• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ವಿಕೃತ ಕಾಮಿಯ ದಾಹಕ್ಕೆ ಬಲಿಯಾದ ಬಾಲಕ

TNN Correspondent Posted On September 9, 2017
0


0
Shares
  • Share On Facebook
  • Tweet It

ದೆಹಲಿ : ಅಂತಾರಾಷ್ಟ್ರೀಯ ಶಾಲೆಯೊಂದರ ಎರಡನೇ ತರಗತಿಯಲ್ಲಿ ಓದುತ್ತಿದ್ದ ಏಳು ವರ್ಷದ ಬಾಲಕ ಬೆಳಗ್ಗೆ ಶಾಲೆ ಬಂದ ಕೂಡಲೇ ಶೌಚಾಲಯಕ್ಕೆ ಮೂತ್ರ ವಿಸರ್ಜನೆಗೆ ತೆರಳುತ್ತಾನೆ. ಆದರೆ ಆತ ಜೀವಂತವಾಗಿ ಹಿಂದಿರುಗುವುದಿಲ್ಲ. ಅಬ್ಬಾ ಎಂಥ ಭಯಾನಕತೆ ಅಲ್ವಾ?

ಹೌದು ಈ ಘಟನೆ ನಡೆದಿದ್ದು ಶುಕ್ರವಾರ ಬೆಳಗ್ಗೆ ದೆಹಲಿ ಸಮೀಪದ ಗುರುಗ್ರಾಮದಲ್ಲಿ. ಆ ಏಳು ವರ್ಷದ ಬಾಲಕ ರ್ಯಾನ್ ಅಂತಾರಾಷ್ಟ್ರೀಯ ಶಾಲೆಯ ವಿದ್ಯಾರ್ಥಿ ಪ್ರದ್ಯುಮ್ನ ಠಾಕೂರ್.

ಸುಮಾರು ಎಂಟು ಗಂಟೆಗೆ ಪ್ರದ್ಯುಮ್ನನ ಸಹಪಾಠಿಯೊಬ್ಬ ಶೌಚಾಲಯಕ್ಕೆ ಹೋದಾಗ ಅಲ್ಲಿ ರಕ್ತಮಡುವಿನಲ್ಲಿ ಬಿದ್ದಿರುವ ಪ್ರದ್ಯುಮ್ನನನ್ನು ನೋಡಿ ಕಿರುಚಿಕೊಂಡು ಶಾಲೆಯ ಪ್ರಾಂಶುಪಾಲೆ ನೀರ್ಜಾ ಅವರಿಗೆ ತಿಳಿಸುತ್ತಾನೆ. ಶಾಲಾ ಸಿಬ್ಬಂದಿಯಲ್ಲಿ ಒಟ್ಟುಗೂಡಿ ಪೊಲೀಸರಿಗೆ ಫೋನಾಯಿಸುತ್ತಾರೆ. ಪ್ರದ್ಯುಮ್ನನನ್ನು ಆಸ್ಪತ್ರೆಗೂ ಕರೆದೊಯ್ಯುತ್ತಾರೆ. ಆದರೆ ಅಷ್ಟರಲ್ಲಾಗಲೇ ಬಾಲಕ ಸತ್ತು ಒಂಡು ಗಂಟೆಯಾಗಿರುತ್ತದೆ.

ಖಾಸಗಿ ಕಂಪೆನಿ ಉದ್ಯೋಗಿಯಾಗಿರುವ ಪ್ರದ್ಯುಮ್ನನ ತಂದೆಯ ಸಹದ್ಯೋಗಿಗಳು ಮತ್ತು ಸಂಬಂಧಿಗಳು ಆಸ್ಪತ್ರೆಗೆ ದೌಡಾಯಿಸಿ ವಿಷಯ ತಿಳಿದು ಆಕ್ರೋಶ ವ್ಯಕ್ತಪಡಿಸುತ್ತಾರೆ. ಘಟನೆ ನಡೆದ ರ್ಯಾನ್ ಅಂತಾರಾಷ್ಟ್ರೀಯ ಶಾಲೆ ಹಾಗೂ ಪೊಲೀಸ್ ಉಪನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಾರೆ. ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಗುರುಗ್ರಾಮದ ಪೊಲೀಸರು ಶೀಘ್ರವಾಗಿ ಹಂತಕರ ಸೆರೆಗೆ ಜಾಲ ಬೀಸುತ್ತಾರೆ. ಶುಕ್ರವಾರ ಸಂಜೆಯೊಳಗೆ ಅವರ ತನಿಖೆಯಲ್ಲಿ ಸೆರೆಬಿದ್ದವರು ಬಸ್ ಕಂಡಕ್ಟರ್, ಬಸ್ ಡ್ರೈವರ್ ಹಾಗೂ ಇವರಿಬ್ಬರೂ ಆಪ್ತನಾದ ಶಾಲಾ ಸಿಬ್ಬಂದಿ.

ಯಾರೂ ಇರದನ್ನು ನೋಡಿ ಲೈಂಗಿಕ ತೃಷೆಗೆ ಬಳಸಲು ಮುಂದಾದ
ಪೊಲೀಸರ ಕೈಚಳಕದಿಂದ ಸತ್ಯ ಹೊರಬೀಳುತ್ತದೆ. ಬಸ್ ಕಂಡಕ್ಟರ್ ಅಶೋಕ್ ಕುಮಾರ್ ಬಾಲಕನ ಕೊಲೆ ಮಾಡಿದ್ದಾಗಿ ಒಪ್ಪಿಕೊಳ್ಳುತ್ತಾನೆ. ಶೌಚಾಲಯಕ್ಕೆ ಹೋದಾಗ ಅಲ್ಲಿ ಪ್ರದ್ಯುಮ್ನನನ್ನು ನೋಡಿದೆ. ಯಾರೂ ಇರದೇ ಇರುವುದನ್ನು ಗಮನಿಸಿ ಲೈಂಗಿಕವಾಗಿ ಬಳಸಿಕೊಳ್ಳಲು ಆತನನ್ನು ಬಿಗಿಯಾಗಿ ತಬ್ಬಿ ಮುದ್ದಾಡಿದೆ. ಆದರೆ ಬಾಲಕ ಕಿರುಚಾಡ ತೊಡಗಿದ. ಹೆದರಿಕೆಯಿಂದ ನನ್ನ ಜೇಬಿನಲ್ಲಿದ್ದ ಚಾಕುವಿನಿಂದ ಆತನ ಕುತ್ತಿಗೆ ಸೀಳಿದೆ ಎಂದು ಅಶೋಕ್ ಕೃತ್ಯವನ್ನು ವಿವರಿಸಿದ್ದಾನೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search