ಲಿಂಗಾಯತ-ವೀರಶೈವ ಒಂದೇ ಎಂದ ಸಿದ್ಧಗಂಗಾ ಶ್ರೀ, ಸಚಿವ ಎಂ.ಬಿ. ಪಾಟೀಲ್ಗೆ ಹಿನ್ನಡೆ
Posted On September 12, 2017
0
ತುಮಕೂರು: ಸಿದ್ಧಗಂಗಾ ಶ್ರೀ ಅವರ ಹೇಳಿಕೆ ತಿರುಚಿ ಅದನ್ನೇ ರಾಜಕೀಯ ದಾಳವನ್ನಾಗಿಸಿಕೊಂಡು ಪ್ರತ್ಯೇಕ ಲಿಂಗಾಯತ ಧರ್ಮ ಮಾಡಲು ಹೊರಟಿದ್ದ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ಗೆ ಹಿನ್ನಡೆಯಾಗಿದ್ದು, ‘ಲಿಂಗಾಯತ-ವೀರಶೈವ ಒಂದೇ’ ಎಂದು ತುಮಕೂರಿನ ಸಿದ್ಧಗಂಗಾ ಶ್ರೀ ಹೇಳಿದ್ದಾರೆ.
‘ಲಿಂಗಾಯತ ಹಾಗೂ ವೀರಶೈವ ಎರಡೂ ಒಂದೇ. ಹಾಗಾಗಿ ಒಡೆಯುವ ಕೆಲಸ ಮಾಡಬೇಡಿ’ ಎಂದು ಡಾ.ಶಿವಕುಮಾರ ಸ್ವಾಮೀಜಿ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.
ಇದರಿಂದ ‘ಸಿದ್ಧಗಂಗಾ ಶ್ರೀಗಳೇ ಪ್ರತ್ಯೇಕ ಧರ್ಮದ ಪರ ನಿಂತಿದ್ದಾರೆ. ಹಾಗಾಗಿ ಧರ್ಮ ಮಾಡಿಯೇ ಸಿದ್ಧ’ ಹೊರಟಿದ್ದ ಸಚಿವ ಎಂ.ಬಿ. ಪಾಟೀಲ್ಗೆ ಭಾರಿ ಮುಖಭಂಗವಾಗಿದೆ. ಅಲ್ಲದೆ ಶಿವಕುಮಾರ ಸ್ವಾಮೀಜಿ ಹೇಳಿಕೆ ತಿರುಚಿದ ಆರೋಪವೂ ಕೇಳಿಬಂದಿದೆ.
Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
January 28, 2026









