• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!

Tulunadu News Posted On December 9, 2025
0


0
Shares
  • Share On Facebook
  • Tweet It

ಶಾಸಕರಿಗೆ ಕುಡುಕರ ಆರೋಗ್ಯದ ಬಗ್ಗೆನೂ ಕಾಳಜಿ ಇದೆ ಎಂದು ಸಾಬೀತಾಗಿದೆ. ಸರಕಾರದ ಖಜಾನೆಯನ್ನು ತುಂಬಿಸುವ ಕುಡುಕರ ಬಗ್ಗೆ ಶಾಸಕರು ಧ್ವನಿ ಎತ್ತಿದ ಘಟನೆ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ನಡೆಯಿತು. ರಾಜ್ಯದಲ್ಲಿ ಮದ್ಯಪಾನ ಮಾಡುವವರಲ್ಲಿ ಉಂಟಾಗುವ ಲಿವರ್ ಸಮಸ್ಯೆಗೆ ಚಿಕಿತ್ಸೆ ನೀಡಲು ಸರಕಾರದಿಂದ ಅನುದಾನ ನೀಡಬೇಕೆಂದು ಪಕ್ಷಾತೀತವಾಗಿ ಸದಸ್ಯರು ಆಗ್ರಹಿಸಿದ ಸ್ವಾರಸ್ಯಕರ ಘಟನೆ ನಡೆಯಿತು.
ವಿರೋಧ ಪಕ್ಷದ ಮುಖ್ಯದ ಸಚೇತಕ ಎನ್. ರವಿಕುಮಾರ್ ಮತ್ತು ಬಿಜೆಪಿಯ ಕೆ.ಎಸ್. ನವೀನ್ ಅವರು, ನಿಯಮ 330 ರ ಅಡಿಯಲ್ಲಿ ರಾಜ್ಯದಲ್ಲಿ ಮದ್ಯಪಾನಿಗಳ ಪೈಕಿ ಲಿವರ್ ಸಿರೋಸಿಸ್/ ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿರುವವರಿಗೆ ಚಿಕಿತ್ಸೆ ನೀಡುವ ಸಂಬಂಧ ಅಬಕಾರಿ ಆದಾಯದ ಶೇ 20 ರಷ್ಟು ಮೊತ್ತ ಮೀಸಲಿಡುವಂತೆ ಕೋರಿದರು.


ಅದಕ್ಕೆ ಲಿಖಿತ ರೂಪದಲ್ಲಿ ಉತ್ತರಿಸಿದ ಅಬಕಾರಿ ಸಚಿವ ಆರ್,ಬಿ, ತಿಮ್ಮಾಪೂರ, ರಾಜ್ಯದಲ್ಲಿ ಸೆಪ್ಟೆಂಬರ್ ಅಂತ್ಯದವರೆಗೆ 195.27 ಲಕ್ಷ ಪೆಟ್ಟಿಗೆ ಬಿಯರ್ ಮಾರಾಟವಾಗಿದೆ. ಕಳೆದ ವರ್ಷ ಇದೇ ಅವಧಿಗೆ ಹೋಲಿಸಿದರೆ 47.46 ಲಕ್ಷ ಪೆಟ್ಟಿಗೆಗಳು ಕಡಿಮೆ ಮಾರಾಟವಾಗಿದೆ. ಶೀತ ವಾತಾವರಣ, ಚಳಿ ಹೆಚ್ಚಿರುವ ಕಾರಣ ಬಿಯರ್ ಮಾರಾಟ ಕುಸಿತ ಕಂಡಿದೆ ಎಂದರು.
ಇನ್ನು ಅಬಕಾರಿ ಆದಾಯವನ್ನು ರಾಜ್ಯದ ಸಂಚಿತ ನಿಧಿಗೆ ಜಮೆ ಮಾಡಲಾಗುತ್ತಿದೆ. ಈ ಆದಾಯವನ್ನು ಬಜೆಟ್ ನಲ್ಲಿ ಅನುಮೋದಿಸಿದ ಕಾರ್ಯಕ್ರಮಗಳಿಗೆ ವ್ಯಯಿಸಲಾಗುತ್ತಿದೆ. ಸಂಚಿತ ನಿಧಿಗೆ ಜಮೆಯಾಗಿರುವ ಅನುದಾನವನ್ನು ಬೇರೆ ಉದ್ದೇಶಕ್ಕೆ ವೆಚ್ಚ ಮಾಡಲಾಗುವುದು. ಆದ್ದರಿಂದ ಮದ್ಯಪಾನಿಗಳಲ್ಲಿ ಲಿವರ್ ಸಿರೋಸಿಸ್/ ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿರುವವರ ಚಿಕಿತ್ಸೆಗೆ ಅಬಕಾರಿ ಆದಾಯದಿಂದ ವೆಚ್ಚ ಭರಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಈ ಉತ್ತರದಿಂದ ಸಂತುಷ್ಟಗೊಳ್ಳದ ವಿಪಕ್ಷ ಸದಸ್ಯರು, ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚುತ್ತಿದೆ. ಅದರ ನಡುವೆ ರಾಜ್ಯ ಸರಕಾರ 46 ಸಾವಿರ ಕೋಟಿ ರೂ ಅಬಕಾರಿ ಆದಾಯ ಸಂಗ್ರಹದ ಗುರಿ ನೀಡಿದೆ. ಹೀಗೆ ಹೆಚ್ಚಿನ ಪ್ರಮಾಣದ ಗುರಿ ನೀಡುವ ಮೂಲಕ ಮದ್ಯಪಾನಿಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಆರೋಪಿಸಿದರು.
ಅದಕ್ಕೆ ಆಡಳಿತ ಪಕ್ಷದ ಶಿವಕುಮಾರ್ ಮಾತನಾಡಿ, ” ಕಳಪೆ ಮದ್ಯ ಮಾರಾಟದಿಂದಾಗಿ ಹೆಚ್ಚಿನ ಸಮಸ್ಯೆಯಾಗುತ್ತಿದೆ. ಜತೆಗೆ ಹೊಸದಾಗಿ 1500 ಮದ್ಯದಂಗಡಿ ತೆರೆಯಲು ಸರಕಾರ ಯೋಜಿಸಿದೆ. ಇದನ್ನು ನಿಲ್ಲಿಸಬೇಕು” ಎಂದು ಒತ್ತಾಯಿಸಿದರು.
ಅಂತಿಮವಾಗಿ ಸಭಾನಾಯಕ ಎನ್.ಎಸ್. ಬೋಸರಾಜು ಅವರು, ರಾಜ್ಯದ ಜನರ ಆರೋಗ್ಯ ಮತ್ತು ಚಿಕಿತ್ಸೆಗಾಗಿ ರಾಜ್ಯ ಸರಕಾರದಿಂದ ಹಲವು ಕಾರ್ಯಕ್ರಮ ಅನುಷ್ಠಾನಗೊಳಿಸಲಾಗಿದೆ. ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಹೀಗಾಗಿ ಅಬಕಾರಿ ಆದಾಯದಲ್ಲಿ ಲಿವರ್ ಸಿರೋಸಿಸ್/ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿರುವವರಿಗೆ ಚಿಕಿತ್ಸೆಗೆ ಅನುದಾನ ನೀಡಲಾಗದು ಎಂದರು.

0
Shares
  • Share On Facebook
  • Tweet It




Trending Now
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
  • Popular Posts

    • 1
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 2
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 3
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 4
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 5
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!

  • Privacy Policy
  • Contact
© Tulunadu Infomedia.

Press enter/return to begin your search