• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ವಿಕೃತ ಕಾಮಿಯ ದಾಹಕ್ಕೆ ಬಲಿಯಾದ ಬಾಲಕ

TNN Correspondent Posted On September 9, 2017
0


0
Shares
  • Share On Facebook
  • Tweet It

ದೆಹಲಿ : ಅಂತಾರಾಷ್ಟ್ರೀಯ ಶಾಲೆಯೊಂದರ ಎರಡನೇ ತರಗತಿಯಲ್ಲಿ ಓದುತ್ತಿದ್ದ ಏಳು ವರ್ಷದ ಬಾಲಕ ಬೆಳಗ್ಗೆ ಶಾಲೆ ಬಂದ ಕೂಡಲೇ ಶೌಚಾಲಯಕ್ಕೆ ಮೂತ್ರ ವಿಸರ್ಜನೆಗೆ ತೆರಳುತ್ತಾನೆ. ಆದರೆ ಆತ ಜೀವಂತವಾಗಿ ಹಿಂದಿರುಗುವುದಿಲ್ಲ. ಅಬ್ಬಾ ಎಂಥ ಭಯಾನಕತೆ ಅಲ್ವಾ?

ಹೌದು ಈ ಘಟನೆ ನಡೆದಿದ್ದು ಶುಕ್ರವಾರ ಬೆಳಗ್ಗೆ ದೆಹಲಿ ಸಮೀಪದ ಗುರುಗ್ರಾಮದಲ್ಲಿ. ಆ ಏಳು ವರ್ಷದ ಬಾಲಕ ರ್ಯಾನ್ ಅಂತಾರಾಷ್ಟ್ರೀಯ ಶಾಲೆಯ ವಿದ್ಯಾರ್ಥಿ ಪ್ರದ್ಯುಮ್ನ ಠಾಕೂರ್.

ಸುಮಾರು ಎಂಟು ಗಂಟೆಗೆ ಪ್ರದ್ಯುಮ್ನನ ಸಹಪಾಠಿಯೊಬ್ಬ ಶೌಚಾಲಯಕ್ಕೆ ಹೋದಾಗ ಅಲ್ಲಿ ರಕ್ತಮಡುವಿನಲ್ಲಿ ಬಿದ್ದಿರುವ ಪ್ರದ್ಯುಮ್ನನನ್ನು ನೋಡಿ ಕಿರುಚಿಕೊಂಡು ಶಾಲೆಯ ಪ್ರಾಂಶುಪಾಲೆ ನೀರ್ಜಾ ಅವರಿಗೆ ತಿಳಿಸುತ್ತಾನೆ. ಶಾಲಾ ಸಿಬ್ಬಂದಿಯಲ್ಲಿ ಒಟ್ಟುಗೂಡಿ ಪೊಲೀಸರಿಗೆ ಫೋನಾಯಿಸುತ್ತಾರೆ. ಪ್ರದ್ಯುಮ್ನನನ್ನು ಆಸ್ಪತ್ರೆಗೂ ಕರೆದೊಯ್ಯುತ್ತಾರೆ. ಆದರೆ ಅಷ್ಟರಲ್ಲಾಗಲೇ ಬಾಲಕ ಸತ್ತು ಒಂಡು ಗಂಟೆಯಾಗಿರುತ್ತದೆ.

ಖಾಸಗಿ ಕಂಪೆನಿ ಉದ್ಯೋಗಿಯಾಗಿರುವ ಪ್ರದ್ಯುಮ್ನನ ತಂದೆಯ ಸಹದ್ಯೋಗಿಗಳು ಮತ್ತು ಸಂಬಂಧಿಗಳು ಆಸ್ಪತ್ರೆಗೆ ದೌಡಾಯಿಸಿ ವಿಷಯ ತಿಳಿದು ಆಕ್ರೋಶ ವ್ಯಕ್ತಪಡಿಸುತ್ತಾರೆ. ಘಟನೆ ನಡೆದ ರ್ಯಾನ್ ಅಂತಾರಾಷ್ಟ್ರೀಯ ಶಾಲೆ ಹಾಗೂ ಪೊಲೀಸ್ ಉಪನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಾರೆ. ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಗುರುಗ್ರಾಮದ ಪೊಲೀಸರು ಶೀಘ್ರವಾಗಿ ಹಂತಕರ ಸೆರೆಗೆ ಜಾಲ ಬೀಸುತ್ತಾರೆ. ಶುಕ್ರವಾರ ಸಂಜೆಯೊಳಗೆ ಅವರ ತನಿಖೆಯಲ್ಲಿ ಸೆರೆಬಿದ್ದವರು ಬಸ್ ಕಂಡಕ್ಟರ್, ಬಸ್ ಡ್ರೈವರ್ ಹಾಗೂ ಇವರಿಬ್ಬರೂ ಆಪ್ತನಾದ ಶಾಲಾ ಸಿಬ್ಬಂದಿ.

ಯಾರೂ ಇರದನ್ನು ನೋಡಿ ಲೈಂಗಿಕ ತೃಷೆಗೆ ಬಳಸಲು ಮುಂದಾದ
ಪೊಲೀಸರ ಕೈಚಳಕದಿಂದ ಸತ್ಯ ಹೊರಬೀಳುತ್ತದೆ. ಬಸ್ ಕಂಡಕ್ಟರ್ ಅಶೋಕ್ ಕುಮಾರ್ ಬಾಲಕನ ಕೊಲೆ ಮಾಡಿದ್ದಾಗಿ ಒಪ್ಪಿಕೊಳ್ಳುತ್ತಾನೆ. ಶೌಚಾಲಯಕ್ಕೆ ಹೋದಾಗ ಅಲ್ಲಿ ಪ್ರದ್ಯುಮ್ನನನ್ನು ನೋಡಿದೆ. ಯಾರೂ ಇರದೇ ಇರುವುದನ್ನು ಗಮನಿಸಿ ಲೈಂಗಿಕವಾಗಿ ಬಳಸಿಕೊಳ್ಳಲು ಆತನನ್ನು ಬಿಗಿಯಾಗಿ ತಬ್ಬಿ ಮುದ್ದಾಡಿದೆ. ಆದರೆ ಬಾಲಕ ಕಿರುಚಾಡ ತೊಡಗಿದ. ಹೆದರಿಕೆಯಿಂದ ನನ್ನ ಜೇಬಿನಲ್ಲಿದ್ದ ಚಾಕುವಿನಿಂದ ಆತನ ಕುತ್ತಿಗೆ ಸೀಳಿದೆ ಎಂದು ಅಶೋಕ್ ಕೃತ್ಯವನ್ನು ವಿವರಿಸಿದ್ದಾನೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search