• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

Tulunadu News Posted On April 14, 2026
0


0
Shares
  • Share On Facebook
  • Tweet It

ನಂತೂರು ಭೀಕರ ಅಪಘಾತ ; ಬೈಕ್‌ ಸವಾರನ ಧಾವಂತಕ್ಕೆ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಹಿರಿಯೆ ಛಾಯಾಗ್ರಾಹಕ ಸಾವು, ಮದುವೆ ಮನೆಯಲ್ಲಿ ಮರಣಮೃದಂಗ !

ಕಳೆದ ಶನಿವಾರ ರಾತ್ರಿ ರಾ.ಹೆ. 66ರ ನಂತೂರು ತಾರಾಯಿತೋಟ ಎಂಬಲ್ಲಿ ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟು ಸಾವನ್ನಪ್ಪಿದ್ದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಅಮಾಯಕ ಸ್ಕೂಟರ್ ಸವಾರ, ಹಿರಿಯ ಛಾಯಾಗ್ರಾಹಕ ಕೆ.ಮೋಹನ್ ಚಂದರ್ (64) ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಧರ್ಮಸ್ಥಳದ ಕಾರ್ಯತಡ್ಕ ನಿವಾಸಿ ಗೋಪಾಲಕೃಷ್ಣ(27) ಎಂಬ ಯುವಕ ಶನಿವಾರ ರಾತ್ರಿ ಸುಮಾರು 8.30 ಗಂಟೆ ವೇಳೆ ಗುರುಪುರದಿಂದ ಜಪ್ಪಿನಮೊಗರಿನ ತನ್ನ ಬಾಡಿಗೆ ರೂಮಿನ ಕಡೆಗೆ ಎಫ್ ಜೀ ಬೈಕನ್ನು ಅಪರಿಮಿತ ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ್ದು, ಓವ‌ರ್ ಟೇಕ್ ಮಾಡುವ ಭರದಲ್ಲಿ ತನ್ನ ಪಾಡಿಗೆ ಸಾಗುತ್ತಿದ್ದ ಮೋಹನ್ ಅವರ ಸ್ಕೂಟರ್ ಗೆ ಢಿಕ್ಕಿ ಹೊಡೆದು ಬಳಿಕ ನಿಯಂತ್ರಣ ತಪ್ಪಿ ಮೈನ್ಸ್ ಸಾಗಾಟದ ಟಿಪ್ಪರ್ಗೆ ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದ.

ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೋಹನ್ ಅವರನ್ನ ಟೆಂಪೋ ಚಾಲಕ ಗಂಗಾಧರ ಅಂಬ್ಲಮೊಗರು ಎಂಬವರು ಸಾರ್ವಜನಿಕರ ಸಹಕಾರದಿಂದ ಕಂಕನಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಎರಡು ದಿವಸಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ ಮೋಹನ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಕೊನೆಯುಸಿರು ಎಳೆದಿದ್ದಾರೆ.

ಶನಿವಾರ ರಾತ್ರಿ ನಡೆದಿದ್ದ ಈ ಭೀಕರ ಅಪಘಾತದ ದೃಶ್ಯವು ಗಂಗಾಧರ್ ಅಂಬ್ಲಮೊಗರು ಚಲಾಯಿಸುತ್ತಿದ್ದ ಗೂಡ್ಸ್‌ ಟೆಂಪೋವಿನ ಡ್ಯಾಷ್ ಬೋರ್ಡ್ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿತ್ತು.

ನಾಗುರಿ ನಿವಾಸಿಯಾಗಿರುವ ಮೋಹನ್ ಚಂದರ್ ಅವರು ನಗರದ ಹೊರವಲಯದ ಪದವಿನಂಗಡಿ ಎಂಬಲ್ಲಿ ನವ್ಯ ಸ್ಟುಡಿಯೋ ಹೊಂದಿದ್ದರು. ಮೋಹನ್ ಅವರ ಹಿರಿಯ ಮಗಳಿಗೆ ಇದೇ ಮೇ 10 ರಂದು ವಿವಾಹ ನಿಶ್ಚಯವಾಗಿದ್ದು ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿತ್ತು. ಇದೀಗ ಮೋಹನ್ ಅವರ ಅಕಾಲಿಕ ಅಗಲಿಕೆಯಿಂದ ಸಂಭ್ರಮ ಮನೆ ಮಾಡಿದ್ದ ಮನೆಯಲ್ಲಿ ಸೂತಕ ಆವರಿಸಿದೆ. ಮೋಹನ್ ಚಂದರ್ ಅವರು ದಕ್ಷಿಣ ಕನ್ನಡ- ಉಡುಪಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಅಜೀವ ಸದಸ್ಯರಾಗಿ ಸೇವೆ ಸಲ್ಲಿಸಿದ್ದಲ್ಲದೆ, ಅನೇಕ ಸಂಘ ಸಂಸ್ಥೆಗಳಲ್ಲೂ ಸಕ್ರಿಯರಾಗಿದ್ದರು. ಅವರ ಅಕಾಲಿಕ ಸಾವಿಗೆ ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಷನ್‌ ಸಂಘವು ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಮೃತ ಮೋಹನ್ ಅವರು ಪತ್ನಿ, ಇಬ್ಬರು ಪುತ್ರಿಯರನ್ನ ಅಗಲಿದ್ದಾರೆ. ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ವಿನಾಕಾರಣ ಜೀವ ತೆರಬೇಕಾಯಿತು. ದುಡುಕಿನ ಬೈಕ್ ಸವಾರಿಯಿಂದಾಗಿ ಎರಡು ಮನೆಯ ದೀಪ ಆರಿದಂತಾಗಿದೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search