• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!

Tulunadu News Posted On December 9, 2025
0


0
Shares
  • Share On Facebook
  • Tweet It

ಸರಕಾರದ 108 ಆಂಬುಲೆನ್ಸ್ ಸಕಾಲದಲ್ಲಿ ಬರದೇ ಕೊನೆಗೆ ಗೂಡ್ಸ್ ಟೆಂಪೊದಲ್ಲಿ ಮಂಚ ಇರಿಸಿ, ಅದರಲ್ಲಿ ಮಲಗಿಸಿ, ಆಸ್ಪತ್ರೆಗೆ ದಾಖಲಿಸಿರುವಂತಹ ಘಟನೆ ಉಡುಪಿ ಜಿಲ್ಲೆಯ ಉದ್ಯಾವರದಲ್ಲಿ ಜರುಗಿದೆ.

ರಾತ್ರಿ 7 ಗಂಟೆಗೆ ವೃದ್ಧರೋಗಿಯೊಬ್ಬರು ಅಸ್ವಸ್ಥಗೊಂಡರು. ತಕ್ಷಣ ಮನೆಯವರು ಆಂಬುಲೆನ್ಸ್ ಗಾಗಿ ಕರೆ ಮಾಡಿದ್ದಾರೆ. ಆದರೆ 9.30 ಆದರೂ ಆಂಬುಲೆನ್ಸ್ ಬರಲಿಲ್ಲ. ಅಷ್ಟರಲ್ಲಿ ರೋಗಿಯ ಪರಿಸ್ಥಿತಿ ಬಿಗಡಾಯಿಸಿದೆ. ಕೊನೆಗೆ ಮನೆಯವರು ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿಯವರಿಗೆ ಕರೆ ಮಾಡಿದ್ದಾರೆ. ತಕ್ಷಣ ವಿಶು ಶೆಟ್ಟಿ ಅವರು ಖಾಸಗಿ ಆಂಬುಲೆನ್ಸ್ ಗೆ ಕರೆ ಮಾಡಿದರೂ ಭಾನುವಾರವಾದ ಕಾರಣ ಯಾರೂ ಬರಲಿಲ್ಲ.

ಕೊನೆಗೆ ವಿಶು ಶೆಟ್ಟಿಯವರು ಸ್ಟ್ರೇಚರ್ ಇಲ್ಲದೇ ಇದ್ದ ಕಾರಣ ಹೊದಿಕೆಯಲ್ಲಿ ರೋಗಿಯನ್ನು ಎತ್ತಿ, ತಮ್ಮದೇ ಗೂಡ್ಸ್ ಟೆಂಪೊದಲ್ಲಿ ಮಂಚ ಇರಿಸಿ, ರೋಗಿಯನ್ನು ಅದರಲ್ಲಿ ಮಲಗಿಸಿ, ಆಸ್ಪತ್ರೆಗೆ ದಾಖಲಿಸಿದ್ದರು. ಈ ಬಗ್ಗೆ ವಿಶು ಶೆಟ್ಟಿಯವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಒಂದು ವರ್ಷದಿಂದ ಈ ಸಮಸ್ಯೆ ಇದೆ. ಜಿಲ್ಲೆಯಲ್ಲಿ ಒಟ್ಟು 18 ರಷ್ಟು ಸರಕಾರಿ ಆಂಬುಲೆನ್ಸ್ ಇದೆ. ಆದರೆ ಅವುಗಳ ದುರಸ್ತಿ, ಚಾಲಕರ ಸಮಸ್ಯೆ ಇತ್ಯಾದಿಗಳಿಂದ ಕೇವಲ ನಾಲ್ಕೈದು ಮಾತ್ರ ಕಾರ್ಯ ನಿರ್ವಹಿಸುತ್ತಿವೆ. ಈ ಬಗ್ಗೆ ಜಿಲ್ಲಾಡಳಿತಕ್ಕೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಜಿಲ್ಲಾಧಿಕಾರಿಯವರು ಇನ್ನಾದರೂ ಈ ಸಮಸ್ಯೆ ಪರಿಹರಿಸಬೇಕು. ದಯವಿಟ್ಟು ಬಡಜನರ ಜೀವದ ಜೊತೆ ಚೆಲ್ಲಾಟವಾಡಬೇಡಿ ಎಂದು ಆಗ್ರಹಿಸಿದ್ದಾರೆ.

ಉಡುಪಿ ಶಾಸಕರಾದ ಯಶಪಾಲ್ ಸುವರ್ಣ ಮಾತನಾಡಿ, ಉದ್ಯಾವರದಲ್ಲಿ ರೋಗಿ ಎರಡು ಗಂಟೆ ಕಾದರೂ 108 ಸೇವೆ ಲಭ್ಯವಾಗದೇ ಸಮಾಜ ಸೇವಕ ವಿಶು ಶೆಟ್ಟಿ ಅವರು ರೋಗಿಯನ್ನು ಗೂಡ್ಸ್ ವಾಹನದಲ್ಲಿ ಕರೆ ತಂದ ಘಟನೆ ಅತ್ಯಂತ ದುರದೃಷ್ಟಕರ. ರಾಜ್ಯ ಸರಕಾರ ಜಿಲ್ಲೆಯ ಆರೋಗ್ಯ ಸಮಸ್ಯೆಗಳ ಬಗ್ಗೆ ಮಲ ತಾಯಿ ಧೋರಣೆ ನಡೆಸುತ್ತಿದ್ದು ರೋಗಿಗಳ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ 2 ವರ್ಷಗಳಲ್ಲಿ 108 ಸೇವೆ ವ್ಯತ್ಯಯವಾಗಿ ರೋಗಿಗಳು ಸಮಸ್ಯೆ ಎದುರಿಸುತ್ತಿದ್ದು, ಈ ಬಗ್ಗೆ ಆರೋಗ್ಯ ಸಚಿವರ ಗಮನಕ್ಕೆ ತಂದರೂ ಏನೂ ಪ್ರಯೋಜನವಾಗಿಲ್ಲ. 108 ಸೇವೆಯ ಚಾಲಕರಿಗೆ ಅವೈಜ್ಞಾನಿಕ ಶಿಫ್ಟ್ ವ್ಯವಸ್ಥೆ, ವಾಹನಗಳ ಕಳಪೆ ನಿರ್ವಹಣೆ, ವೇತನ ಬಾಕಿ, ವಸತಿ ಸೌಲಭ್ಯ ಕೊರತೆ ಮುಂತಾದ ಗಂಭೀರ ಸಮಸ್ಯೆಗಳ ಬಗ್ಗೆ ಹಲವು ಬಾರಿ ಪತ್ರ ಬರೆದರೂ ರಾಜ್ಯ ಸರಕಾರ ಪರಿಹಾರ ಕಲ್ಪಿಸಿಲ್ಲ. ಆರೋಗ್ಯಕ್ಕೆ ವಿಶೇಷ ಮಹತ್ವ ನೀಡುವ ಜಿಲ್ಲೆಯಲ್ಲಿ ಇಂತಹ ಘಟನೆಗಳು ವರದಿಯಾಗುತ್ತಿರುವುದು ರಾಜ್ಯ ಸರಕಾರದ ವೈಫಲ್ಯಕ್ಕೆ ಜೀವಂತ ಸಾಕ್ಷಿಯಾಗಿದೆ ಎಂದವರು ಹೇಳಿದ್ದಾರೆ.

 

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search