• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಶ್ಮೀರ ಸಮಸ್ಯೆೆಗೆ ಮಾತುಕತೆಯೇ ಪರಿಹಾರ, ಕೊನೆಗೂ ಬುದ್ಧಿ ಕಲಿತ ಪಾಕಿಸ್ತಾನ

TNN Correspondent Posted On September 9, 2017


  • Share On Facebook
  • Tweet It

ಇಸ್ಲಾಮಾಬಾದ್: ಜಮ್ಮು-ಕಾಶ್ಮೀರದಲ್ಲಿ ಉಪಟಳ ಆರಂಭಿಸಿಯೋ, ಉಗ್ರರನ್ನು ಛೂ ಬಿಟ್ಟು ನರಿ ಬುದ್ಧಿಯನ್ನೋ ಇಲ್ಲವೇ ಯಾವುದೋ ಉದ್ಧಟತನದ ಹೇಳಿಕೆ ನೀಡುತ್ತಿದ್ದ ಪಾಕಿಸ್ತಾನ, ಕಾಶ್ಮೀರದಲ್ಲಿ ಉಗ್ರರ ಬೇಟೆ ಹಿನ್ನೆೆಲೆಯಲ್ಲಿ ಮೆತ್ತಗಾದಂತೆ ಕಂಡು ಬಂದಿದ್ದು, ‘ಸಮಸ್ಯೆೆ ನಿವಾರಣೆಗೆ ಮಾತುಕತೆಯೇ ಸೂಕ್ತ’ ಎಂದಿದೆ.
ಜಮ್ಮು ಕಾಶ್ಮೀರ ವಿವಾದವನ್ನು ರಾಜತಾಂತ್ರಿಕ ಮತ್ತು ರಾಜಕೀಯ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಪಾಕ್ ಸೇನೆ ವಕ್ತಾರ ಜನರಲ್ ಖಮರ್ ಜಾವೇದ್ ಬಜ್ವಾ ಹೇಳಿದ್ದಾಾರೆ.

ವಾರ್ಷಿಕ ರಕ್ಷಣಾ ದಿನದ ಭಾಷಣದಲ್ಲಿ, ಉಭಯ ದೇಶಗಳ ಜನರು ನೆಮ್ಮದಿಯಿಂದ ಬದುಕಲು ಭಾರತ ಪಾಕಿಸ್ತಾನ ಕಾಯಂ ಶಾಂತಿಸ್ಥಾಪನೆಗೆ ಮುಂದಾಗಬೇಕು. ಭಾರತ ಸಹ ಪಾಕಿಸ್ತಾನದತ್ತ ಬೆರಳು ಮಾಡುವುದು ಬಿಟ್ಟು ರಾಜತಾಂತ್ರಿಕ ನಿಯಮ ಅನುಸರಿಸಿ ವಿವಾದ ಬಗೆಹರಿಸಿಕೊಳ್ಳಲು ಮನಸ್ಸು ಮಾಡಬೇಕು ಎಂದು ಹೇಳಿದ್ದಾರೆ.

ಲಷ್ಕರೆ ತಯ್ಯಬಾ ಮತ್ತು ಜೈಷೆ ಮೊಹಮ್ಮದ್ ಉಗ್ರ ಸಂಘಟನೆ ಪಾಕಿಸ್ತಾನದಲ್ಲೇ ಆಶ್ರಯ ಪಡೆದಿವೆ ಎಂದು ವಿದೇಶಾಂಗ ಸಚಿವ ಖ್ವಾಜಾ ಮುಹಮ್ಮದ್ ಆಸೀಫ್ ಬಹಿರಂಗವಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ಸೇನಾ ಮುಖ್ಯಸ್ಥರೇ ಮಾತುಕತೆ ಕುರಿತು ಉಲ್ಲೇಖಿಸಿದ್ದು ಪಾಕಿಸ್ತಾನದ ಸಡಿಲ ನಿಲುವಿಗೆ ನಿದರ್ಶನವಾಗಿದೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಅಸ್ತಿತ್ವಕ್ಕೆೆ ಬಂದಮೇಲೆ ಜಮ್ಮು-ಕಾಶ್ಮೀರದಲ್ಲಿ ಪಾಕ್ ಉಗ್ರರ ಬೆನ್ನೆೆಲುಬು ಮುರಿಯಲಾಗಿರುವುದು ಪಾಕಿಸ್ತಾನದ ಈ ಸಡಿಲ ನಿಲುವಿಗೆ ಕಾರಣ ಎಂದು ವಿಶ್ಲೇಷಿಸಲಾಗಿದೆ.

  • Share On Facebook
  • Tweet It


- Advertisement -


Trending Now
ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
Tulunadu News July 5, 2022
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
Leave A Reply

  • Recent Posts

    • ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
  • Popular Posts

    • 1
      ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • 2
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 3
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 4
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 5
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search