• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಾಶ್ಮೀರ ಸಮಸ್ಯೆೆಗೆ ಮಾತುಕತೆಯೇ ಪರಿಹಾರ, ಕೊನೆಗೂ ಬುದ್ಧಿ ಕಲಿತ ಪಾಕಿಸ್ತಾನ

TNN Correspondent Posted On September 9, 2017
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಜಮ್ಮು-ಕಾಶ್ಮೀರದಲ್ಲಿ ಉಪಟಳ ಆರಂಭಿಸಿಯೋ, ಉಗ್ರರನ್ನು ಛೂ ಬಿಟ್ಟು ನರಿ ಬುದ್ಧಿಯನ್ನೋ ಇಲ್ಲವೇ ಯಾವುದೋ ಉದ್ಧಟತನದ ಹೇಳಿಕೆ ನೀಡುತ್ತಿದ್ದ ಪಾಕಿಸ್ತಾನ, ಕಾಶ್ಮೀರದಲ್ಲಿ ಉಗ್ರರ ಬೇಟೆ ಹಿನ್ನೆೆಲೆಯಲ್ಲಿ ಮೆತ್ತಗಾದಂತೆ ಕಂಡು ಬಂದಿದ್ದು, ‘ಸಮಸ್ಯೆೆ ನಿವಾರಣೆಗೆ ಮಾತುಕತೆಯೇ ಸೂಕ್ತ’ ಎಂದಿದೆ.
ಜಮ್ಮು ಕಾಶ್ಮೀರ ವಿವಾದವನ್ನು ರಾಜತಾಂತ್ರಿಕ ಮತ್ತು ರಾಜಕೀಯ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಪಾಕ್ ಸೇನೆ ವಕ್ತಾರ ಜನರಲ್ ಖಮರ್ ಜಾವೇದ್ ಬಜ್ವಾ ಹೇಳಿದ್ದಾಾರೆ.

ವಾರ್ಷಿಕ ರಕ್ಷಣಾ ದಿನದ ಭಾಷಣದಲ್ಲಿ, ಉಭಯ ದೇಶಗಳ ಜನರು ನೆಮ್ಮದಿಯಿಂದ ಬದುಕಲು ಭಾರತ ಪಾಕಿಸ್ತಾನ ಕಾಯಂ ಶಾಂತಿಸ್ಥಾಪನೆಗೆ ಮುಂದಾಗಬೇಕು. ಭಾರತ ಸಹ ಪಾಕಿಸ್ತಾನದತ್ತ ಬೆರಳು ಮಾಡುವುದು ಬಿಟ್ಟು ರಾಜತಾಂತ್ರಿಕ ನಿಯಮ ಅನುಸರಿಸಿ ವಿವಾದ ಬಗೆಹರಿಸಿಕೊಳ್ಳಲು ಮನಸ್ಸು ಮಾಡಬೇಕು ಎಂದು ಹೇಳಿದ್ದಾರೆ.

ಲಷ್ಕರೆ ತಯ್ಯಬಾ ಮತ್ತು ಜೈಷೆ ಮೊಹಮ್ಮದ್ ಉಗ್ರ ಸಂಘಟನೆ ಪಾಕಿಸ್ತಾನದಲ್ಲೇ ಆಶ್ರಯ ಪಡೆದಿವೆ ಎಂದು ವಿದೇಶಾಂಗ ಸಚಿವ ಖ್ವಾಜಾ ಮುಹಮ್ಮದ್ ಆಸೀಫ್ ಬಹಿರಂಗವಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ಸೇನಾ ಮುಖ್ಯಸ್ಥರೇ ಮಾತುಕತೆ ಕುರಿತು ಉಲ್ಲೇಖಿಸಿದ್ದು ಪಾಕಿಸ್ತಾನದ ಸಡಿಲ ನಿಲುವಿಗೆ ನಿದರ್ಶನವಾಗಿದೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಅಸ್ತಿತ್ವಕ್ಕೆೆ ಬಂದಮೇಲೆ ಜಮ್ಮು-ಕಾಶ್ಮೀರದಲ್ಲಿ ಪಾಕ್ ಉಗ್ರರ ಬೆನ್ನೆೆಲುಬು ಮುರಿಯಲಾಗಿರುವುದು ಪಾಕಿಸ್ತಾನದ ಈ ಸಡಿಲ ನಿಲುವಿಗೆ ಕಾರಣ ಎಂದು ವಿಶ್ಲೇಷಿಸಲಾಗಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search