• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ಮಮತಾ ಬ್ಯಾನರ್ಜಿ ನೆನಪಿರಲಿ, ವಿವೇಕಾನಂದರು ಮಾಡಿದ್ದು ರಾಜಕೀಯ ಭಾಷಣವಲ್ಲ

TNN Correspondent Posted On September 10, 2017
0


0
Shares
  • Share On Facebook
  • Tweet It

‘ಸಿಸ್ಟರ್ಸ್‌ ಆ್ಯಂಡ್ ಬ್ರದರ್ಸ್‌ ಆಫ್ ಅಮೆರಿಕ’

ಸೆ.11, 1983ರಲ್ಲಿ ಅಮೆರಿಕದ ಷಿಕಾಗೋದಲ್ಲಿ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ವಿವೇಕಾನಂದರು ಭಾಷಣ ಆರಂಭಿಸುತ್ತಲೇ ಆಡಿದ ಈ ಒಂದು ಮಾತು ಮಿಸ್ಟರ್, ಮಿಸ್ಟ್ರೆಸ್ ಎನ್ನುವುದೇ ಗೌರವ ಎಂದು ತಿಳಿದಿದ್ದ ಅಮೆರಿಕ ಮಾತ್ರವಲ್ಲ, ಇಡೀ ಜಗತ್ತೇ ಮಂತ್ರಮುಗ್ಧವಾಗುವಂತೆ, ಇದಪ್ಪ ಸಂಸ್ಕಾರ ಎಂದು ಮಾತನಾಡುವಂತೆ ಮಾಡಿತ್ತು! ಅಷ್ಟೇ ಅಲ್ಲ, ಅಂದು ವಿವೇಕಾನಂದರ ಪ್ರತಿ ಮಾತೂ, ಪ್ರತಿ ಪದ ದೇಶದ ತೂಕವನ್ನು ಹೆಚ್ಚಿಸಿತ್ತು.

ಇಂಥ ವಿವೇಕಾನಂದರ ಭಾಷಣಕ್ಕೆ ಸೆ.11ಕ್ಕೆ 125 ವರ್ಷ ತುಂಬುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ದೇಶದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ವಿಚಾರ ಸಂಕಿರಣ ಏರ್ಪಡಿಸಿದೆ. ನರೇಂದ್ರ ಮೋದಿ ಅವರೇ ದೇಶವನ್ನುದ್ದೇಶಿಸಿ ಈ ಕುರಿತು ಮಾತನಾಡಲಿದ್ದಾರೆ. ಹೇಳಿ, ದೇಶದ ಘನತೆ ಹೆಚ್ಚಿಸಿದ ಸಿಡಿಲ ಸನ್ಯಾಸಿ ವಿವೇಕಾನಂದರ ಭಾಷಣದ 125ನೇ ವಾರ್ಷಿಕೋತ್ಸವದ ನಿಮಿತ್ತ ಇಂಥ ಕಾರ್ಯಕ್ರಮ ಆಯೋಜಿಸುವುದರಲ್ಲಿ ತಪ್ಪೇನಿದೆ?

ಆದರೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ, ಇದೇ ದೊಡ್ಡ ತಪ್ಪಾಗಿ ಕಾಣಿಸುತ್ತಿದೆ…
ವಿಚಾರ ಸಂಕಿರಣವನ್ನು ವಿರೋಧಿಸಿರುವ ಮಮತಾ ಬ್ಯಾನರ್ಜಿ ಸಂಕಿರಣ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ ಪ್ರಸಾರವಾಗಲು ಬಿಡುವುದಿಲ್ಲ ಎಂದು ಹೇಳಿಕೆ ನೀಡಿದ್ದಾಾರೆ?
ಇದು ‘ವಿವೇಕ’ ಇರುವ ರಾಜಕಾರಣಿ ಆಡುವ ಮಾತೇ? ಕೇಂದ್ರ ಸರಕಾರದ ನಿರ್ಣಯ ವಿರೋಧಿಸಬೇಕು ಎಂದು ಮಮತಾ ಈ ಮಟ್ಟಕ್ಕೂ ಇಳಿಯಬಲ್ಲರಾ? ಅಷ್ಟಕ್ಕೂ, ವಿವೇಕಾನಂದರೇನು ಅಬು ಸಲೇಂ, ಅಫ್ಜಲ್ ಗುರುನಾ? ಷಿಕಾಗೋದಲ್ಲಿ ಮಾಡಿದ್ದು ರಾಜಕೀಯ ಭಾಷಣವಾ? ಏನಾಗಿದೆ ಇವರ ಮಿದುಳಿಗೆ?
ಇಷ್ಟು ಬೊಗಳೆ ಬಿಡುವ ಮಮತಾ ಬ್ಯಾನರ್ಜಿ ಮಾತ್ರ ಬಾಂಗ್ಲಾದೇಶಿಯರಿಗೆ ವೋಟರ್ ಐಡಿ ಕೊಟ್ಟು ಮಕ್ಕಳಂತೆ ಬಂಗಾಳದಲ್ಲಿ ಸಾಕುತ್ತಿದ್ದಾರೆ. ಹಿಂದೂಗಳನ್ನು ಮಲಮಕ್ಕಳಂತೆ ಕಾಣುವುದಲ್ಲದೇ, ಅವರ ವಿರುದ್ಧ ಎತ್ತಿಕಟ್ಟುತ್ತಾರೆ. ಹಿಂದೂಗಳ ಹಬ್ಬಗಳಿಗೆ ನಿಷೇಧ ಹೇರುತ್ತಾರೆ. ಆದರೆ ವಿಶ್ವವೇ ಮೆಚ್ಚಿದ ವಿವೇಕಾನಂದರ ಕುರಿತ ವಿಚಾರ ಸಂಕಿರಣಕ್ಕೆ ವಿರೋಧ ವ್ಯಕ್ತಪಡಿಸುತ್ತಾರೆ. ವಿಚಾರ, ವಿವೇಕ ಇರುವವರು ಹೀಗೆ ಮಾಡುವುದಿಲ್ಲ ಮಮತಾ. ಕಮ್ಯುನಿಸ್ಟರ ವಿರುದ್ಧ ಹೋರಾಡಿ, ಈಗ ಕಮ್ಯುನಿಷ್ಟರಂತೆಯೇ ವರ್ತಿಸುತ್ತಿರುವ ಮಮತಾರ ‘ಕಮ್ಮಿನಿಷ್ಠೆೆ ಗೊತ್ತು ಬಿಡಿ.

-ಅಶ್ವಿನ್ ಉಬ್ಬಜ್ಜಿಪಲ್

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search