• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!

Tulunadu News Posted On December 17, 2025
0


0
Shares
  • Share On Facebook
  • Tweet It

ಅಜಾನ್ ಸಮಯದಲ್ಲಿ ಲೌಡ್ ಸ್ವೀಕರ್ ಬಳಕೆಯಿಂದ ಉಂಟಾಗುತ್ತಿರುವ ಶಬ್ದದ ಪರ-ವಿರೋಧ ಚರ್ಚೆ ಬಹಳ ಕಾಲದಿಂದ ಆಗುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಈ ವಿಷಯ ಈ ಬಾರಿ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಅಧಿವೇಶನದಲ್ಲಿಯೂ ಚರ್ಚೆಯಾಯಿತು. ಅಜಾನ್ ಸಮಯದಲ್ಲಿ ಡೆಸಿಬಲ್ ಮಿತಿ ಮೀರಿ ಲೌಡ್ ಸ್ವೀಕರ್ ಬಳಸುತ್ತಿರುವುದನ್ನು ನಿಯಂತ್ರಿಸಬೇಕೆಂಬ ಭಾರತೀಯ ಜನತಾ ಪಾರ್ಟಿಯ ಡಿ.ಎಸ್. ಅರುಣ್ ಅವರು ಪ್ರಶ್ನೆ ಕೇಳಿದ್ದರು. ಅವರ ಪ್ರಶ್ನೆಗೆ ಪರಿಸರ ಸಚಿವ ಈಶ್ವರ್ ಖಂಡ್ರೆ ಅವರು ದೀಪಾವಳಿಯ ಪಟಾಕಿ ಬಳಕೆ, ಹಬ್ಬ ಇತ್ಯಾದಿ ವೇಳೆ ಲೌಡ್ ಸ್ಪೀಕರ್ ಬಳಕೆ ವಿಷಯ ಪ್ರಸ್ತಾಪಿಸಿದ್ದು, ಕೆಲಕಾಲ ತೀವ್ರ ಮಾತಿನ ವಾಗ್ವಾದಕ್ಕೆ ಕಾರಣವಾಯಿತು.

ಆಜಾನ್ ವಿಷಯದಲ್ಲಿ ರಾಜಕೀಯ ಮಾಡಲಾಗುತ್ತಿದೆ ಎಂದು ಸಚಿವ ಖಂಡ್ರೆ ಹೇಳಿದಾಗ, ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಕಾಂಗ್ರೆಸ್ ಸದಸ್ಯರು ಎದ್ದು ನಿಂತು ಸಚಿವರನ್ನು ಬೆಂಬಲಿಸಿ ಮಾತನಾಡತೊಡಗಿದರು.

ಚರ್ಚೆಯ ನಡುವೆ ವಿಧಾನ ಪರಿಷತ್ ಸದಸ್ಯ ಅರುಣ್ ” ಅಜಾನ್ ನಿಂದ ತೊಂದರೆಯಾಗುತ್ತದೆ ಎಂದು ದೂರು ಕೊಡುವ ಧೈರ್ಯ ಯಾರಿಗೂ ಇಲ್ಲ. ಯಾಕೆಂದರೆ ಇವರಿಗೆ ಸರಕಾರದ ಬೆಂಬಲ ಇದೆ. ಕಳೆದ ಎರಡೂವರೆ ವರ್ಷಗಳಿಂದ ಇದಕ್ಕೆ ಸರಕಾರದ ಬೆಂಬಲವಿದೆ” ಎಂದು ಹೇಳಿದ ಮಾತು ಕೆಲಕಾಲ ಮಾತಿನ ಚಕಮಕಿಗೆ ಕಾರಣವಾಯಿತು. ಈ ಮಧ್ಯೆ ಸಚಿವ ಈಶ್ವರ ಖಂಡ್ರೆ ಮಾತನಾಡಿ ದೀಪಾವಳಿಯ ಸಮಯದಲ್ಲಿ ಪಟಾಕಿ ಹೊಡೆಯುವುದರಿಂದ ಶಬ್ದ ಮಾಲಿನ್ಯ, ವಾಯು ಮಾಲಿನ್ಯ ಆಗುತ್ತದೆ ಎಂದು ಹೇಳತೊಡಗಿದರು. ಆಗ ಸಭಾಪತಿ ಬಸವರಾಜ ಹೊರಟ್ಟಿ ಅವರು ಸದಸ್ಯರು ಕೇಳಿದ ಪ್ರಶ್ನೆಗೆ ಮಾತ್ರ ಉತ್ತರ ನೀಡಿ, ಬೇರೆ ವಿಷಯ ಪ್ರಸ್ತಾಪ ಬೇಡಾ ಎಂದು ಸಚಿವರಿಗೆ ಸಲಹೆ ನೀಡಿದರು.

 

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search