• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!

Tulunadu News Posted On January 6, 2026
0


0
Shares
  • Share On Facebook
  • Tweet It

 ಬಿಜೆಪಿ ನಾಯಕಿ ಹಾಗೂ ಮಾಜಿ ಸಂಸದೆ ನವನೀತ್ ರಾಣಾ ಕಳೆದ ತಿಂಗಳು ಮಾಡಿದ ಹೇಳಿಕೆ ದೇಶಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿತ್ತು. “ಕೆಲವರು ಹೆಚ್ಚಿನ ಮಕ್ಕಳನ್ನು ಹೆತ್ತು ಹಿಂದೂಸ್ತಾನನ್ನು ಪಾಕಿಸ್ತಾನವಾಗಿಸಲು ಸಂಚು ರೂಪಿಸುತ್ತಿದ್ದಾರೆ. ಅದನ್ನು ಎದುರಿಸಲು ಹಿಂದೂಗಳು ಕನಿಷ್ಠ ಮೂರು–ನಾಲ್ಕು ಮಕ್ಕಳನ್ನು ಹೊಂದಬೇಕು” ಎಂದು ಅವರು ಹೇಳಿದ್ದರು.

ನವನೀತ್ ರಾಣಾ ಅವರ ಈ ಹೇಳಿಕೆಗೆ ಈಗ AIMIM ಮುಖ್ಯಸ್ಥ ಅಸದುದ್ದೀನ್ ಓವೈಸಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
“ನನಗೆ ಆರು ಮಕ್ಕಳು ಇದ್ದಾರೆ. ನಿಮಗೆ ನಾಲ್ಕು ಮಕ್ಕಳನ್ನು ಹೊಂದುವುದನ್ನು ಯಾರು ತಡೆಯುತ್ತಿದ್ದಾರೆ?” ಎಂದು ಓವೈಸಿ ಪ್ರಶ್ನಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಇಬ್ಬಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವಿಲ್ಲ ಎಂಬ ನಿಯಮವಿದೆ ಎಂದು ಓವೈಸಿ ಗಮನಾರ್ಹ ವಿಷಯವನ್ನು ಮುಂದಿಟ್ಟಿದ್ದಾರೆ. “ಈ ನಿಯಮವು ತೆಲಂಗಾಣದಲ್ಲೂ ಇತ್ತು, ನಂತರ ಅದನ್ನು ಬದಲಾಯಿಸಲಾಯಿತು” ಎಂದು ಅವರು ಹೇಳಿದರು.

ಇದೇ ವೇಳೆ, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಮೂರುಕ್ಕಿಂತ ಹೆಚ್ಚು ಮಕ್ಕಳ ಕುರಿತು ಮಾತನಾಡಿದ್ದನ್ನು, ಆ ಸಂದರ್ಭದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಉಪಸ್ಥಿತರಿದ್ದರು ಎಂಬುದನ್ನೂ ಓವೈಸಿ ನೆನಪಿಸಿದರು.
“ಹಾಗಾದರೆ ಮಾಡಿ, ಯಾರೂ ನಿಮ್ಮನ್ನು ತಡೆಯುತ್ತಿಲ್ಲ” ಎಂದು ಅವರು ವ್ಯಂಗ್ಯವಾಡಿದರು.

ಇದಕ್ಕೂ ಮೊದಲು ನವನೀತ್ ರಾಣಾ, “ನಾಲ್ಕು ಹೆಂಡತಿಯರು, 19 ಮಕ್ಕಳು ಎಂದು ಕೆಲವರು ಬಹಿರಂಗವಾಗಿ ಹೇಳುತ್ತಾರೆ. ಹೆಚ್ಚಿನ ಮಕ್ಕಳನ್ನು ಹೆತ್ತು ದೇಶದ ಜನಸಂಖ್ಯಾ ಸಮತೋಲನವನ್ನು ಬದಲಾಯಿಸಲು ಅವರು ಯತ್ನಿಸುತ್ತಿದ್ದಾರೆ. ಆದ್ದರಿಂದ ಹಿಂದೂಗಳು ಕೇವಲ ಒಂದೇ ಮಗುವಿಗೆ ತೃಪ್ತಿಪಡಬಾರದು, ಕನಿಷ್ಠ ಮೂರು–ನಾಲ್ಕು ಮಕ್ಕಳನ್ನು ಹೊಂದಬೇಕು” ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆ–ಪ್ರತಿಹೇಳಿಕೆಗಳಿಂದ ಮಕ್ಕಳ ಸಂಖ್ಯೆ, ಜನಸಂಖ್ಯೆ ಹಾಗೂ ರಾಜಕೀಯದ ನಡುವೆ ಹೊಸ ವಿವಾದ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search