• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬೆಳಗಾವಿಯಲ್ಲಿ ಆದ್ದೂರಿಯಾಗಿ ಪ್ರಾರಂಭವಾದ ಶೋಭಾಯಾತ್ರೆ

TNN Correspondent Posted On September 10, 2017


  • Share On Facebook
  • Tweet It

Special Coverage from Belgavi:

ಕರ್ನಾಟಕದ ದಕ್ಷಿಣದ ಹೆಬ್ಬಾಗಿಲು ಮಂಗಳೂರಿನಿಂದ ಪ್ರಾರಂಭವಾದ ಯುವ ಬ್ರಿಗೇಡ್ ಸಮರ್ಪಿಸುವ ಸ್ವಾಮಿ ವಿವೇಕಾನಂದ ಅಕ್ಕ ನಿವೇದಿತಾ ಸಾಹಿತ್ಯ ಸಮ್ಮೇಳನ ರಾಜ್ಯದ ಮುಕುಟ ಬೆಳಗಾವಿಯಲ್ಲಿ ತನ್ನ ಸಮಾರೋಪ ಸಮಾರಂಭವನ್ನು ಕಾಣಲು ಕ್ಷಣಗಣನೆ ಆರಂಭವಾಗಿದೆ. ಬೆಳಿಗ್ಗೆ 9 ಗಂಟೆಗೆ ಬೆಳಗಾವಿಯಲ್ಲಿರುವ ಶ್ರೀ ರಾಮಕೃಷ್ಣಾಶ್ರಮದ ಉಪಕೇಂದ್ರದಿಂದ ಹೊರಟ ಅದ್ದೂರಿ ಶೋಭಾಯಾತ್ರೆಯ ಉದ್ಘಾಟನೆಯನ್ನು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೋ|ಕರಿಸಿದ್ದಪ್ಪ ನೆರವೇರಿಸಿದರು. ಅವರೊಂದಿಗೆ EX-ರಾಜ್ಯಸಭಾ ಸದಸ್ಯರೂ, ಸಮ್ಮೇಳನಾಧ್ಯಕ್ಷರೂ ಆಗಿರುವ ತರುಣ್ ವಿಜಯ್ ಹಾಗೂ ಶ್ರೀರಾಮಕೃಷ್ಣ ಆಶ್ರಮದ ಅನೇಕ ಸಂತರು ಭಾಗವಹಿಸಿದರು. ಯುವ ಬ್ರಿಗೇಡಿನ ಮಾರ್ಗದಶ್ಯಕ ಮತ್ತು ಪ್ರೇರಣಾ ಶಕ್ತಿಯಾಗಿರುವ ಚಕ್ರವರ್ತಿ ಸೂಲಿಬೆಲೆಯವರು ಮೆರವಣಿಗೆಯ ಉದ್ದಕ್ಕೂ ಯುವಕರಿಗೆ ಮಾರ್ಗದಶ್ಯನ ನೀಡುತ್ತಿದ್ದರು.
ಶೋಭಾಯಾತ್ರೆಯಲ್ಲಿ ಅಶ್ವಗಳೊಂದಿಗೆ ರಥದಲ್ಲಿ ವಿರಾಜಮಾನವಾಗಿರುವ ವಿವೇಕಾನಂದರ ಮೂರ್ತಿಯನ್ನು ಹೂಗಳಿಂದ ಸಿಂಗರಿಸಲಾಗಿತ್ತು. ಇನ್ನು ಪಲ್ಲಕ್ಕಿಯಲ್ಲಿ ವಿವೇಕಾನಂದ ಹಾಗೂ ನಿವೇದಿತಾ ಅವರ ಪುಸ್ತಕಗಳನ್ನು ಇಟ್ಟು ಅದನ್ನು ಯುವ ಬ್ರಿಗೇಡ್ ಕಾರ್ಯಕತ್ಥರು ಹೊತ್ತು ಸಾಗಿದರು. ಅದರೊಂದಿಗೆ ಉತ್ತರ ಕರ್ನಾಟಕದ ವೀರಗಾಸೆ, ಡೊಳ್ಳು ಕುಣಿತ ಸಹಿತ ಜಾನಪದ ಪ್ರದರ್ಶನ ಕೂಡ ನಡೆಯಿತು. ದಾರಿಯುದ್ದಕ್ಕೂ ಜನರು ವಿವೇಕಾನಂದರ ಮೂರ್ತಿಗೆ ಹೂವಿನ ಎಸಳುಗಳನ್ನು ಎಸೆಯುವ ಮೂಲಕ ಭಕ್ತಿ ಪೂರ್ವಕ ನಮನಗಳನ್ನು ಸಲ್ಲಿಸಿದರು.
ಬಹಳ ಅಚ್ಚುಕಟ್ಟಾಗಿ ನಡೆದ ಸಂಪೂರ್ಣ ಕಾರ್ಯಕ್ರಮದಲ್ಲಿ ಯುವ ಬ್ರಿಗೇಡಿನ ನೂರಾರು ಕಾರ್ಯಕತ್ಥರು ಶ್ವೇತ ವಸ್ತ್ರಧಾರಿಗಳಾಗಿ ಭಾಗವಹಿಸಿ ಶೋಭಾಯಾತ್ರೆಯ ಘನತೆಯನ್ನು ಮುಗಿಲೆತ್ತರಕ್ಕೆ ಏರಿಸಿದರು.

