿರುವ ಆದೇಶ ಸಂವಿಧಾನದ ಆಶಯಕ್ಕೆ ಪೂರವಾಗಿದೆ. ಸಂಘದ ಶಾಖೆಯಿಂದ ಇದುವರೆಗೆ ಯಾವುದೇ ದೊಂಬಿ, ಗಲಭೆಗಳು ನಡೆದಿಲ್ಲ. ಸಂಘದ ಚಟುವಟಿಕೆಗಳನ್ನು ನಿಯಂತ್ರಿಸಲು ಹೊರಟ ಸರ್ಕಾರಕ್ಕೆ ನ್ಯಾಯಾಲಯದ ತೀರ್ಪಿನಿಂದ ಮುಖಭಂಗವಾಗಿದೆ” ಎಂದು ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅಭಿಪ್ರಾಯ ಪಟ್ಟಿದ್ದಾರೆ.

ಕಾಂಗ್ರೆಸ್‌ ಸರ್ಕಾರಕ್ಕೆ ಕಪಾಳಮೋಕ್ಷ! ಆರ್‌ಎಸ್‌ಎಸ್ ಅನ್ನು ನಿರ್ಬಂಧಿಸಲು ಸಿಎಂ ಸಿದ್ದರಾಮಯ್ಯನವರ ಸರ್ಕಾರ ಹೊರಡಿಸಿದ್ದ ರಾಜಕೀಯ ಪ್ರೇರಿತ ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಸದಾ ದೇಶಸೇವೆಗೆ ಸಿದ್ಧರಿರುವ ಸಂಘಶಕ್ತಿಯನ್ನು ನಿರ್ಬಂಧಿಸಲು ಯಾವ ʼಕೈʼಗಳಿಗೂ ಸಾಧ್ಯವಿಲ್ಲ ಎಂದು ಕರ್ನಾಟಕ ಬಿಜೆಪಿ ಐಟಿ ಸೆಲ್, ಟ್ವೀಟ್ ಮಾಡಿದೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search