• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಐಸಿಸ್ ನೆಂಟರಿದಂದ ಲಂಡನ್ ರೈಲು ಸುರಂಗಮಾರ್ಗದಲ್ಲಿ ಸ್ಫೋಟ!

TNN Correspondent Posted On September 16, 2017
0


0
Shares
  • Share On Facebook
  • Tweet It

ಲಂಡನ್ : ಸುರಂಗಮಾರ್ಗವಾಗಿ ಸಂಚರಿಸುತ್ತಿದ್ದ ರೈಲೊಂದರಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಹಠಾತ್ತನೆ ಬೆಂಕಿ ಕಾಣಿಸಿಕೊಂಡು 29ಕ್ಕೂ ಅಧಿಕ ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿರುವ ಘಟನೆ ಲಂಡನ್ ನಗರದ ಪಾರ್ಸನ್ಸ್ ಗ್ರೀನ್ ಅಂಡರ್‍ಗ್ರೌಂಡ್ ಸ್ಟೇಷನ್‍ನಲ್ಲಿ ಸಂಭವಿಸಿದೆ. ಅಗ್ನಿ ದುರಂತವೆಂದೇ ಭಾವಿಸಾಲಗಿದ್ದ ಘಟನೆಯ ಪ್ರಾಥಮಿಕ ತನಿಖೆಯಲ್ಲಿ ಪ್ರಾಯೋಗಿಕ ಬಾಂಬ್‍ನಿಂದ ಸ್ಫೋಟಕ್ಕೆ ಯತ್ನಿಸಲಾಗಿತ್ತು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಲಂಡನ್ ಪೊಲೀಸರಿಗೆ ಹೊಗೆಯ ಹರಡುವಿಕೆಗೆ ಕಾರಣವಾದ ಸುಟ್ಟ ವಸ್ತುಗಳ ಜಾಗದಲ್ಲಿ ದೊರೆತ ಟೈಮರ್ ದೊರೆತಿದ್ದು ಇದು ಬಾಂಬ್ ಸ್ಫೋಟದ ಸಂಚು ಎಂದು ದೃಢಪಡಿಸಿದೆ. ಇಡೀ ದಿನ ಲಂಡನ್ ನಗರದಾದ್ಯಂತ ಆತಂಕದ ಛಾಯೆ ಕವಿದಿತ್ತು. ಬ್ರಿಟನ್ ಪ್ರಧಾನಿ ತೆರೇಸಾ ಮೇ ಘಟನೆಯನ್ನು ಖಂಡಿಸಿದ್ದು, “ಈ ಪ್ರಯತ್ನವನ್ನು ಗಂಭೀರವಾಗಿ ಪರಿಗಣಿಸಲೇಬೇಕು’ ಎಂದು ಎಚ್ಚರಿಸಿದ್ದಾರೆ. ಐಸಿಸ್ ಸಂಘಟನೆ ಶುಕ್ರವಾರ ಸಂಜೆ ವೇಳೆಗೆ ತನ್ನ ಮುಖವಾಣಿ ಅಮಾಕ್‍ನಲ್ಲಿ “ಲಂಡನ್ ಸ್ಫೋಟಕ್ಕೆ ಕಾರಣವಾದವರು ಐಸಿಸ್‍ನೊಂದಿಗೆ ನಂಟು ಹೊಂದಿರುವವರು’ ಎಂದು ಘೋಷಿಸಿದೆ. ಜನಸಂದಣಿ ಹೆಚ್ಚಿರುವ ಸಂದರ್ಭವನ್ನೇ ಗುರಿಯಾಗಿಸಿ ಬೆಂಕಿಯ ಉಂಡೆಯನ್ನು ರೈಲಿನೊಳಗೆ ಹಾದುಹೋಗುವ ಟ್ಯೂಬ್‍ನೊಳಗೆ ಉರುಳಿ ಬಿಡಲಾಗಿದೆ. ಇದರಿಂದ ಹಬ್ಬಿದ ದಟ್ಟ ಹೊಗೆಯಿಂದಾಗಿ ಪ್ರಯಾಣಿಕರು ಉಸಿರಾಡಲು ಸಂಕಷ್ಟ ಪಡುವಂತಾಗಿದೆ. ಜತೆಗೆ ಬೋಗಿ ತುಂಬಾ ಶಾಖದ ಝಳಕ್ಕೆ ಮುಖವೆಲ್ಲಾ ಸುಟ್ಟಂತಾಗಿದೆ.

ಅಮೆರಿಕ ಅಧ್ಯಕ್ಷ ಟ್ರಂಪ್ ಘಟನೆ ಕುರಿತು ಆತುರದಲ್ಲಿ ಟ್ವೀಟ್ ಮಾಡಿ ಬ್ರಿಟಿಷರ ಕೆಂಗಣ್ಣಿಗೆ ಗುರಯಾಗಿದ್ದಾರೆ. ಟ್ವಿಟ್‍ನಲ್ಲಿ ಅವರು ” ಕಾನೂನು ಪಾಲಕರ ಎದುರಿಗೇ ಸ್ಫೋಟದ ರೂವಾರಿಗಳು ಓಡಾಡಿಕೊಂಡಿದರೂ ಮುನ್ನೆಚ್ಚರಿಕೆ ವಹಿಸದ ಫಲ ಈಗ ಲಂಡನ್ ಜನತೆ ಅನುಭವಿಸುವಂತಾಗಿದೆ’ ಎಂದು ನಿರ್ಣಯಕೊಟ್ಟಿದ್ದಾರೆ.

ಇದಕ್ಕೆ ಲಂಡನ್ ಪ್ರಧಾನಿ ಮೇ ಖಾರವಾಗಿಯೇ ಪ್ರತಿಕ್ರಿಯಿಸಿ, ” ತನಿಖೆ ಆರಂಭವಾಗಿರುವಾಗ ಅದರಲ್ಲಿ ಮೂಗು ತೂರಿಸಿ ತೀರ್ಪು ಕೊಡುವುದು ಯಾರಿಗೂ ಭೂಷಣವಲ್ಲ. ಈ ಹೇಡಿ ಕೃತ್ಯದ ತನಿಖೆಯನ್ನು ಶೀಘ್ರವಾಗಿ ಮುಗಿಸಿ ಆರೋಪಿಗಳನ್ನು ಪತ್ತೆಹಚ್ಚುತ್ತಾರೆ ಎಂಬ ನಂಬಿಕೆ ನನಗಿದೆ ” ಎಂದಿದ್ದಾರೆ.

0
Shares
  • Share On Facebook
  • Tweet It


attackbombiedisislondonmetrosubwaytrainunderground


Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
You may also like
ಕಣ್ಣೂರಿನಲ್ಲಿ ಬಾಂಬ್ ಸದ್ದು, ಜನರಕ್ಷಾ ಯಾತ್ರೆಗೆ ಬ್ರೇಕ್ ಹಾಕುವ ಪ್ಲಾನ್ !
October 9, 2017
ಅಮೆರಿಕ ಇತಿಹಾಸದಲ್ಲಿಯೇ ಭೀಕರ ಸಾಮೂಹಿಕ ನರಹತ್ಯೆ!
October 3, 2017
ಮಂಗಳೂರು ವಿಮಾನ ನಿಲ್ದಾಣದಲ್ಲಿ ಶಂಕಿತ ಬಾಂಬ್ ಪತ್ತೆ!
September 20, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search