• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!

Tulunadu News Posted On February 25, 2026
0


0
Shares
  • Share On Facebook
  • Tweet It

ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ |ಮುಂದಿನ ತಿಂಗಳು ಬಜೆಟ್ ಮಂಡನೆ ಸಾಧ್ಯತೆ

ಮಂಗಳೂರು ಮಹಾನರ ಪಾಲಿಕೆಯಲ್ಲಿ ಜನಪ್ರತಿನಿಧಿಗಳ ಆಡಳಿತ ಪೂರ್ಣಗೊಂಡು ಫೆ. 27ಕ್ಕೆ ಒಂದು ವರ್ಷ ಪೂರ್ಣಗೊಳ್ಳುತ್ತಿದೆ. ಸದ್ಯಕ್ಕೆ ಚುನಾವಣೆ ನಡೆಯುವ ಯಾವುದೇ ಲಕ್ಷಣ ಗೋಚರಿಸುತ್ತಿಲ್ಲ.

ಕೆಲವು ವಾರಗಳ ಹಿಂದೆ ಮಂಗಳೂರಿಗೆ ಆಗಮಿಸಿದ್ದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು ಮಾರ್ಚ್ ತಿಂಗಳಲ್ಲಿ ಸ್ಥಳೀಯ ಚುನಾವಣೆಯ ಪ್ರಸ್ತಾವ ಮಾಡಿದ್ದರು. ಆದರೆ ಪೂರಕ ತಯಾರಿ ಇನ್ನೂ ಆರಂಭಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಚುನಾವಣೆ ನಡೆಯುವ ಸಾಧ್ಯತೆ ಕಡಿಮೆ. ಇನ್ನೇನು ಚುನಾವಣೆ ದಿನಾಂಕ ನಿಗದಿ ಆಗಬೇಕು. ವಾರ್ಡ್ ಮೀಸಲಾತಿ ಪ್ರಕಟಗೊಳ್ಳಬೇಕು. ಬಳಿಕ ನಾಮಪತ್ರ ಸಲ್ಲಿಕೆ, ಪ್ರಚಾರ ಸೇರಿದಂತೆ ಈ ಪ್ರಕ್ರಿಯೆ ನಡೆಯಲು ಇನ್ನೂ ಕೆಲವು ತಿಂಗಳು ಬೇಕು.

ಸದ್ಯದ ಮಾಹಿತಿಯ ಪ್ರಕಾರ ಮಾರ್ಚ್ ತಿಂಗಳಲ್ಲಿ ಕೇಂದ್ರ ಸರಕಾರದಿಂದ ಜನಗಣತಿ ಕಾರ್ಯ ನಡೆಯಲಿದೆ. ಇದೇ ಸಮಯ ದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯೂ ಆಗಲಿದ್ದು, ಈ ವೇಳೆ ಚುನಾವಣೆ ನಡೆಯು ವುದು ಅನುಮಾನ ಎನ್ನಲಾಗಿದೆ. ಬಳಿಕ ಮಳೆಗಾಲ ಆರಂಭ ಆಗಲಿದ್ದು, ಈ ವೇಳೆಯೂ ಚುನಾವಣೆ ಘೋಷಣೆಯಾಗದು. ಏನಿದ್ದರೂ, ಸಪ್ಟೆಂಬರ್, ಅಕ್ಟೋ ಬರ್‌ ವೇಳೆ ಚುನಾವಣೆಗೆ ಕಾಲ ಕೂಡಿ ಬರಬಹುದು ಎಂದು ಅಂದಾಜಿಸಲಾಗಿದೆ.