  • Share On Facebook
  • Tweet It


- Advertisement -
Vivekanadayuva brigade


Trending Now
ದಿನೇಶ್ ಗುಂಡುರಾವ್ ದಕ್ಷಿಣ ಕನ್ನಡ, ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿ!
Tulunadu News June 9, 2023
ಸತ್ಯನಾರಾಯಣ ಆಲಿಯಾಸ್ ಸ್ಯಾಮ್ ಏನಿದು ಅವಸ್ಥೆ!
Tulunadu News June 9, 2023
You may also like
ಸಾಮಾಜಿಕ ತಾಣಗಳ ಪತ್ರಕರ್ತರು ಮುಖ್ಯವಾಹಿನಿ ಪತ್ರಕರ್ತರ ಮುಖಕ್ಕೆ ಸತ್ಯ ತೋರಿಸಬೇಕು- ಬಗ್ಗಾ
September 10, 2017
Leave A Reply

  • Recent Posts

    • ದಿನೇಶ್ ಗುಂಡುರಾವ್ ದಕ್ಷಿಣ ಕನ್ನಡ, ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿ!
    • ಸತ್ಯನಾರಾಯಣ ಆಲಿಯಾಸ್ ಸ್ಯಾಮ್ ಏನಿದು ಅವಸ್ಥೆ!
    • ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
    • ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
    • ಇಂಟರ್ ಲಾಕಿಂಗ್ ಕೇಂದ್ರ ಸ್ಥಾನ ಪಶ್ಚಿಮ ಬಂಗಾಲದಲ್ಲಿ!
    • ಹೆಣ್ಣು ಕಾಮದ ಸರಕಲ್ಲ!
    • ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!
    • ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
  • Popular Posts

    • 1
      ದಿನೇಶ್ ಗುಂಡುರಾವ್ ದಕ್ಷಿಣ ಕನ್ನಡ, ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿ!
    • 2
      ಸತ್ಯನಾರಾಯಣ ಆಲಿಯಾಸ್ ಸ್ಯಾಮ್ ಏನಿದು ಅವಸ್ಥೆ!
    • 3
      ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
    • 4
      ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
    • 5
      ಇಂಟರ್ ಲಾಕಿಂಗ್ ಕೇಂದ್ರ ಸ್ಥಾನ ಪಶ್ಚಿಮ ಬಂಗಾಲದಲ್ಲಿ!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search