• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

Tulunadu News Posted On November 11, 2025
0


0
Shares
  • Share On Facebook
  • Tweet It

ಇದು ನಿಜಕ್ಕೂ ಆಶ್ಚರ್ಯಕರ ಸಂಗತಿ. ನಾವು ಅಪರೂಪಕ್ಕೊಮ್ಮೆ ನಮ್ಮ ಮನೆಯ ಅಥವಾ ಅಂಗಡಿಯ ಹಳೆಯ ವಸ್ತುಗಳನ್ನು ಗುಜರಿ ಅವರಿಗೆ ನೀಡಿ ನೂರೋ, ಸಾವಿರನೋ ಸಂಪಾದಿಸಿ ಅದನ್ನೇ ಲಾಭ ಎಂದು ಅಂದುಕೊಂಡಿರುತ್ತೇವೆ. ಗುಜರಿಯವನ ಬಳಿ ಒಂದಿಷ್ಟು ಚೌಕಾಶಿ ಮಾಡಿ ಹತ್ತಿಪ್ಪತ್ತು ರೂಪಾಯಿ ಜಾಸ್ತಿ ಗಳಿಸಿದರೆ ನಮ್ಮ ಖುಷಿಗೆ ಪಾರವೇ ಇಲ್ಲ. ಆದರೆ ಹಳೆಯ ಕಡತಗಳನ್ನು ಗುಜರಿಗೆ ನೀಡುವ ಮೂಲಕ ಸರಕಾರಗಳು ಕೋಟಿ ಕೋಟಿ ಹಣ ಸಂಪಾದಿಸುತ್ತವೆ ಎನ್ನುವುದನ್ನು ನೋಡುವಾಗ ನಿಜಕ್ಕೂ ಸೋಜಿಗವಾಗುತ್ತದೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕಳೆದ ತಿಂಗಳು ನಡೆಸಿದ ಬೃಹತ್ ಸ್ವಚ್ಛತಾ ಅಭಿಯಾನ 5.0 ಅಡಿಯಲ್ಲಿ, ಸರಕಾರಿ ಕಚೇರಿಗಳಲ್ಲಿದ್ದ ಅನುಪಯುಕ್ತ ವಸ್ತುಗಳನ್ನು ಮಾರಾಟ ಮಾಡಿದ್ದು, ಅದರಿಂದ 800 ಕೋಟಿ ರೂ ಆದಾಯ ಗಳಿಸಿದೆ. ಈ ಮೊತ್ತವು 2023 ರಲ್ಲಿ ಇಸ್ರೋದ ಯಶಸ್ವಿ ಚಂದ್ರಯಾನ -3 ಯೋಜನೆಗೆ ವೆಚ್ಚವಾಗಿದ್ದ 615 ಕೋಟಿ ರೂಗಳಿಗಿಂರ ಅಧಿಕ ಎನ್ನುವುದು ಎಲ್ಲರಿಗೂ ಹುಬ್ಬೇರಿಸುವಂತೆ ಮಾಡಿದೆ.

ಸುಮಾರು 11.58 ಲಕ್ಷ ಕಚೇರಿಗಳಲ್ಲಿ ಅಕ್ಟೋಬರ್ 2 ರಿಂದ ಅಕ್ಟೋಬರ್ 31 ರ ನಡುವೆ ನಡೆದ ಸ್ವಚ್ಚತಾ ಕಾರ್ಯದಲ್ಲಿ ಸುಮಾರು 29 ಲಕ್ಷ ಕಡತ ವಿಲೇವಾರಿ ಮಾಡಲಾಗಿದೆ. ಜತೆಗೆ, ಉಪಯೋಗವಿಲ್ಲದ ದಾಖಲೆಗಳು, ಎಲೆಕ್ಟ್ರಾನಿಕ್ ತ್ಯಾಜ್ಯ, ಪೀಠೋಪಕರಣ, ವಾಹನ, ಯಂತ್ರೋಪಕರಣಗಳನ್ನು ಗುಜರಿಗೆ ಹಾಕಲಾಗಿದೆ. ಈ ವೇಳೆ 232 ಲಕ್ಷ ಚದರ ಅಡಿಯಲ್ಲಿ ಹರಡಿದ್ದ ವಸ್ತುಗಳನ್ನು ತೆರವುಗೊಳಿಸಲಾಗಿದೆ. ಈ ಪ್ರಮಾಣದಲ್ಲಿ ಕಚೇರಿಯನ್ನು ತೆರವುಗೊಳಿಸಿದ್ದು ಇದೇ ಮೊದಲು. 2021 ರಲ್ಲಿ ಈ ವಿಶಿಷ್ಟ ಅಭಿಯಾನವನ್ನು ಆರಂಭಿಸಲಾಗಿತ್ತು. ಅದರ ನಂತರ ಕೇಂದ್ರ ಸರಕಾರ ಸುಮಾರು 4100 ಕೋಟಿ ರೂ ಹಣ ಗಳಿಸಿದೆ. ಇದನ್ನು ಎಲ್ಲಾ ರಾಜ್ಯಗಳು ಅನುಷ್ಠಾನಕ್ಕೆ ತರುವ ಮೂಲಕ ಸ್ವಚ್ಚತೆಯಿಂದ ಆದಾಯ ಗಳಿಸುವತ್ತ ಗಮನ ಹರಿಸುವುದು ಉತ್ತಮ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search