• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬೆಳಗಾವಿಯಲ್ಲಿ ಆದ್ದೂರಿಯಾಗಿ ಪ್ರಾರಂಭವಾದ ಶೋಭಾಯಾತ್ರೆ

TNN Correspondent Posted On September 10, 2017
0


0
Shares
  • Share On Facebook
  • Tweet It

Special Coverage from Belgavi:

ಕರ್ನಾಟಕದ ದಕ್ಷಿಣದ ಹೆಬ್ಬಾಗಿಲು ಮಂಗಳೂರಿನಿಂದ ಪ್ರಾರಂಭವಾದ ಯುವ ಬ್ರಿಗೇಡ್ ಸಮರ್ಪಿಸುವ ಸ್ವಾಮಿ ವಿವೇಕಾನಂದ ಅಕ್ಕ ನಿವೇದಿತಾ ಸಾಹಿತ್ಯ ಸಮ್ಮೇಳನ ರಾಜ್ಯದ ಮುಕುಟ ಬೆಳಗಾವಿಯಲ್ಲಿ ತನ್ನ ಸಮಾರೋಪ ಸಮಾರಂಭವನ್ನು ಕಾಣಲು ಕ್ಷಣಗಣನೆ ಆರಂಭವಾಗಿದೆ. ಬೆಳಿಗ್ಗೆ 9 ಗಂಟೆಗೆ ಬೆಳಗಾವಿಯಲ್ಲಿರುವ ಶ್ರೀ ರಾಮಕೃಷ್ಣಾಶ್ರಮದ ಉಪಕೇಂದ್ರದಿಂದ ಹೊರಟ ಅದ್ದೂರಿ ಶೋಭಾಯಾತ್ರೆಯ ಉದ್ಘಾಟನೆಯನ್ನು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೋ|ಕರಿಸಿದ್ದಪ್ಪ ನೆರವೇರಿಸಿದರು. ಅವರೊಂದಿಗೆ EX-ರಾಜ್ಯಸಭಾ ಸದಸ್ಯರೂ, ಸಮ್ಮೇಳನಾಧ್ಯಕ್ಷರೂ ಆಗಿರುವ ತರುಣ್ ವಿಜಯ್ ಹಾಗೂ ಶ್ರೀರಾಮಕೃಷ್ಣ ಆಶ್ರಮದ ಅನೇಕ ಸಂತರು ಭಾಗವಹಿಸಿದರು. ಯುವ ಬ್ರಿಗೇಡಿನ ಮಾರ್ಗದಶ್ಯಕ ಮತ್ತು ಪ್ರೇರಣಾ ಶಕ್ತಿಯಾಗಿರುವ ಚಕ್ರವರ್ತಿ ಸೂಲಿಬೆಲೆಯವರು ಮೆರವಣಿಗೆಯ ಉದ್ದಕ್ಕೂ ಯುವಕರಿಗೆ ಮಾರ್ಗದಶ್ಯನ ನೀಡುತ್ತಿದ್ದರು.
ಶೋಭಾಯಾತ್ರೆಯಲ್ಲಿ ಅಶ್ವಗಳೊಂದಿಗೆ ರಥದಲ್ಲಿ ವಿರಾಜಮಾನವಾಗಿರುವ ವಿವೇಕಾನಂದರ ಮೂರ್ತಿಯನ್ನು ಹೂಗಳಿಂದ ಸಿಂಗರಿಸಲಾಗಿತ್ತು. ಇನ್ನು ಪಲ್ಲಕ್ಕಿಯಲ್ಲಿ ವಿವೇಕಾನಂದ ಹಾಗೂ ನಿವೇದಿತಾ ಅವರ ಪುಸ್ತಕಗಳನ್ನು ಇಟ್ಟು ಅದನ್ನು ಯುವ ಬ್ರಿಗೇಡ್ ಕಾರ್ಯಕತ್ಥರು ಹೊತ್ತು ಸಾಗಿದರು. ಅದರೊಂದಿಗೆ ಉತ್ತರ ಕರ್ನಾಟಕದ ವೀರಗಾಸೆ, ಡೊಳ್ಳು ಕುಣಿತ ಸಹಿತ ಜಾನಪದ ಪ್ರದರ್ಶನ ಕೂಡ ನಡೆಯಿತು. ದಾರಿಯುದ್ದಕ್ಕೂ ಜನರು ವಿವೇಕಾನಂದರ ಮೂರ್ತಿಗೆ ಹೂವಿನ ಎಸಳುಗಳನ್ನು ಎಸೆಯುವ ಮೂಲಕ ಭಕ್ತಿ ಪೂರ್ವಕ ನಮನಗಳನ್ನು ಸಲ್ಲಿಸಿದರು.
ಬಹಳ ಅಚ್ಚುಕಟ್ಟಾಗಿ ನಡೆದ ಸಂಪೂರ್ಣ ಕಾರ್ಯಕ್ರಮದಲ್ಲಿ ಯುವ ಬ್ರಿಗೇಡಿನ ನೂರಾರು ಕಾರ್ಯಕತ್ಥರು ಶ್ವೇತ ವಸ್ತ್ರಧಾರಿಗಳಾಗಿ ಭಾಗವಹಿಸಿ ಶೋಭಾಯಾತ್ರೆಯ ಘನತೆಯನ್ನು ಮುಗಿಲೆತ್ತರಕ್ಕೆ ಏರಿಸಿದರು.

0
Shares
  • Share On Facebook
  • Tweet It


Vivekanadayuva brigade


Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
You may also like
ಸಾಮಾಜಿಕ ತಾಣಗಳ ಪತ್ರಕರ್ತರು ಮುಖ್ಯವಾಹಿನಿ ಪತ್ರಕರ್ತರ ಮುಖಕ್ಕೆ ಸತ್ಯ ತೋರಿಸಬೇಕು- ಬಗ್ಗಾ
September 10, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search