ಮಂಗಳೂರು ಪಾಲಿಕೆಯ ಕೊನೆಯ ಮೇಯರ್ ಮನೋಜ್ ಕುಮಾರ್ ಅವರ ಆಡಳಿತಾವಧಿ 2025ರ ಫೆ. 27ರಂದು ಪೂರ್ಣಗೊಂಡಿತ್ತು. ಇದಾದ ವಾರದ ಬಳಿಕ ನೂತನ ಆಡಳಿತಾಧಿಕಾರಿಯನ್ನಾಗಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ರಮೇಶ್ ಡಿ.ಎಸ್. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶಿಸಿತ್ತು. ಬಳಿಕ ನಿರ್ಧಾರದಿಂದ ಹಿಂದೆ ಸರಿದು ದ.ಕ. ಜಿಲ್ಲಾಧಿಕಾರಿಗಳನ್ನು ಆಡಳಿತಾಧಿಕಾರಿಯಾಗಿ . ನೇಮಕ ಮಾಡಲಾಗಿದ್ದು, ಈಗಲೂ ಮುಂದುವರಿದಿ ದ್ದಾರೆ. ಪಾಲಿಕೆಯಲ್ಲಿ ಜನ ಪ್ರತಿನಿಧಿಗಳಿಲ್ಲದೆ, ಜನರ ಹಲವು ಸಮಸ್ಯೆ ಈಡೇರುತ್ತಿಲ್ಲ ಎಂಬ ದೂರುಗಳು ಸಾರ್ವಜನಿಕ ವಲಯ ದಲ್ಲಿ ಕೇಳಿಬರುತ್ತಿದೆ. ಪಾಲಿಕೆ ಚುನಾವಣೆ ನಡೆಯದೆ ಜನಪ್ರತಿನಿಧಿಗಳು ಇರದ ಕಾರಣ ಸಾರ್ವಜನಿಕರು ಯಾರಲ್ಲಿ ದೂರು -ದುಮ್ಮಾನ ಹೇಳುವುದು ಎಂಬ ಗೊಂದಲದಲ್ಲಿದ್ದರು. ಸದ್ಯ ಜಿಲ್ಲಾಧಿಕಾರಿ ಗಳು ಕಳೆದ ಎರಡು ತಿಂಗಳಿನಿಂದ ಫೋನ್-ಇನ್ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಕೆಲ ನಾಗರಿಕರಿಗೆ ಅಹವಾಲು ಹೇಳಲು ವೇದಿಕೆ ಸಿಕ್ಕಂತಾಗಿದೆ.

ಈ ಬಾರಿಯ ಬಜೆಟ್ ಕುರಿತಂತೆ ಈಗಾಗಲೇ ಪಾಲಿಕೆ ಮುಖ್ಯ ಕಚೇರಿ ಮತ್ತು ಸುರತ್ಕಲ್ ವಲಯ ಕಚೇರಿಗಳಲ್ಲಿ ಜನಾಭಿಪ್ರಾಯ ಸಂಗ್ರಹ ಸಭೆ ನಡೆದಿದೆ. ಈ ಕುರಿತು ಅಧಿಕಾರಿಗಳ ಮಟ್ಟದಲ್ಲಿಯೂ ಕೆಲವು ಸುತ್ತಿನ ಸಭೆ ನಡೆದಿದೆ. ಮುಂದಿನ ತಿಂಗಳು ರಾಜ್ಯ ಬಜೆಟ್ ಇದ್ದು, ಇದಾದ ಬಳಿಕ ಮಂಗಳೂರು ಪಾಲಿಕೆ ಬಜೆಟ್ ಕೂಡ ಮಂಡನೆಯಾಗುವ ಸಾಧ್ಯತೆ ಇದೆ. ಸಾಮಾನ್ಯವಾಗಿ ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯೀ ಸಮಿತಿ ಅಧ್ಯಕ್ಷರು ಬಜೆಟ್ ಮಂಡಿಸುತ್ತಾರೆ. ಆದರೆ ಈ ಬಾರಿ ಜನಪ್ರತಿನಿಧಿಗಳ ಆಡಳಿತ ಇಲ್ಲದ ಕಾರಣ, ಆಡಳಿತಾಧಿಕಾರಿಯಾದ ಜಿಲ್ಲಾಧಿಕಾರಿಗಳೇ ಬಜೆಟ್ ಮಂಡಿಸಲಿದ್ದಾರೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search