• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಾಶ್ಮೀರ ಸಮಸ್ಯೆೆಗೆ ಮಾತುಕತೆಯೇ ಪರಿಹಾರ, ಕೊನೆಗೂ ಬುದ್ಧಿ ಕಲಿತ ಪಾಕಿಸ್ತಾನ

TNN Correspondent Posted On September 9, 2017
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಜಮ್ಮು-ಕಾಶ್ಮೀರದಲ್ಲಿ ಉಪಟಳ ಆರಂಭಿಸಿಯೋ, ಉಗ್ರರನ್ನು ಛೂ ಬಿಟ್ಟು ನರಿ ಬುದ್ಧಿಯನ್ನೋ ಇಲ್ಲವೇ ಯಾವುದೋ ಉದ್ಧಟತನದ ಹೇಳಿಕೆ ನೀಡುತ್ತಿದ್ದ ಪಾಕಿಸ್ತಾನ, ಕಾಶ್ಮೀರದಲ್ಲಿ ಉಗ್ರರ ಬೇಟೆ ಹಿನ್ನೆೆಲೆಯಲ್ಲಿ ಮೆತ್ತಗಾದಂತೆ ಕಂಡು ಬಂದಿದ್ದು, ‘ಸಮಸ್ಯೆೆ ನಿವಾರಣೆಗೆ ಮಾತುಕತೆಯೇ ಸೂಕ್ತ’ ಎಂದಿದೆ.
ಜಮ್ಮು ಕಾಶ್ಮೀರ ವಿವಾದವನ್ನು ರಾಜತಾಂತ್ರಿಕ ಮತ್ತು ರಾಜಕೀಯ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಪಾಕ್ ಸೇನೆ ವಕ್ತಾರ ಜನರಲ್ ಖಮರ್ ಜಾವೇದ್ ಬಜ್ವಾ ಹೇಳಿದ್ದಾಾರೆ.

ವಾರ್ಷಿಕ ರಕ್ಷಣಾ ದಿನದ ಭಾಷಣದಲ್ಲಿ, ಉಭಯ ದೇಶಗಳ ಜನರು ನೆಮ್ಮದಿಯಿಂದ ಬದುಕಲು ಭಾರತ ಪಾಕಿಸ್ತಾನ ಕಾಯಂ ಶಾಂತಿಸ್ಥಾಪನೆಗೆ ಮುಂದಾಗಬೇಕು. ಭಾರತ ಸಹ ಪಾಕಿಸ್ತಾನದತ್ತ ಬೆರಳು ಮಾಡುವುದು ಬಿಟ್ಟು ರಾಜತಾಂತ್ರಿಕ ನಿಯಮ ಅನುಸರಿಸಿ ವಿವಾದ ಬಗೆಹರಿಸಿಕೊಳ್ಳಲು ಮನಸ್ಸು ಮಾಡಬೇಕು ಎಂದು ಹೇಳಿದ್ದಾರೆ.

ಲಷ್ಕರೆ ತಯ್ಯಬಾ ಮತ್ತು ಜೈಷೆ ಮೊಹಮ್ಮದ್ ಉಗ್ರ ಸಂಘಟನೆ ಪಾಕಿಸ್ತಾನದಲ್ಲೇ ಆಶ್ರಯ ಪಡೆದಿವೆ ಎಂದು ವಿದೇಶಾಂಗ ಸಚಿವ ಖ್ವಾಜಾ ಮುಹಮ್ಮದ್ ಆಸೀಫ್ ಬಹಿರಂಗವಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ಸೇನಾ ಮುಖ್ಯಸ್ಥರೇ ಮಾತುಕತೆ ಕುರಿತು ಉಲ್ಲೇಖಿಸಿದ್ದು ಪಾಕಿಸ್ತಾನದ ಸಡಿಲ ನಿಲುವಿಗೆ ನಿದರ್ಶನವಾಗಿದೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಅಸ್ತಿತ್ವಕ್ಕೆೆ ಬಂದಮೇಲೆ ಜಮ್ಮು-ಕಾಶ್ಮೀರದಲ್ಲಿ ಪಾಕ್ ಉಗ್ರರ ಬೆನ್ನೆೆಲುಬು ಮುರಿಯಲಾಗಿರುವುದು ಪಾಕಿಸ್ತಾನದ ಈ ಸಡಿಲ ನಿಲುವಿಗೆ ಕಾರಣ ಎಂದು ವಿಶ್ಲೇಷಿಸಲಾಗಿದೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search