• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

Tulunadu News Posted On October 31, 2025
0


0
Shares
  • Share On Facebook
  • Tweet It

ಕೆಲವು ವ್ಯಕ್ತಿಗಳು ಮಾಡುವ ಸಹಾಯಕ್ಕೆ ಬೆಲೆಕಟ್ಟಲು ಸಾಧ್ಯವಿಲ್ಲ. ಬೆಂಕಿ ಹೊತ್ತಿಕೊಂಡು ಸುಟ್ಟು ಹೋಗುತ್ತಿದ್ದ ಬಸ್ ಒಳಗಿನಿಂದ ತಮ್ಮ ಜೀವವನ್ನು ಪಣಕ್ಕೆ ಇಟ್ಟು ಪ್ರಯಾಣಿಕರನ್ನು ಹೊರಗೆ ತೆಗೆಯುವುದು ಚಿಕ್ಕ ವಿಷಯವೇ ಅಲ್ಲ. ಆದರೆ ಹರೀಶ್ ಕುಮಾರ್ ರಾಜು ಎನ್ನುವವರು ಅದನ್ನು ಮಾಡಿ ತೋರಿಸಿದ್ದಾರೆ. ಬೆಂಕಿ ಹೊತ್ತಿಕೊಂಡಿದ್ದ ಬಸ್ ನಲ್ಲಿ ಬೆಂಕಿಯ ಕೆನ್ನಾಲಗೆಗೆ ಸಿಕ್ಕು ನರಳಾಡುತ್ತಿದ್ದವರಿಗೆ ಆಪದ್ಭಾಂಧವನನಾಗಿ ಬಂದ ಹರೀಶ್ ಬರೋಬ್ಬರಿ 12 ಜನರ ಪ್ರಾಣ ಉಳಿಸಿದ ಎನ್ನುವುದನ್ನು ಊಹಿಸಿದಾಗ ಮೈ ರೋಮಾಂಚನವಾಗುತ್ತದೆ. ಕಳೆದ ಶುಕ್ರವಾರ ಮಧ್ಯರಾತ್ರಿ ಆಂಧ್ರಪ್ರದೇಶದ ಕರ್ನೂಲ್ ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಬೆಂಕಿ ಅನಾಹುತಕ್ಕೀಡಾದ ಘಟನೆಯಲ್ಲಿ ಈತ ಮೆರೆದ ಸಮಯಪ್ರಜ್ಞೆ ಹಾಗೂ ಸಾಹಸಕ್ಕೆ ಆಂಧ್ರಪ್ರದೇಶ ಸರಕಾರ ಅಭಿನಂದಿಸಿದೆ.


ಹರೀಶ್ ಕುಮಾರ್ ರಾಜು ಮೂಲತ: ಆಂಧ್ರಪ್ರದೇಶದ ಧರ್ಮಾವರಂ ಜಿಲ್ಲೆಯ ಯುವಕ. ಸದ್ಯ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದಾರೆ. ಇವರು ಎಂಜಿನಿಯರಿಂಗ್ ಪದವಿ ಪಡೆದದ್ದು ದೊಡ್ಡಬಳ್ಳಾಪುರದ ಆರ್. ಎಲ್. ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ.
ಈ ಬಗ್ಗೆ ಮಾತನಾಡಿರುವ ಹರೀಶ್ ” ಕಾರಿನಲ್ಲಿ ಬೆಂಗಳೂರಿನತ್ತ ವೇಳೆ ದೂರದಿಂದಲೇ ದಟ್ಟ ಹೊಗೆ ಕಣ್ಣಿಗೆ ಬಿತ್ತು. ಹತ್ತಿರ ಬಂದು ನೋಡಿದರೆ, ರಸ್ತೆ ಮಧ್ಯದಲ್ಲಿ ಬಸ್ಸಿಗೆ ಬೆಂಕಿ ಹೊತ್ತಿ ಉರಿಯುತ್ತಿತ್ತು. ಬಸ್ ನ ಮುಂಭಾಗದಲ್ಲಿ ಬೆಂಕಿ ತೀವ್ರವಾಗಿತ್ತು. ಹಿಂಭಾಗದಲ್ಲಿ ದಟ್ಟ ಹೊಗೆ ಆವರಿಸಿತ್ತು. ನಾವು ತಡ ಮಾಡಲಿಲ್ಲ. ಕಾರಿನಲ್ಲಿದ್ದ ಸ್ಟೆಪ್ನಿ ಬದಲಿಸುವ ರಾಡ್ ಹಾಗೂ ಕಬ್ಬಿಣದ ಸ್ಟ್ಯಾಂಡ್ ಅನ್ನು ತೆಗೆದುಕೊಂಡು ಹೋಗಿ ಬಸ್ ನ ಗಾಜುಗಳನ್ನು ಒಡೆದು ಪುಡಿ ಮಾಡಿದೆವು. ಅರೆ ಬರೆ ಒಡೆದ ಗಾಜುಗಳ ಮಧ್ಯದಲ್ಲಿ ನುಸುಳುತ್ತಿದ್ದ ಪ್ರಯಾಣಿಕರಿಗೆ ಹೊರಬರಲು ಅನುವು ಮಾಡಿಕೊಟ್ಟೆವು. ನನ್ನೊಂದಿಗೆ ನವೀನ್ ಎನ್ನುವ ಯುವಕ ಸಹ ಇದ್ದ. ಇದರ ನಡುವೆ ಮಹಿಳೆಯೊಬ್ಬರು ತನ್ನ ಮಗುವನ್ನು ತಬ್ಬಿಕೊಂಡು ಸುಡುಬೆಂಕಿಯ ನಡುವೆ ನರಳಿ, ಸುಟ್ಟುಕರಕಲಾದ ದಾರುಣ ದೃಶ್ಯವನ್ನು ನೋಡಿಯೂ ಅವರನ್ನು ರಕ್ಷಿಸಲಾಗದ ಅಸಹಾಯಕತೆ ನನ್ನದಾಗಿತ್ತು” ಎಂದು ಭಾವುಕರಾದರು. ಈ ಬಸ್ ದುರಂತದಲ್ಲಿ ಒಟ್ಟು 20 ಜನ ಸಾವಿಗೀಡಾಗಿದ್ದಾರೆ. ಉಳಿದ 12 ಜನರನ್ನು ರಕ್ಷಿಸಲಾಗಿದೆ. ಈ ಘಟನೆಯ ಬಳಿಕ ಸ್ಲೀಪರ್ ಬಸ್ಸುಗಳ ಸುರಕ್ಷತೆಯ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ. ಆದರೆ ಇವತ್ತಿಗೂ ಅದು ಎಷ್ಟರಮಟ್ಟಿಗೆ ಪಾಲಿಸಲ್ಪಟ್ಟಿವೆ ಎನ್ನುವುದನ್ನು ಕೂಡ ನೋಡಬೇಕಾಗಿದೆ.

 

0
Shares
  • Share On Facebook
  • Tweet It




Trending Now
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
Tulunadu News October 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
  • Popular Posts

    • 1
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 2
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 3
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 4
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 5
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search