• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಂಗ್ರೆಸ್ ಸರಕಾರ ಕೊಲೆಗಳನ್ನು ಬಯಸುತ್ತಿದೆ, ವಿಚಾರವಾದಿಗಳಿಗೆ ಎಚ್ಚರ: ಕೆಪಿ ಶಶಿಕಲಾ

TNN Correspondent Posted On September 11, 2017


  • Share On Facebook
  • Tweet It

ಕೊಲ್ಲಂ: ಚುನಾವಣೆಗಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರವೇ ಕೊಲೆಗಳನ್ನು ಬಯಸುತ್ತಿದೆ. ಹುಸಿ ಜಾತ್ಯಾತೀತವಾದಿಗಳೇ ಎಚ್ಚರ ನಿಮ್ಮವರೇ ನಿಮ್ಮನ್ನು ಕೊಲ್ಲಬಹುದು. ಜೀವ ಉಳಿಸಿಕೊಳ್ಳಲು ಶಿವ ದೇವಾಲಯದಲ್ಲಿ ಮೃತ್ಯುಂಜಯ ಹೋಮ ಮಾಡಿ ಎಂದು ಕೇರಳದ ಹಿಂದೂ ಐಕ್ಯವಾದಿ ಸಂಘಟನೆ ಮುಖ್ಯಸ್ಥೆ, ಪ್ರಬಲ ಹಿಂದೂತ್ವವಾದಿ ಕೆ.ಪಿ.ಶಶಿಕಲಾ ಎಚ್ಚರಿಕೆ ನೀಡಿದ್ದಾರೆ.
ಬುದ್ದಿಜೀವಿಗಳೇ ಜೀವ ಉಳಿಸಿಕೊಳ್ಳುವ ಆಸೆಯಿದ್ದರೇ ಹಿಂದೂ ಶಿವ ದೇವಾಲಯದಲ್ಲಿ ಮೃತ್ಯುಂಜಯ ಹೋಮಮಾಡಿ. ಇಲ್ಲದಿದ್ದರೇ ನಿಮ್ಮವರೇ ನಿಮ್ಮನ್ನು ಕೊಲ್ಲಬಹುದು. ಕಾಂಗ್ರೆಸ್ ಸೋಲಿನ ಭೀತಿಯಲ್ಲಿ ಕೊಲೆಗಳು ಆಗುವುದನ್ನು ಬಯಸುತ್ತಿದೆ. ಅಲ್ಲದೇ ಗೌರಿ ಕೊಲೆಯಲ್ಲಿ ಅನುಕಂಪದ ವೋಟು ಪಡೆಯಲು ಕಾಂಗ್ರೆಸ್ ಹವಣಿಸುತ್ತಿದೆ. ಕೊಲೆಗಳನ್ನೇ ಬಂಡವಾಳ ಮಾಡಿಕೊಂಡು ಕಾಂಗ್ರೆಸ್ ಸರಕಾರ ಚುನಾವಣೆಯಲ್ಲಿ ವೋಟು ಪಡೆಯುವ ಉದ್ದೇಶ ಹೊಂದಿದೆ. ಗೌರಿಯಂತಹ ಸ್ವಾತಂತ್ರ್ಯ ಚಿಂತಕರು ತಮ್ಮ ಜೀವನ ಉಳಿಸಿಕೊಳ್ಳುವ ಆಸೆಯಿದ್ದರೇ ಹಿಂದೂ ದೇವರ ಮೊರೆಹೋಗಬೇಕು ಎಂದು ಹೇಳಿದ್ದಾರೆ.
ಆರ್‌ಎಸ್‌ಎಸ್ ಹಲವು ವಿರೋಧಗಳ ಮಧ್ಯೆ ವಿಶ್ವಾದ್ಯಂತ ಬೆಳೆಯುತ್ತಿದೆ. ವಿರುದ್ಧ ವಿಚಾರಧಾರೆಯವರ ಹತ್ಯಗಳನ್ನು ನಡೆಸಿ ಆರ್‌ಎಸ್‌ಎಸ್ ಬೆಳೆಸುವ ಗತಿ ಇಲ್ಲ. ಗೌರಿ ಲಂಕೇಶ್ ಜೀವನದ ಕೊನೆಯವರೆಗೂ ಬಲಪಂಥಿಯ ವಿಚಾರಧಾರೆಗಳನ್ನು ಕಟುವಾಗಿ ಟೀಕಿಸುತ್ತಿದ್ದರು. ಅವರ ಹತ್ಯೆಯಲ್ಲಿ ಬಲಪಂಥೀಯರ ಕೈವಾಡ ಇರಬಹುದು ಎಂಬ ಶಂಕೆ ಮೂಡುವುದು ಸಹಜ. ಆದರೆ ಅವರು ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಹೋಗಿ ಗೌರಿ ಲಂಕೇಶ ಅದೇ ಸಂಘಟನೆಯ ಕೆಲವರ ವಿರೋಧ ಕಟ್ಟಿಕೊಂಡಿದ್ದರ ಮಾಹಿತಿ ಇದೆ. ಅವರೂ ಈ ಕೊಲೆಗಳನ್ನು ಮಾಡಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಶಶಿಕಲಾ ಅವರ ಭಾಷಣ ಪ್ರಚೋದನಕಾರಿಯಾಗಿದೆ ಎಂದು ಪರವೂರ್ ಕಾಂಗ್ರೆಸ್ ಶಾಸಕ ವಿ.ಡಿ.ಸತೀಶನ್ ಪೊಲೀಸರಿಗೆ ದೂರು ನೀಡಿದ್ದು, ಶಶಿಕಲಾ ವಿರುದ್ಧ ಪ್ರಕರಣ ದಾಖಲಾಗಿದೆ.

  • Share On Facebook
  • Tweet It


- Advertisement -


Trending Now
ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
Tulunadu News February 6, 2023
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
Leave A Reply

  • Recent Posts

    • ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
  • Popular Posts

    • 1
      ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • 2
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 3
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search