• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪೊಲೀಸ್ ತನಿಖೆ ಕುರಿತು ಸುಳ್ಳು ವರದಿ: ವಾರ್ತಾಭಾರತಿ ವರದಿಗಾರನ ಬಂಧನ

TNN Correspondent Posted On September 9, 2017


  • Share On Facebook
  • Tweet It

 ಮಂಗಳೂರು: ಆರ್‌ಎಸ್‌ಎಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣದ ಪೊಲೀಸ್ ಕಾರ್ಯಾಚರಣೆ ಕುರಿತು ಸುಳ್ಳು ಮಾಹಿತಿ ಸೃಷ್ಟಿಸಿ ಪೊಲೀಸರ ವಿರುದ್ಧ ವರದಿ ಮಾಡಿದ್ದ ಆರೋಪದ ಮೇಲೆ ವಾರ್ತಾಭಾರತಿ ಪತ್ರಿಕೆ ಬಂಟ್ವಾಳದ ವರದಿಗಾರನನ್ನು ಪೊಲೀಸರು ಬಂಧಿಸಿದ್ದಾರೆ. ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ವರದಿಗಾರ ಇಮ್ತಿಯಾಜ್ ಬಂಧಿತ.

ಆರ್‌ಎಸ್‌ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಆರೋಪಿ ಮನೆಯಲ್ಲಿ ಪೊಲೀಸರು ವಿಚಾರಣೆ ನಡೆಸಿದ್ದರು. ಆದರೆ ಇದನ್ನೇ ಪೊಲೀಸ್ ದಾಳಿ ಎಂದು ಇಮ್ತಿಯಾಜ್ ವರದಿ ಮಾಡಿದ್ದು, ವರದಿಯಲ್ಲಿ ಪೊಲೀಸರು ತನಿಖೆ ವೇಳೆ ಕುರಾನ್ ಪ್ರತಿಗಳಿಗೆ ಹಾನಿ ಮಾಡಿದ್ದಾರೆ ಎಂದು ಸುಳ್ಳು ಸೃಷ್ಟಿಸಿ ವರದಿ ಮಾಡಲಾಗಿದೆ. ಅಲ್ಲದೇ ಸುಳ್ಳು ವರದಿ ಪ್ರಕಟಿಸಿ ತನಿಖೆಯನ್ನು ದಿಕ್ಕು ತಪ್ಪಿಸಲು ಪ್ರಯತ್ನಿಸಲಾಗಿದೆ ಎಂದು ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ ಮೂಲಗಳು ತಿಳಿಸಿವೆ.

ಆರ್‌ಎಸ್‌ಎಸ್ ಕಾರ್ಯಕರ್ತ ಶರತ್ ಮಡಿವಾಳ್ ಕೊಲೆ ಆರೋಪಿ ಖಲಂದರ್ ಮನೆಗೆ ಮೇಲೆ ಪೊಲೀಸರು ದಾಳಿ ಮಾಡಿ ತನಿಖೆ ನಡೆಸಿದ್ದರು. ಈ ವೇಳೆ ಕುರಾನ್ ಗೆ ಪೊಲೀಸರು ಹಾನಿ ಮಾಡಿದ್ದಾರೆ ಎಂದು ಸುಳ್ಳು ವರದಿ ಪ್ರಕಟಿಸಲಾಗಿದೆ. ಅಲ್ಲದೇ ಸುಳ್ಳು ವರದಿ ಮಾಡಿ ಪೊಲೀಸರ ವಿರುದ್ಧ ಮುಸ್ಲಿo ಸಮುದಾಯವನ್ನು ಎತ್ತಿಕಟ್ಟಲ್ಲು ಪ್ರಯತ್ನಿಸಲಾಗಿದೆ ಎಂಬ ಆರೋಪಗಳು ವಾರ್ತಾಭಾರತಿ ಪತ್ರಿಕೆ ವರದಿಗಾರನ ವಿರುದ್ಧ ಕೇಳಿ ಬಂದಿವೆ.

ಇನ್ನು ಕುರಾನ್ ಪ್ರತಿಗಳನ್ನು ಹರಿದ ರೀತಿಯಲ್ಲಿ ಪೊಲೀಸ್ ಕಾರ್ಯಾಚರಣೆಯಲ್ಲಿ ಕುರಾನ್ ಹಾನಿ ಮಾಡಲಾಗಿದೆ ಎಂಬಂತೆ ಬಿಂಬಿಸಿದ ವೀಡಿಯೋ ವೈರಲ್ ಆಗಿತ್ತು. ಆದ್ದರಿಂದ ವಿಡಿಯೋ ಸೃಷ್ಟಿ ಹಿಂದೆಯೂ ವರದಿಗಾರನ ಕೈವಾಡದ ಆರೋಪವೂ ಇದೆ. ವರದಿಗಾರ ಇಮ್ತಿಯಾಜ್ ಮೇಲೆ 153ಅ, 505(2) ಐಪಿಸಿ ಸೆಕ್ಷನ್‌ನಲ್ಲಿ ಪ್ರಕರಣ ದಾಖಲಿಸಲಾಗಿದೆ.

ವರದಿಗಾರನದ್ದೇ ತಪ್ಪು ಎಂದ ಖಾದರ್
ವರದಿಗಾರ ಇಮ್ತಿಯಾಜ್ ಬಂಧನ ಕುರಿತು ಸಚಿವ ಯು.ಟಿ.ಖಾದರ್ ಅವರಿಗೆ ಪ್ರಶ್ನಿಸಿದಾಗ ‘ವರದಿಗಾರ ಇಮ್ತಿಯಾಜ್‌ನದ್ದೇ ತಪ್ಪು ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಹೇಳಿದ್ದಾರೆ. ಸಚಿವರ ಹೇಳಿಕೆಯೂ ಪೊಲೀಸರು ಯಾವುದೇ ತಪ್ಪು ಮಾಡಿಲ್ಲ. ವಿಚಾರಣೆ ವೇಳೆ ವಿನಾಕಾರಣ ಸುಳ್ಳು ಸೃಷ್ಟಿಸಿ, ವರದಿ ಮಾಡಲಾಗಿದೆ ಎಂಬ ಆರೋಪಕ್ಕೆ ಪುಷ್ಟಿ ನೀಡಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search