• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!

Tulunadu News Posted On December 10, 2025
0


0
Shares
  • Share On Facebook
  • Tweet It

ರಾಜ್ಯ ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ವಿಷಯ ಮತ್ತೊಮ್ಮೆ ಮುನ್ನಲೆಗೆ ಬಂದಿದ್ದು, ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಇದು ಪರ-ವಿರೋಧ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ರಾಜ್ಯ ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂದು ವಿಧಾನಸಭೆಯಲ್ಲಿ ಸರಕಾರದ ಗಮನ ಸೆಳೆಯಲು ನೋಟಿಸ್ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್ ಅಶೋಕ್ “ಟಿಪ್ಪು ಜಯಂತಿ ಮಾಡಿದ ಬಳಿಕ ಸಿದ್ದು ಸರಕಾರ ಗೋವಿಂದ ಆಯಿತು. ಟಿಪ್ಪು ಬಗ್ಗೆ ಸಿನೆಮಾ ಮಾಡಲು ಹೋಗಿ ಅವನ್ಯಾರೋ ಸುಟ್ಟು ಹೋದ. ಟಿಪ್ಪು ಖಡ್ಗ ತಂದ ಮಲ್ಯ ಲಂಡನ್ ಗೆ ಓಡಿಹೋದ. ಈಗ ಸಿದ್ದು ಸರಕಾರ ಕೆಡವಲು ಕಾಶಪ್ಪನವರ್ ಟಿಪ್ಪು ವಿಚಾರ ತಂದಿದ್ದಾರೆ. ಉತ್ತರ ಕರ್ನಾಟಕಕ್ಕೆ ಸರಕಾರದಿಂದ ಆಗಿರುವ ಅನ್ಯಾಯಗಳ ವಿಚಾರಗಳ ಚರ್ಚೆ ದಿಕ್ಕು ತಪ್ಪಿಸಲು ಟಿಪ್ಪು, ಹೈದರಾಲಿ ವಿಚಾರಗಳನ್ನು ಕಾಂಗ್ರೆಸ್ ನವರು ತರುತ್ತಿದ್ದಾರೆ. ಟಿಪ್ಪು ಸುಲ್ತಾನ್ ಖಡ್ಗದಲ್ಲಿ ಪರ್ಶಿಯನ್ ಭಾಷೆ ಇದೆ. ಸಿದ್ಧರಾಮಯ್ಯ ಹಿಂದೆ ಟಿಪ್ಪು ಜಯಂತಿ ಮಾಡಿದ್ದರು. ಆಗ ಕೊಡಗಿನಲ್ಲಿ ಸಾವು – ನೋವುಗಳಾದವು ಎಂದು ಹೇಳಿದ್ದಾರೆ. ಇನ್ನು ಶಾಸಕ ಬಸವನಗೌಡ ಯತ್ನಾಳ್ ಮಾತನಾಡಿ “ಟಿಪ್ಪು ಸುಲ್ತಾನ್ ಕಾಲದಲ್ಲಿ ಹಿಂದೂಗಳ ನರಮೇಧ ಆಗಿದೆ. ಟಿಪ್ಪು ಜಯಂತಿ ಆಚರಣೆ ಮಾಡಿದ್ದೇ ಈ ಹಿಂದೆ ಸಿದ್ಧರಾಮಯ್ಯ ಸರಕಾರದ ಸೋಲಿಗೆ ಕಾರಣವಾಗಿತ್ತು. ಇದೀಗ ಮತ್ತೆ ಟಿಪ್ಪು ಜಯಂತಿ ಆಚರಣೆಯನ್ನು ರಾಜ್ಯ ಸರಕಾರ ಮಾಡಿದರೆ ಅನಾಹುತ ಗ್ಯಾರಂಟಿ. ಹಿಂದುಗಳಲ್ಲಿರುವ ಮುಸ್ಲಿಂ ತಳಿಗಳು ಇಂತಹ ಕೆಲಸ ಮಾಡುತ್ತಿವೆ ಎಂದು ಹೇಳಿದರು.
ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಮಾತನಾಡಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹಿಂದೆ ವಿಧಾನಸೌಧದಲ್ಲಿ ಸರಕಾರದಿಂದ ಟಿಪ್ಪು ಜಯಂತಿ ಆಚರಣೆ ಮಾಡುತ್ತಿದ್ದರು. ಆದರೆ ಕಾರಣಾಂತರಗಳಿಂದ ಅದು ಸ್ಥಗಿತ ಆಗಿದೆ ಅಷ್ಟೇ. ಆದರೆ ಟಿಪ್ಪು ಅಭಿಮಾನಿಗಳು ಯಾರೂ ಟಿಪ್ಪು ಆಚರಣೆ ನಿಲ್ಲಿಸಿಲ್ಲ. ಈಗ ಸರಕಾರದ ಮುಂದೆ ಪ್ರಸ್ತಾಪ ಇಲ್ಲ. ಟಿಪ್ಪು ಜಯಂತಿಯನ್ನು ನಾವೆಲ್ಲ ಅಭಿಮಾನಿಗಳು ಮಾಡಿಯೇ ತೀರುತ್ತೇವೆ. ಆದರೆ ಸರಕಾರದಿಂದ ಮಾಡಿ ಅಂತ ನಾನು ಹೇಳುವುದಿಲ್ಲ. ಸದನದಲ್ಲಿ ಚರ್ಚೆಗೆ ಬಂದರೆ ನೋಡೋಣ ಎಂದರು. ಇಂಧನ ಸಚಿವ ಜಾರ್ಜ್ ಮಾತನಾಡಿ, ಟಿಪ್ಪು ಜಯಂತಿ ಆಚರಿಸಲು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹ ಸಚಿವರು ತೀರ್ಮಾನ ತೆಗೆದುಕೊಂಡರೆ ಅದಕ್ಕೆ ನಮ್ಮ ಒಪ್ಪಿಗೆ ಇರುತ್ತದೆ ಎಂದರು.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search