• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ವಿಕೃತ ಕಾಮಿಯ ದಾಹಕ್ಕೆ ಬಲಿಯಾದ ಬಾಲಕ

TNN Correspondent Posted On September 9, 2017
0


0
Shares
  • Share On Facebook
  • Tweet It

ದೆಹಲಿ : ಅಂತಾರಾಷ್ಟ್ರೀಯ ಶಾಲೆಯೊಂದರ ಎರಡನೇ ತರಗತಿಯಲ್ಲಿ ಓದುತ್ತಿದ್ದ ಏಳು ವರ್ಷದ ಬಾಲಕ ಬೆಳಗ್ಗೆ ಶಾಲೆ ಬಂದ ಕೂಡಲೇ ಶೌಚಾಲಯಕ್ಕೆ ಮೂತ್ರ ವಿಸರ್ಜನೆಗೆ ತೆರಳುತ್ತಾನೆ. ಆದರೆ ಆತ ಜೀವಂತವಾಗಿ ಹಿಂದಿರುಗುವುದಿಲ್ಲ. ಅಬ್ಬಾ ಎಂಥ ಭಯಾನಕತೆ ಅಲ್ವಾ?

ಹೌದು ಈ ಘಟನೆ ನಡೆದಿದ್ದು ಶುಕ್ರವಾರ ಬೆಳಗ್ಗೆ ದೆಹಲಿ ಸಮೀಪದ ಗುರುಗ್ರಾಮದಲ್ಲಿ. ಆ ಏಳು ವರ್ಷದ ಬಾಲಕ ರ್ಯಾನ್ ಅಂತಾರಾಷ್ಟ್ರೀಯ ಶಾಲೆಯ ವಿದ್ಯಾರ್ಥಿ ಪ್ರದ್ಯುಮ್ನ ಠಾಕೂರ್.

ಸುಮಾರು ಎಂಟು ಗಂಟೆಗೆ ಪ್ರದ್ಯುಮ್ನನ ಸಹಪಾಠಿಯೊಬ್ಬ ಶೌಚಾಲಯಕ್ಕೆ ಹೋದಾಗ ಅಲ್ಲಿ ರಕ್ತಮಡುವಿನಲ್ಲಿ ಬಿದ್ದಿರುವ ಪ್ರದ್ಯುಮ್ನನನ್ನು ನೋಡಿ ಕಿರುಚಿಕೊಂಡು ಶಾಲೆಯ ಪ್ರಾಂಶುಪಾಲೆ ನೀರ್ಜಾ ಅವರಿಗೆ ತಿಳಿಸುತ್ತಾನೆ. ಶಾಲಾ ಸಿಬ್ಬಂದಿಯಲ್ಲಿ ಒಟ್ಟುಗೂಡಿ ಪೊಲೀಸರಿಗೆ ಫೋನಾಯಿಸುತ್ತಾರೆ. ಪ್ರದ್ಯುಮ್ನನನ್ನು ಆಸ್ಪತ್ರೆಗೂ ಕರೆದೊಯ್ಯುತ್ತಾರೆ. ಆದರೆ ಅಷ್ಟರಲ್ಲಾಗಲೇ ಬಾಲಕ ಸತ್ತು ಒಂಡು ಗಂಟೆಯಾಗಿರುತ್ತದೆ.

ಖಾಸಗಿ ಕಂಪೆನಿ ಉದ್ಯೋಗಿಯಾಗಿರುವ ಪ್ರದ್ಯುಮ್ನನ ತಂದೆಯ ಸಹದ್ಯೋಗಿಗಳು ಮತ್ತು ಸಂಬಂಧಿಗಳು ಆಸ್ಪತ್ರೆಗೆ ದೌಡಾಯಿಸಿ ವಿಷಯ ತಿಳಿದು ಆಕ್ರೋಶ ವ್ಯಕ್ತಪಡಿಸುತ್ತಾರೆ. ಘಟನೆ ನಡೆದ ರ್ಯಾನ್ ಅಂತಾರಾಷ್ಟ್ರೀಯ ಶಾಲೆ ಹಾಗೂ ಪೊಲೀಸ್ ಉಪನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಾರೆ. ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಗುರುಗ್ರಾಮದ ಪೊಲೀಸರು ಶೀಘ್ರವಾಗಿ ಹಂತಕರ ಸೆರೆಗೆ ಜಾಲ ಬೀಸುತ್ತಾರೆ. ಶುಕ್ರವಾರ ಸಂಜೆಯೊಳಗೆ ಅವರ ತನಿಖೆಯಲ್ಲಿ ಸೆರೆಬಿದ್ದವರು ಬಸ್ ಕಂಡಕ್ಟರ್, ಬಸ್ ಡ್ರೈವರ್ ಹಾಗೂ ಇವರಿಬ್ಬರೂ ಆಪ್ತನಾದ ಶಾಲಾ ಸಿಬ್ಬಂದಿ.

ಯಾರೂ ಇರದನ್ನು ನೋಡಿ ಲೈಂಗಿಕ ತೃಷೆಗೆ ಬಳಸಲು ಮುಂದಾದ
ಪೊಲೀಸರ ಕೈಚಳಕದಿಂದ ಸತ್ಯ ಹೊರಬೀಳುತ್ತದೆ. ಬಸ್ ಕಂಡಕ್ಟರ್ ಅಶೋಕ್ ಕುಮಾರ್ ಬಾಲಕನ ಕೊಲೆ ಮಾಡಿದ್ದಾಗಿ ಒಪ್ಪಿಕೊಳ್ಳುತ್ತಾನೆ. ಶೌಚಾಲಯಕ್ಕೆ ಹೋದಾಗ ಅಲ್ಲಿ ಪ್ರದ್ಯುಮ್ನನನ್ನು ನೋಡಿದೆ. ಯಾರೂ ಇರದೇ ಇರುವುದನ್ನು ಗಮನಿಸಿ ಲೈಂಗಿಕವಾಗಿ ಬಳಸಿಕೊಳ್ಳಲು ಆತನನ್ನು ಬಿಗಿಯಾಗಿ ತಬ್ಬಿ ಮುದ್ದಾಡಿದೆ. ಆದರೆ ಬಾಲಕ ಕಿರುಚಾಡ ತೊಡಗಿದ. ಹೆದರಿಕೆಯಿಂದ ನನ್ನ ಜೇಬಿನಲ್ಲಿದ್ದ ಚಾಕುವಿನಿಂದ ಆತನ ಕುತ್ತಿಗೆ ಸೀಳಿದೆ ಎಂದು ಅಶೋಕ್ ಕೃತ್ಯವನ್ನು ವಿವರಿಸಿದ್ದಾನೆ.

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search