• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!

Tulunadu News Posted On December 9, 2025
0


0
Shares
  • Share On Facebook
  • Tweet It

ಸರಕಾರದ 108 ಆಂಬುಲೆನ್ಸ್ ಸಕಾಲದಲ್ಲಿ ಬರದೇ ಕೊನೆಗೆ ಗೂಡ್ಸ್ ಟೆಂಪೊದಲ್ಲಿ ಮಂಚ ಇರಿಸಿ, ಅದರಲ್ಲಿ ಮಲಗಿಸಿ, ಆಸ್ಪತ್ರೆಗೆ ದಾಖಲಿಸಿರುವಂತಹ ಘಟನೆ ಉಡುಪಿ ಜಿಲ್ಲೆಯ ಉದ್ಯಾವರದಲ್ಲಿ ಜರುಗಿದೆ.

ರಾತ್ರಿ 7 ಗಂಟೆಗೆ ವೃದ್ಧರೋಗಿಯೊಬ್ಬರು ಅಸ್ವಸ್ಥಗೊಂಡರು. ತಕ್ಷಣ ಮನೆಯವರು ಆಂಬುಲೆನ್ಸ್ ಗಾಗಿ ಕರೆ ಮಾಡಿದ್ದಾರೆ. ಆದರೆ 9.30 ಆದರೂ ಆಂಬುಲೆನ್ಸ್ ಬರಲಿಲ್ಲ. ಅಷ್ಟರಲ್ಲಿ ರೋಗಿಯ ಪರಿಸ್ಥಿತಿ ಬಿಗಡಾಯಿಸಿದೆ. ಕೊನೆಗೆ ಮನೆಯವರು ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿಯವರಿಗೆ ಕರೆ ಮಾಡಿದ್ದಾರೆ. ತಕ್ಷಣ ವಿಶು ಶೆಟ್ಟಿ ಅವರು ಖಾಸಗಿ ಆಂಬುಲೆನ್ಸ್ ಗೆ ಕರೆ ಮಾಡಿದರೂ ಭಾನುವಾರವಾದ ಕಾರಣ ಯಾರೂ ಬರಲಿಲ್ಲ.

ಕೊನೆಗೆ ವಿಶು ಶೆಟ್ಟಿಯವರು ಸ್ಟ್ರೇಚರ್ ಇಲ್ಲದೇ ಇದ್ದ ಕಾರಣ ಹೊದಿಕೆಯಲ್ಲಿ ರೋಗಿಯನ್ನು ಎತ್ತಿ, ತಮ್ಮದೇ ಗೂಡ್ಸ್ ಟೆಂಪೊದಲ್ಲಿ ಮಂಚ ಇರಿಸಿ, ರೋಗಿಯನ್ನು ಅದರಲ್ಲಿ ಮಲಗಿಸಿ, ಆಸ್ಪತ್ರೆಗೆ ದಾಖಲಿಸಿದ್ದರು. ಈ ಬಗ್ಗೆ ವಿಶು ಶೆಟ್ಟಿಯವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಒಂದು ವರ್ಷದಿಂದ ಈ ಸಮಸ್ಯೆ ಇದೆ. ಜಿಲ್ಲೆಯಲ್ಲಿ ಒಟ್ಟು 18 ರಷ್ಟು ಸರಕಾರಿ ಆಂಬುಲೆನ್ಸ್ ಇದೆ. ಆದರೆ ಅವುಗಳ ದುರಸ್ತಿ, ಚಾಲಕರ ಸಮಸ್ಯೆ ಇತ್ಯಾದಿಗಳಿಂದ ಕೇವಲ ನಾಲ್ಕೈದು ಮಾತ್ರ ಕಾರ್ಯ ನಿರ್ವಹಿಸುತ್ತಿವೆ. ಈ ಬಗ್ಗೆ ಜಿಲ್ಲಾಡಳಿತಕ್ಕೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಜಿಲ್ಲಾಧಿಕಾರಿಯವರು ಇನ್ನಾದರೂ ಈ ಸಮಸ್ಯೆ ಪರಿಹರಿಸಬೇಕು. ದಯವಿಟ್ಟು ಬಡಜನರ ಜೀವದ ಜೊತೆ ಚೆಲ್ಲಾಟವಾಡಬೇಡಿ ಎಂದು ಆಗ್ರಹಿಸಿದ್ದಾರೆ.

ಉಡುಪಿ ಶಾಸಕರಾದ ಯಶಪಾಲ್ ಸುವರ್ಣ ಮಾತನಾಡಿ, ಉದ್ಯಾವರದಲ್ಲಿ ರೋಗಿ ಎರಡು ಗಂಟೆ ಕಾದರೂ 108 ಸೇವೆ ಲಭ್ಯವಾಗದೇ ಸಮಾಜ ಸೇವಕ ವಿಶು ಶೆಟ್ಟಿ ಅವರು ರೋಗಿಯನ್ನು ಗೂಡ್ಸ್ ವಾಹನದಲ್ಲಿ ಕರೆ ತಂದ ಘಟನೆ ಅತ್ಯಂತ ದುರದೃಷ್ಟಕರ. ರಾಜ್ಯ ಸರಕಾರ ಜಿಲ್ಲೆಯ ಆರೋಗ್ಯ ಸಮಸ್ಯೆಗಳ ಬಗ್ಗೆ ಮಲ ತಾಯಿ ಧೋರಣೆ ನಡೆಸುತ್ತಿದ್ದು ರೋಗಿಗಳ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ 2 ವರ್ಷಗಳಲ್ಲಿ 108 ಸೇವೆ ವ್ಯತ್ಯಯವಾಗಿ ರೋಗಿಗಳು ಸಮಸ್ಯೆ ಎದುರಿಸುತ್ತಿದ್ದು, ಈ ಬಗ್ಗೆ ಆರೋಗ್ಯ ಸಚಿವರ ಗಮನಕ್ಕೆ ತಂದರೂ ಏನೂ ಪ್ರಯೋಜನವಾಗಿಲ್ಲ. 108 ಸೇವೆಯ ಚಾಲಕರಿಗೆ ಅವೈಜ್ಞಾನಿಕ ಶಿಫ್ಟ್ ವ್ಯವಸ್ಥೆ, ವಾಹನಗಳ ಕಳಪೆ ನಿರ್ವಹಣೆ, ವೇತನ ಬಾಕಿ, ವಸತಿ ಸೌಲಭ್ಯ ಕೊರತೆ ಮುಂತಾದ ಗಂಭೀರ ಸಮಸ್ಯೆಗಳ ಬಗ್ಗೆ ಹಲವು ಬಾರಿ ಪತ್ರ ಬರೆದರೂ ರಾಜ್ಯ ಸರಕಾರ ಪರಿಹಾರ ಕಲ್ಪಿಸಿಲ್ಲ. ಆರೋಗ್ಯಕ್ಕೆ ವಿಶೇಷ ಮಹತ್ವ ನೀಡುವ ಜಿಲ್ಲೆಯಲ್ಲಿ ಇಂತಹ ಘಟನೆಗಳು ವರದಿಯಾಗುತ್ತಿರುವುದು ರಾಜ್ಯ ಸರಕಾರದ ವೈಫಲ್ಯಕ್ಕೆ ಜೀವಂತ ಸಾಕ್ಷಿಯಾಗಿದೆ ಎಂದವರು ಹೇಳಿದ್ದಾರೆ.

 

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search