• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ವಿಕೃತ ಕಾಮಿಯ ದಾಹಕ್ಕೆ ಬಲಿಯಾದ ಬಾಲಕ

TNN Correspondent Posted On September 9, 2017
0


0
Shares
  • Share On Facebook
  • Tweet It

ದೆಹಲಿ : ಅಂತಾರಾಷ್ಟ್ರೀಯ ಶಾಲೆಯೊಂದರ ಎರಡನೇ ತರಗತಿಯಲ್ಲಿ ಓದುತ್ತಿದ್ದ ಏಳು ವರ್ಷದ ಬಾಲಕ ಬೆಳಗ್ಗೆ ಶಾಲೆ ಬಂದ ಕೂಡಲೇ ಶೌಚಾಲಯಕ್ಕೆ ಮೂತ್ರ ವಿಸರ್ಜನೆಗೆ ತೆರಳುತ್ತಾನೆ. ಆದರೆ ಆತ ಜೀವಂತವಾಗಿ ಹಿಂದಿರುಗುವುದಿಲ್ಲ. ಅಬ್ಬಾ ಎಂಥ ಭಯಾನಕತೆ ಅಲ್ವಾ?

ಹೌದು ಈ ಘಟನೆ ನಡೆದಿದ್ದು ಶುಕ್ರವಾರ ಬೆಳಗ್ಗೆ ದೆಹಲಿ ಸಮೀಪದ ಗುರುಗ್ರಾಮದಲ್ಲಿ. ಆ ಏಳು ವರ್ಷದ ಬಾಲಕ ರ್ಯಾನ್ ಅಂತಾರಾಷ್ಟ್ರೀಯ ಶಾಲೆಯ ವಿದ್ಯಾರ್ಥಿ ಪ್ರದ್ಯುಮ್ನ ಠಾಕೂರ್.

ಸುಮಾರು ಎಂಟು ಗಂಟೆಗೆ ಪ್ರದ್ಯುಮ್ನನ ಸಹಪಾಠಿಯೊಬ್ಬ ಶೌಚಾಲಯಕ್ಕೆ ಹೋದಾಗ ಅಲ್ಲಿ ರಕ್ತಮಡುವಿನಲ್ಲಿ ಬಿದ್ದಿರುವ ಪ್ರದ್ಯುಮ್ನನನ್ನು ನೋಡಿ ಕಿರುಚಿಕೊಂಡು ಶಾಲೆಯ ಪ್ರಾಂಶುಪಾಲೆ ನೀರ್ಜಾ ಅವರಿಗೆ ತಿಳಿಸುತ್ತಾನೆ. ಶಾಲಾ ಸಿಬ್ಬಂದಿಯಲ್ಲಿ ಒಟ್ಟುಗೂಡಿ ಪೊಲೀಸರಿಗೆ ಫೋನಾಯಿಸುತ್ತಾರೆ. ಪ್ರದ್ಯುಮ್ನನನ್ನು ಆಸ್ಪತ್ರೆಗೂ ಕರೆದೊಯ್ಯುತ್ತಾರೆ. ಆದರೆ ಅಷ್ಟರಲ್ಲಾಗಲೇ ಬಾಲಕ ಸತ್ತು ಒಂಡು ಗಂಟೆಯಾಗಿರುತ್ತದೆ.

ಖಾಸಗಿ ಕಂಪೆನಿ ಉದ್ಯೋಗಿಯಾಗಿರುವ ಪ್ರದ್ಯುಮ್ನನ ತಂದೆಯ ಸಹದ್ಯೋಗಿಗಳು ಮತ್ತು ಸಂಬಂಧಿಗಳು ಆಸ್ಪತ್ರೆಗೆ ದೌಡಾಯಿಸಿ ವಿಷಯ ತಿಳಿದು ಆಕ್ರೋಶ ವ್ಯಕ್ತಪಡಿಸುತ್ತಾರೆ. ಘಟನೆ ನಡೆದ ರ್ಯಾನ್ ಅಂತಾರಾಷ್ಟ್ರೀಯ ಶಾಲೆ ಹಾಗೂ ಪೊಲೀಸ್ ಉಪನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಾರೆ. ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಗುರುಗ್ರಾಮದ ಪೊಲೀಸರು ಶೀಘ್ರವಾಗಿ ಹಂತಕರ ಸೆರೆಗೆ ಜಾಲ ಬೀಸುತ್ತಾರೆ. ಶುಕ್ರವಾರ ಸಂಜೆಯೊಳಗೆ ಅವರ ತನಿಖೆಯಲ್ಲಿ ಸೆರೆಬಿದ್ದವರು ಬಸ್ ಕಂಡಕ್ಟರ್, ಬಸ್ ಡ್ರೈವರ್ ಹಾಗೂ ಇವರಿಬ್ಬರೂ ಆಪ್ತನಾದ ಶಾಲಾ ಸಿಬ್ಬಂದಿ.

ಯಾರೂ ಇರದನ್ನು ನೋಡಿ ಲೈಂಗಿಕ ತೃಷೆಗೆ ಬಳಸಲು ಮುಂದಾದ
ಪೊಲೀಸರ ಕೈಚಳಕದಿಂದ ಸತ್ಯ ಹೊರಬೀಳುತ್ತದೆ. ಬಸ್ ಕಂಡಕ್ಟರ್ ಅಶೋಕ್ ಕುಮಾರ್ ಬಾಲಕನ ಕೊಲೆ ಮಾಡಿದ್ದಾಗಿ ಒಪ್ಪಿಕೊಳ್ಳುತ್ತಾನೆ. ಶೌಚಾಲಯಕ್ಕೆ ಹೋದಾಗ ಅಲ್ಲಿ ಪ್ರದ್ಯುಮ್ನನನ್ನು ನೋಡಿದೆ. ಯಾರೂ ಇರದೇ ಇರುವುದನ್ನು ಗಮನಿಸಿ ಲೈಂಗಿಕವಾಗಿ ಬಳಸಿಕೊಳ್ಳಲು ಆತನನ್ನು ಬಿಗಿಯಾಗಿ ತಬ್ಬಿ ಮುದ್ದಾಡಿದೆ. ಆದರೆ ಬಾಲಕ ಕಿರುಚಾಡ ತೊಡಗಿದ. ಹೆದರಿಕೆಯಿಂದ ನನ್ನ ಜೇಬಿನಲ್ಲಿದ್ದ ಚಾಕುವಿನಿಂದ ಆತನ ಕುತ್ತಿಗೆ ಸೀಳಿದೆ ಎಂದು ಅಶೋಕ್ ಕೃತ್ಯವನ್ನು ವಿವರಿಸಿದ್ದಾನೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search