• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬೆಳಗಾವಿಯಲ್ಲಿ ಆದ್ದೂರಿಯಾಗಿ ಪ್ರಾರಂಭವಾದ ಶೋಭಾಯಾತ್ರೆ

TNN Correspondent Posted On September 10, 2017
0


0
Shares
  • Share On Facebook
  • Tweet It

Special Coverage from Belgavi:

ಕರ್ನಾಟಕದ ದಕ್ಷಿಣದ ಹೆಬ್ಬಾಗಿಲು ಮಂಗಳೂರಿನಿಂದ ಪ್ರಾರಂಭವಾದ ಯುವ ಬ್ರಿಗೇಡ್ ಸಮರ್ಪಿಸುವ ಸ್ವಾಮಿ ವಿವೇಕಾನಂದ ಅಕ್ಕ ನಿವೇದಿತಾ ಸಾಹಿತ್ಯ ಸಮ್ಮೇಳನ ರಾಜ್ಯದ ಮುಕುಟ ಬೆಳಗಾವಿಯಲ್ಲಿ ತನ್ನ ಸಮಾರೋಪ ಸಮಾರಂಭವನ್ನು ಕಾಣಲು ಕ್ಷಣಗಣನೆ ಆರಂಭವಾಗಿದೆ. ಬೆಳಿಗ್ಗೆ 9 ಗಂಟೆಗೆ ಬೆಳಗಾವಿಯಲ್ಲಿರುವ ಶ್ರೀ ರಾಮಕೃಷ್ಣಾಶ್ರಮದ ಉಪಕೇಂದ್ರದಿಂದ ಹೊರಟ ಅದ್ದೂರಿ ಶೋಭಾಯಾತ್ರೆಯ ಉದ್ಘಾಟನೆಯನ್ನು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೋ|ಕರಿಸಿದ್ದಪ್ಪ ನೆರವೇರಿಸಿದರು. ಅವರೊಂದಿಗೆ EX-ರಾಜ್ಯಸಭಾ ಸದಸ್ಯರೂ, ಸಮ್ಮೇಳನಾಧ್ಯಕ್ಷರೂ ಆಗಿರುವ ತರುಣ್ ವಿಜಯ್ ಹಾಗೂ ಶ್ರೀರಾಮಕೃಷ್ಣ ಆಶ್ರಮದ ಅನೇಕ ಸಂತರು ಭಾಗವಹಿಸಿದರು. ಯುವ ಬ್ರಿಗೇಡಿನ ಮಾರ್ಗದಶ್ಯಕ ಮತ್ತು ಪ್ರೇರಣಾ ಶಕ್ತಿಯಾಗಿರುವ ಚಕ್ರವರ್ತಿ ಸೂಲಿಬೆಲೆಯವರು ಮೆರವಣಿಗೆಯ ಉದ್ದಕ್ಕೂ ಯುವಕರಿಗೆ ಮಾರ್ಗದಶ್ಯನ ನೀಡುತ್ತಿದ್ದರು.
ಶೋಭಾಯಾತ್ರೆಯಲ್ಲಿ ಅಶ್ವಗಳೊಂದಿಗೆ ರಥದಲ್ಲಿ ವಿರಾಜಮಾನವಾಗಿರುವ ವಿವೇಕಾನಂದರ ಮೂರ್ತಿಯನ್ನು ಹೂಗಳಿಂದ ಸಿಂಗರಿಸಲಾಗಿತ್ತು. ಇನ್ನು ಪಲ್ಲಕ್ಕಿಯಲ್ಲಿ ವಿವೇಕಾನಂದ ಹಾಗೂ ನಿವೇದಿತಾ ಅವರ ಪುಸ್ತಕಗಳನ್ನು ಇಟ್ಟು ಅದನ್ನು ಯುವ ಬ್ರಿಗೇಡ್ ಕಾರ್ಯಕತ್ಥರು ಹೊತ್ತು ಸಾಗಿದರು. ಅದರೊಂದಿಗೆ ಉತ್ತರ ಕರ್ನಾಟಕದ ವೀರಗಾಸೆ, ಡೊಳ್ಳು ಕುಣಿತ ಸಹಿತ ಜಾನಪದ ಪ್ರದರ್ಶನ ಕೂಡ ನಡೆಯಿತು. ದಾರಿಯುದ್ದಕ್ಕೂ ಜನರು ವಿವೇಕಾನಂದರ ಮೂರ್ತಿಗೆ ಹೂವಿನ ಎಸಳುಗಳನ್ನು ಎಸೆಯುವ ಮೂಲಕ ಭಕ್ತಿ ಪೂರ್ವಕ ನಮನಗಳನ್ನು ಸಲ್ಲಿಸಿದರು.
ಬಹಳ ಅಚ್ಚುಕಟ್ಟಾಗಿ ನಡೆದ ಸಂಪೂರ್ಣ ಕಾರ್ಯಕ್ರಮದಲ್ಲಿ ಯುವ ಬ್ರಿಗೇಡಿನ ನೂರಾರು ಕಾರ್ಯಕತ್ಥರು ಶ್ವೇತ ವಸ್ತ್ರಧಾರಿಗಳಾಗಿ ಭಾಗವಹಿಸಿ ಶೋಭಾಯಾತ್ರೆಯ ಘನತೆಯನ್ನು ಮುಗಿಲೆತ್ತರಕ್ಕೆ ಏರಿಸಿದರು.

0
Shares
  • Share On Facebook
  • Tweet It


Vivekanadayuva brigade


Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
You may also like
ಸಾಮಾಜಿಕ ತಾಣಗಳ ಪತ್ರಕರ್ತರು ಮುಖ್ಯವಾಹಿನಿ ಪತ್ರಕರ್ತರ ಮುಖಕ್ಕೆ ಸತ್ಯ ತೋರಿಸಬೇಕು- ಬಗ್ಗಾ
September 10, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search