• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಾಂಗ್ರೆಸ್ ಸರಕಾರ ಕೊಲೆಗಳನ್ನು ಬಯಸುತ್ತಿದೆ, ವಿಚಾರವಾದಿಗಳಿಗೆ ಎಚ್ಚರ: ಕೆಪಿ ಶಶಿಕಲಾ

TNN Correspondent Posted On September 11, 2017
0


0
Shares
  • Share On Facebook
  • Tweet It

ಕೊಲ್ಲಂ: ಚುನಾವಣೆಗಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರವೇ ಕೊಲೆಗಳನ್ನು ಬಯಸುತ್ತಿದೆ. ಹುಸಿ ಜಾತ್ಯಾತೀತವಾದಿಗಳೇ ಎಚ್ಚರ ನಿಮ್ಮವರೇ ನಿಮ್ಮನ್ನು ಕೊಲ್ಲಬಹುದು. ಜೀವ ಉಳಿಸಿಕೊಳ್ಳಲು ಶಿವ ದೇವಾಲಯದಲ್ಲಿ ಮೃತ್ಯುಂಜಯ ಹೋಮ ಮಾಡಿ ಎಂದು ಕೇರಳದ ಹಿಂದೂ ಐಕ್ಯವಾದಿ ಸಂಘಟನೆ ಮುಖ್ಯಸ್ಥೆ, ಪ್ರಬಲ ಹಿಂದೂತ್ವವಾದಿ ಕೆ.ಪಿ.ಶಶಿಕಲಾ ಎಚ್ಚರಿಕೆ ನೀಡಿದ್ದಾರೆ.
ಬುದ್ದಿಜೀವಿಗಳೇ ಜೀವ ಉಳಿಸಿಕೊಳ್ಳುವ ಆಸೆಯಿದ್ದರೇ ಹಿಂದೂ ಶಿವ ದೇವಾಲಯದಲ್ಲಿ ಮೃತ್ಯುಂಜಯ ಹೋಮಮಾಡಿ. ಇಲ್ಲದಿದ್ದರೇ ನಿಮ್ಮವರೇ ನಿಮ್ಮನ್ನು ಕೊಲ್ಲಬಹುದು. ಕಾಂಗ್ರೆಸ್ ಸೋಲಿನ ಭೀತಿಯಲ್ಲಿ ಕೊಲೆಗಳು ಆಗುವುದನ್ನು ಬಯಸುತ್ತಿದೆ. ಅಲ್ಲದೇ ಗೌರಿ ಕೊಲೆಯಲ್ಲಿ ಅನುಕಂಪದ ವೋಟು ಪಡೆಯಲು ಕಾಂಗ್ರೆಸ್ ಹವಣಿಸುತ್ತಿದೆ. ಕೊಲೆಗಳನ್ನೇ ಬಂಡವಾಳ ಮಾಡಿಕೊಂಡು ಕಾಂಗ್ರೆಸ್ ಸರಕಾರ ಚುನಾವಣೆಯಲ್ಲಿ ವೋಟು ಪಡೆಯುವ ಉದ್ದೇಶ ಹೊಂದಿದೆ. ಗೌರಿಯಂತಹ ಸ್ವಾತಂತ್ರ್ಯ ಚಿಂತಕರು ತಮ್ಮ ಜೀವನ ಉಳಿಸಿಕೊಳ್ಳುವ ಆಸೆಯಿದ್ದರೇ ಹಿಂದೂ ದೇವರ ಮೊರೆಹೋಗಬೇಕು ಎಂದು ಹೇಳಿದ್ದಾರೆ.
ಆರ್‌ಎಸ್‌ಎಸ್ ಹಲವು ವಿರೋಧಗಳ ಮಧ್ಯೆ ವಿಶ್ವಾದ್ಯಂತ ಬೆಳೆಯುತ್ತಿದೆ. ವಿರುದ್ಧ ವಿಚಾರಧಾರೆಯವರ ಹತ್ಯಗಳನ್ನು ನಡೆಸಿ ಆರ್‌ಎಸ್‌ಎಸ್ ಬೆಳೆಸುವ ಗತಿ ಇಲ್ಲ. ಗೌರಿ ಲಂಕೇಶ್ ಜೀವನದ ಕೊನೆಯವರೆಗೂ ಬಲಪಂಥಿಯ ವಿಚಾರಧಾರೆಗಳನ್ನು ಕಟುವಾಗಿ ಟೀಕಿಸುತ್ತಿದ್ದರು. ಅವರ ಹತ್ಯೆಯಲ್ಲಿ ಬಲಪಂಥೀಯರ ಕೈವಾಡ ಇರಬಹುದು ಎಂಬ ಶಂಕೆ ಮೂಡುವುದು ಸಹಜ. ಆದರೆ ಅವರು ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಹೋಗಿ ಗೌರಿ ಲಂಕೇಶ ಅದೇ ಸಂಘಟನೆಯ ಕೆಲವರ ವಿರೋಧ ಕಟ್ಟಿಕೊಂಡಿದ್ದರ ಮಾಹಿತಿ ಇದೆ. ಅವರೂ ಈ ಕೊಲೆಗಳನ್ನು ಮಾಡಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಶಶಿಕಲಾ ಅವರ ಭಾಷಣ ಪ್ರಚೋದನಕಾರಿಯಾಗಿದೆ ಎಂದು ಪರವೂರ್ ಕಾಂಗ್ರೆಸ್ ಶಾಸಕ ವಿ.ಡಿ.ಸತೀಶನ್ ಪೊಲೀಸರಿಗೆ ದೂರು ನೀಡಿದ್ದು, ಶಶಿಕಲಾ ವಿರುದ್ಧ ಪ್ರಕರಣ ದಾಖಲಾಗಿದೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search