• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ವಿಕೃತ ಕಾಮಿಯ ದಾಹಕ್ಕೆ ಬಲಿಯಾದ ಬಾಲಕ

TNN Correspondent Posted On September 9, 2017
0


0
Shares
  • Share On Facebook
  • Tweet It

ದೆಹಲಿ : ಅಂತಾರಾಷ್ಟ್ರೀಯ ಶಾಲೆಯೊಂದರ ಎರಡನೇ ತರಗತಿಯಲ್ಲಿ ಓದುತ್ತಿದ್ದ ಏಳು ವರ್ಷದ ಬಾಲಕ ಬೆಳಗ್ಗೆ ಶಾಲೆ ಬಂದ ಕೂಡಲೇ ಶೌಚಾಲಯಕ್ಕೆ ಮೂತ್ರ ವಿಸರ್ಜನೆಗೆ ತೆರಳುತ್ತಾನೆ. ಆದರೆ ಆತ ಜೀವಂತವಾಗಿ ಹಿಂದಿರುಗುವುದಿಲ್ಲ. ಅಬ್ಬಾ ಎಂಥ ಭಯಾನಕತೆ ಅಲ್ವಾ?

ಹೌದು ಈ ಘಟನೆ ನಡೆದಿದ್ದು ಶುಕ್ರವಾರ ಬೆಳಗ್ಗೆ ದೆಹಲಿ ಸಮೀಪದ ಗುರುಗ್ರಾಮದಲ್ಲಿ. ಆ ಏಳು ವರ್ಷದ ಬಾಲಕ ರ್ಯಾನ್ ಅಂತಾರಾಷ್ಟ್ರೀಯ ಶಾಲೆಯ ವಿದ್ಯಾರ್ಥಿ ಪ್ರದ್ಯುಮ್ನ ಠಾಕೂರ್.

ಸುಮಾರು ಎಂಟು ಗಂಟೆಗೆ ಪ್ರದ್ಯುಮ್ನನ ಸಹಪಾಠಿಯೊಬ್ಬ ಶೌಚಾಲಯಕ್ಕೆ ಹೋದಾಗ ಅಲ್ಲಿ ರಕ್ತಮಡುವಿನಲ್ಲಿ ಬಿದ್ದಿರುವ ಪ್ರದ್ಯುಮ್ನನನ್ನು ನೋಡಿ ಕಿರುಚಿಕೊಂಡು ಶಾಲೆಯ ಪ್ರಾಂಶುಪಾಲೆ ನೀರ್ಜಾ ಅವರಿಗೆ ತಿಳಿಸುತ್ತಾನೆ. ಶಾಲಾ ಸಿಬ್ಬಂದಿಯಲ್ಲಿ ಒಟ್ಟುಗೂಡಿ ಪೊಲೀಸರಿಗೆ ಫೋನಾಯಿಸುತ್ತಾರೆ. ಪ್ರದ್ಯುಮ್ನನನ್ನು ಆಸ್ಪತ್ರೆಗೂ ಕರೆದೊಯ್ಯುತ್ತಾರೆ. ಆದರೆ ಅಷ್ಟರಲ್ಲಾಗಲೇ ಬಾಲಕ ಸತ್ತು ಒಂಡು ಗಂಟೆಯಾಗಿರುತ್ತದೆ.

ಖಾಸಗಿ ಕಂಪೆನಿ ಉದ್ಯೋಗಿಯಾಗಿರುವ ಪ್ರದ್ಯುಮ್ನನ ತಂದೆಯ ಸಹದ್ಯೋಗಿಗಳು ಮತ್ತು ಸಂಬಂಧಿಗಳು ಆಸ್ಪತ್ರೆಗೆ ದೌಡಾಯಿಸಿ ವಿಷಯ ತಿಳಿದು ಆಕ್ರೋಶ ವ್ಯಕ್ತಪಡಿಸುತ್ತಾರೆ. ಘಟನೆ ನಡೆದ ರ್ಯಾನ್ ಅಂತಾರಾಷ್ಟ್ರೀಯ ಶಾಲೆ ಹಾಗೂ ಪೊಲೀಸ್ ಉಪನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಾರೆ. ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಗುರುಗ್ರಾಮದ ಪೊಲೀಸರು ಶೀಘ್ರವಾಗಿ ಹಂತಕರ ಸೆರೆಗೆ ಜಾಲ ಬೀಸುತ್ತಾರೆ. ಶುಕ್ರವಾರ ಸಂಜೆಯೊಳಗೆ ಅವರ ತನಿಖೆಯಲ್ಲಿ ಸೆರೆಬಿದ್ದವರು ಬಸ್ ಕಂಡಕ್ಟರ್, ಬಸ್ ಡ್ರೈವರ್ ಹಾಗೂ ಇವರಿಬ್ಬರೂ ಆಪ್ತನಾದ ಶಾಲಾ ಸಿಬ್ಬಂದಿ.

ಯಾರೂ ಇರದನ್ನು ನೋಡಿ ಲೈಂಗಿಕ ತೃಷೆಗೆ ಬಳಸಲು ಮುಂದಾದ
ಪೊಲೀಸರ ಕೈಚಳಕದಿಂದ ಸತ್ಯ ಹೊರಬೀಳುತ್ತದೆ. ಬಸ್ ಕಂಡಕ್ಟರ್ ಅಶೋಕ್ ಕುಮಾರ್ ಬಾಲಕನ ಕೊಲೆ ಮಾಡಿದ್ದಾಗಿ ಒಪ್ಪಿಕೊಳ್ಳುತ್ತಾನೆ. ಶೌಚಾಲಯಕ್ಕೆ ಹೋದಾಗ ಅಲ್ಲಿ ಪ್ರದ್ಯುಮ್ನನನ್ನು ನೋಡಿದೆ. ಯಾರೂ ಇರದೇ ಇರುವುದನ್ನು ಗಮನಿಸಿ ಲೈಂಗಿಕವಾಗಿ ಬಳಸಿಕೊಳ್ಳಲು ಆತನನ್ನು ಬಿಗಿಯಾಗಿ ತಬ್ಬಿ ಮುದ್ದಾಡಿದೆ. ಆದರೆ ಬಾಲಕ ಕಿರುಚಾಡ ತೊಡಗಿದ. ಹೆದರಿಕೆಯಿಂದ ನನ್ನ ಜೇಬಿನಲ್ಲಿದ್ದ ಚಾಕುವಿನಿಂದ ಆತನ ಕುತ್ತಿಗೆ ಸೀಳಿದೆ ಎಂದು ಅಶೋಕ್ ಕೃತ್ಯವನ್ನು ವಿವರಿಸಿದ್ದಾನೆ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search