• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!

Tulunadu News Posted On January 6, 2026
0


0
Shares
  • Share On Facebook
  • Tweet It

 ಬಿಜೆಪಿ ನಾಯಕಿ ಹಾಗೂ ಮಾಜಿ ಸಂಸದೆ ನವನೀತ್ ರಾಣಾ ಕಳೆದ ತಿಂಗಳು ಮಾಡಿದ ಹೇಳಿಕೆ ದೇಶಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿತ್ತು. “ಕೆಲವರು ಹೆಚ್ಚಿನ ಮಕ್ಕಳನ್ನು ಹೆತ್ತು ಹಿಂದೂಸ್ತಾನನ್ನು ಪಾಕಿಸ್ತಾನವಾಗಿಸಲು ಸಂಚು ರೂಪಿಸುತ್ತಿದ್ದಾರೆ. ಅದನ್ನು ಎದುರಿಸಲು ಹಿಂದೂಗಳು ಕನಿಷ್ಠ ಮೂರು–ನಾಲ್ಕು ಮಕ್ಕಳನ್ನು ಹೊಂದಬೇಕು” ಎಂದು ಅವರು ಹೇಳಿದ್ದರು.

ನವನೀತ್ ರಾಣಾ ಅವರ ಈ ಹೇಳಿಕೆಗೆ ಈಗ AIMIM ಮುಖ್ಯಸ್ಥ ಅಸದುದ್ದೀನ್ ಓವೈಸಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
“ನನಗೆ ಆರು ಮಕ್ಕಳು ಇದ್ದಾರೆ. ನಿಮಗೆ ನಾಲ್ಕು ಮಕ್ಕಳನ್ನು ಹೊಂದುವುದನ್ನು ಯಾರು ತಡೆಯುತ್ತಿದ್ದಾರೆ?” ಎಂದು ಓವೈಸಿ ಪ್ರಶ್ನಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಇಬ್ಬಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವಿಲ್ಲ ಎಂಬ ನಿಯಮವಿದೆ ಎಂದು ಓವೈಸಿ ಗಮನಾರ್ಹ ವಿಷಯವನ್ನು ಮುಂದಿಟ್ಟಿದ್ದಾರೆ. “ಈ ನಿಯಮವು ತೆಲಂಗಾಣದಲ್ಲೂ ಇತ್ತು, ನಂತರ ಅದನ್ನು ಬದಲಾಯಿಸಲಾಯಿತು” ಎಂದು ಅವರು ಹೇಳಿದರು.

ಇದೇ ವೇಳೆ, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಮೂರುಕ್ಕಿಂತ ಹೆಚ್ಚು ಮಕ್ಕಳ ಕುರಿತು ಮಾತನಾಡಿದ್ದನ್ನು, ಆ ಸಂದರ್ಭದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಉಪಸ್ಥಿತರಿದ್ದರು ಎಂಬುದನ್ನೂ ಓವೈಸಿ ನೆನಪಿಸಿದರು.
“ಹಾಗಾದರೆ ಮಾಡಿ, ಯಾರೂ ನಿಮ್ಮನ್ನು ತಡೆಯುತ್ತಿಲ್ಲ” ಎಂದು ಅವರು ವ್ಯಂಗ್ಯವಾಡಿದರು.

ಇದಕ್ಕೂ ಮೊದಲು ನವನೀತ್ ರಾಣಾ, “ನಾಲ್ಕು ಹೆಂಡತಿಯರು, 19 ಮಕ್ಕಳು ಎಂದು ಕೆಲವರು ಬಹಿರಂಗವಾಗಿ ಹೇಳುತ್ತಾರೆ. ಹೆಚ್ಚಿನ ಮಕ್ಕಳನ್ನು ಹೆತ್ತು ದೇಶದ ಜನಸಂಖ್ಯಾ ಸಮತೋಲನವನ್ನು ಬದಲಾಯಿಸಲು ಅವರು ಯತ್ನಿಸುತ್ತಿದ್ದಾರೆ. ಆದ್ದರಿಂದ ಹಿಂದೂಗಳು ಕೇವಲ ಒಂದೇ ಮಗುವಿಗೆ ತೃಪ್ತಿಪಡಬಾರದು, ಕನಿಷ್ಠ ಮೂರು–ನಾಲ್ಕು ಮಕ್ಕಳನ್ನು ಹೊಂದಬೇಕು” ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆ–ಪ್ರತಿಹೇಳಿಕೆಗಳಿಂದ ಮಕ್ಕಳ ಸಂಖ್ಯೆ, ಜನಸಂಖ್ಯೆ ಹಾಗೂ ರಾಜಕೀಯದ ನಡುವೆ ಹೊಸ ವಿವಾದ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search